CN Ashwath Narayan: ಪದ್ಮನಾಭನಗರ, ಕನಕಪುರದಲ್ಲಿ ಯಾರೇ ಬಂದರೂ ಆರ್.ಅಶೋಕ್ ಮಣಿಸಲು ಸಾಧ್ಯವಿಲ್ಲ
ರಾಮನಗರ, ಏಪ್ರಿಲ್, 20: ರಾಜ್ಯ ವಿಧಾನಸಭೆ ಚುನಾವಣ ಕಣ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ. ಮತ್ತೊಂದೆಡೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಗಳು ಆಗುತ್ತಲೇ ಇವೆ. ಹಾಗೆಯೇ ಪದ್ಮನಾಭ ನಗರದಲ್ಲಿ ಆರ್.ಆಶೋಕ್ ವಿರುದ್ಧ ಯಾರೇ ಬಂದರೂ ಸ್ವಾಗತ, ಪದ್ಮನಾಭ ನಗರ ಹಾಗೂ ಕನಕಪುರ ಎರಡೂ ಕ್ಷೇತ್ರಗಳಲ್ಲೂ ಆರ್.ಆಶೋಕ್ಗೆ ಗೆಲುವು ಖಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್ ಆಶ್ವತ್ಥ್ ನಾರಾಯಣ್ ಭವಿಷ್ಯ ನುಡಿದರು.
ರಾಮನಗರದ ಬಿಜೆಪಿ ಅಭ್ಯರ್ಥಿ ಗೌತಮ್ ಗೌಡ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಡಾ.ಸಿ.ಎನ್.ಆಶ್ವತ್ಥ್ ನಾರಾಯಣ್, ಪದ್ಮನಾಭನಗರ ಕ್ಷೇತ್ರದಲ್ಲಿ ಸಂಸದ ಡಿ.ಕೆ.ಸುರೇಶ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಲು ಮುಂದಾಗಿರುವುದಕ್ಕೆ ಪ್ರತಿಕ್ರಿಯಿಸಿ, ಅದು ಅವರ ಪಕ್ಷಕ್ಕೆ ಬಿಟ್ಟ ವಿಚಾರವಾಗಿದೆ. ಪದ್ಮನಾಭನಾಗರಕ್ಕೆ ಯಾರು ಬೇಕಾದರೂ ಬರಬಹುದು ಸ್ವಾಗತಾರ್ಹ ಎಂದರು.

ಪದ್ಮನಾಭನಗರದಲ್ಲಿ ಪ್ರಜಾಪ್ರಭುತ್ವ ಉಳಿಸಬೇಕಾಗಿದೆ ಎಂದ ಡಿ.ಕೆ. ಸಹೋದರರ ಹೇಳಿಕೆಗೆ ಟಾಂಗ್ ಕೊಟ್ಟ ಸಚಿವ ಆಶ್ವತ್ಥ್ ನಾರಾಯಣ್, ಪ್ರಜಾಪ್ರಭುತ್ವ ಉಳಿಸಬೇಕಾಗಿರುವುದು ಪದ್ಮನಾಭನಗರದಲ್ಲಿ ಅಲ್ಲ. ಮೊದಲು ರಾಜ್ಯದಲ್ಲೇ ಹಿಂದುಳಿದ ತಾಲೂಕು ಎಂಬ ಪಟ್ಟಿ ಕಟ್ಟಿಕೊಂಡಿರುವ ಕನಕಪುರದಲ್ಲಿ ಅಭಿವೃದ್ಧಿಗಳು ಆಗಲಿ. ಹೀಗೆ ಪ್ರಜಾಪ್ರಭುತ್ವದ ಆಶಯಗಳನ್ನು ಉಳಿಸಬೇಕು ಅಂದರೆ ಆರ್.ಆಶೋಕ್ ಜಯಗಳಿಸಬೇಕು ಎಂದರು.
ಸಂವಿಧಾನ ಜನರಿಗೆ ಕೊಟ್ಟಿರುವ ಆಶೋತ್ತರಗಳನ್ನು ಉಳಿಸಿಕೊಳ್ಳಬೇಕು. ರಿಪಬ್ಲಿಕ್ ಆಪ್ ಕನಕಪುರ ಎಂಬ ವಾತವರಣದಿಂದ ಜನರನ್ನು ಹೊರಗಡೆ ತರಬೇಕು. ಕನಕಪುರದ ಜನರಿಗೆ ಸ್ವಾತಂತ್ರ್ಯ ಸಿಗಬೇಕು. ಕನಕಪುರ ಕ್ಷೇತ್ರದಲ್ಲಿ ಡಿ.ಕೆ.ಬ್ರದರ್ಸ್ಗೆ ಎಷ್ಟು ವಿರೋಧ ಇದೆ ಎಂಬುದು ಮೇ 13 ರಂದು ಬರುವ ಚುನಾವಣೆ ಫಲಿತಾಂಶದಲ್ಲಿ ಗೊತ್ತಾಗಲಿದೆ ಎಂದು ಹೇಳಿದರು.
ಸುದೀಪ್ ಬೆಂಬಲ ನಮಗೆ ಆಶಾದಾಯಕ
ಇನ್ನು ಚಿತ್ರನಟ ಸುದೀಪ್ ಸಿಎಂ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಅಶ್ವತ್ಥ್ ನಾರಾಯಣ್, ಸುದೀಪ್ ಅವರು ತಮ್ಮ ಸ್ವಹಿಚ್ಚೆಯಿಂದ ಬೊಮ್ಮಾಯಿ ಪರ ಕ್ಯಾಂಪೇನ್ ಮಾಡುತ್ತೇನೆ ಎಂದು ಹೇಳಿದ್ದಾರೆ. ಹೀಗೆ ಸುದೀಪ್ ಬೆಂಬಲ ನೀಡಿರುವುದು ನಮಗೆ ಆಶಾದಾಯಕವಾಗಿದೆ ಎಂದರು.
ಸುದೀಪ್ ಜೊತೆಗೆ ಅವರ ಅಪಾರ ಬೆಂಬಲಿಗರು ಕೂಡ ನಮ್ಮ ಪರವಾಗಿ ನಿಲ್ಲುತ್ತಿದ್ದಾರೆ. ಸುದೀಪ್ ವಿರುದ್ದ ಯಾರು ಕೂಡ ಟೀಕಿಸಬಾರದು. ಅವರು ಎಲ್ಲೆಲ್ಲಿ ಪ್ರಚಾರ ಮಾಡಬೇಕು ಎಂದುಕೊಂಡಿದ್ದಾರೆಯೋ ಅಲ್ಲೆಲ್ಲಾ ಪ್ರಚಾರ ಮಾಡುತ್ತಾರೆ. ಸುದೀಪ್ ಅವರ ಅಭಿಮಾನಿಗಳು ಕೂಡ ಎದರು ನೋಡುತ್ತಿದ್ದು, ಅಭಿಮಾನಿಗಳು ಸಹ ಬಿಜೆಪಿಯನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications