ರಾಮನಗರ; ಸೇತುವೆ ಬಿದ್ದು 5 ತಿಂಗಳಾದರೂ ದುರಸ್ತಿಯೇ ಆಗಿಲ್ಲ
ರಾಮನಗರ, ಏಪ್ರಿಲ್ 04; ಕಳೆದ ಐದು ತಿಂಗಳ ಹಿಂದೆ ಬಿದ್ದ ಬಾರಿ ಮಳೆಗೆ ಕೊಚ್ಚಿಹೋದ ಸೇತುವೆಯನ್ನು ದುರಸ್ತಿ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದಾರೆ. ಮುರಿದ ಸೇತುವೆಯಲ್ಲೇ ಜನರು ಜೀವ ಕೈಯಲ್ಲಿ ಹಿಡಿದು ಸಂಚಾರ ಮಾಡುತ್ತಿದ್ದಾರೆ.
ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಜೋಗಿದೊಡ್ಡಿ ಗ್ರಾಮದ ಬಳಿ ಹಳ್ಳಕ್ಕೆ ನಿರ್ಮಾಣ ಮಾಡಲಾಗಿದ್ದ ಸೇತುವೆ ಮುರಿದು ಬಿದ್ದು 5 ತಿಂಗಳು ಕಳೆದಿದೆ. ಸೇತುವೆ ದುರಸ್ತಿ ಮಾಡದ ಕಾರಣ ಮುರಿದು ಬಿದ್ದಿರುವ ಸೇತುವೆ ಮೇಲೆಯೇ ವಾಹನ ಸವಾರರು ಸಂಚಾರ ನಡೆಸುತ್ತಿದ್ದಾರೆ.
2021ರ ನವೆಂಬರ್ನಲ್ಲಿ ಸುರಿದ ಬಾರಿ ಮಳೆಗೆ ಈ ಸೇತುವೆ ಮುರಿದು ಬಿದ್ದಿತ್ತು. ಮುರಿದು ಬಿದ್ದ ಸೇತುವೆಯನ್ನು ಮತ್ತೆ ನಿರ್ಮಾಣ ಮಾಡಬೇಕಾದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ಸೇತುವೆ ಪಕ್ಕದಲ್ಲೇ ಇದ್ದ ಜಮೀನಿನ ಮಾಲೀಕನ ಜೊತೆಗೆ ಒಪ್ಪಂದ ಮಾಡಿಕೊಂಡು ತಾತ್ಕಾಲಿಕವಾಗಿ ಓಡಾಟ ನಡೆಸುವ ರಸ್ತೆ ನಿರ್ಮಾಣ ಮಾಡಿ ಮುರಿದು ಬಿದ್ದ ಸೇತುವೆಯ ನಿರ್ಮಾಣದ ಕೆಲಸ ಮರೆತಿದ್ದಾರೆ.

"ಖಾಸಗಿ ಜಮೀನಿನಲ್ಲಿ ನಿರ್ಮಾಣ ಮಾಡಿದ್ದ ತಾತ್ಕಾಲಿಕ ರಸ್ತೆಯನ್ನು ಮುಚ್ಚಿರುವ ಕಾರಣ ಜನರು ಓಡಾಡಲು ರಸ್ತೆಯೇ ಇಲ್ಲದಂತಾಗಿ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೂ ತಂದರು ಯಾರು ಸ್ಪಂದನೆ ಮಾಡುತ್ತಿಲ್ಲ" ಎಂದು ಗ್ರಾಮದ ಜಗದೀಶ್ ಆರೋಪ ಮಾಡಿದ್ದಾರೆ.
ಜೋಗಿದೊಡ್ಡಿ ಸೇರಿದಂತೆ ಮಾಗಡಿ ಭಾಗದ ಸುಮಾರು 7 ರಿಂದ 8 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮುರಿದು ಬಿದ್ದು ಐದಾರು ತಿಂಗಳು ಕಳೆದಿದೆ. ಅಲ್ಲದೇ ಜೋಗಿದೊಡ್ಡಿ ಗ್ರಾಮದ ಜನರು ತಮ್ಮ ಜಮೀನುಗಳ ಬಳಿಗೆ ಹೋಗಲು ಹಾಗೂ ಜಾನುವಾರುಗಳಿಗೆ ಮೇವು ತರಲು 5-6 ಕಿಲೋಮೀಟರ್ ಸುತ್ತಿ ಬಳಸಿಕೊಂಡು ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸೇತುವೆ ಮುರಿದು ಬಿದ್ದಾಗ, ಮುರಿದ ಸೇತುವೆ ಪಕ್ಕದ ರೈತನ ಜಮೀನಿನಲ್ಲಿ ತಿಂಗಳ ಬಾಡಿಗೆ ರೂಪದಲ್ಲಿ ಹಣ ನೀಡುವುದಾಗಿ ಹೇಳಿ 12 ಲಕ್ಷ ಖರ್ಚು ಮಾಡಿ ತಾತ್ಕಾಲಿಕ ರಸ್ತೆ ನಿರ್ಮಾಣ ಮಾಡಿದರು. ಆದರೆ ಒಪ್ಪಂದದಂತೆ ಜಮೀನಿನ ಮಾಲೀಕನಿಗೆ ಅಧಿಕಾರಿಗಳು ಹಣ ಕೊಡದ ಹಿನ್ನೆಲೆಯಲ್ಲಿ ಜಮೀನು ಮಾಲೀಕ ತಾತ್ಕಾಲಿಕ ರಸ್ತೆಯನ್ನ ಕಿತ್ತು ಹಾಕಿದ್ದಾರೆ.
ಜಮೀನು ಮಾಲೀಕನೊಂದಿಗೆ ಚರ್ಚೆ ಮಾಡಿ ಮುಚ್ಚಿರುವ ತಾತ್ಕಾಲಿಕ ರಸ್ತೆಯನ್ನು ತೆರವು ಮಾಡಿಸಿ ಸಾರ್ವಜನಿಕರ ಓಡಾಟಕ್ಕೆ ಅನುವು ಮಾಡಿಕೊಡಬೇಕು ಹಾಗೂ ಮುರಿದು ಬಿದ್ದಿರುವ ಸೇತುವೆಯನ್ನು ನಿರ್ಮಾಣ ಮಾಡಬೇಕೆಂದು ಗ್ರಾಮಸ್ಥರು ಸರ್ಕಾರ ಹಾಗೂ ಸಂಬಂದಿಸಿದ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಒಟ್ಟಾರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಅಸಡ್ಡೆಯಿಂದ ಇಂದು 7-8 ಗ್ರಾಮದ ಜನರು ರಸ್ತೆಗಾಗಿ ಪರಿತಪಿಸುವಂತಾಗಿದೆ. ಇನ್ನಾದರೂ ಅಧಿಕಾರಿಗಳು ಹೊಸ ಸೇತುವೆ ನಿರ್ಮಾಣಮಾಡಿ ಜೋಗಿದೊಡ್ಡಿ ಸೇರಿದಂತೆ ಹತ್ತಾರು ಹಳ್ಳಿಯ ಗ್ರಾಮಸ್ಥರ ಬವಣೆ ತಪ್ಪಿಸಬೇಕಿದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications