ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪರಮೇಶ್ವರ್‌ ಮೇಲೆ ಕೆಂಡಾಮಂಡಲವಾದ ರಾಮನಗರ ಕಾಂಗ್ರೆಸ್ ನಾಯಕರು

By Manjunatha
|
Google Oneindia Kannada News

ರಾಮನಗರ, ಜೂನ್ 05: ಕುಮಾರಸ್ವಾಮಿ ರಾಜಿನಾಮೆಯಿಂದ ತೆರವಾಗಿರುವ ರಾಮನಗರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಬಗ್ಗೆ ಪರಮೇಶ್ವರ್ ಆಡಿರುವ ಮಾತುಗಳು ರಾಮನಗರ ಕಾಂಗ್ರೆಸ್ ಮುಖಂಡರನ್ನು ಕೆರಳಿಸಿದೆ.

ಉಪಮುಖ್ಯಮಂತ್ರಿ ಪರಮೇಶ್ವರ್‌ ಮೇಲೆ ಇದೇ ವಿಷಯಕ್ಕೆ ಹರಿಹಾಯ್ದಿರುವ ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಸಿಎಂ ಲಿಂಗಪ್ಪ ಅವರು, 'ಪರಮೇಶ್ವರ್ ಅವರು ರಾಮನಗರವನ್ನು ಮಾರಲು ಹೊರಟಿದ್ದಾರೆ' ಎಂದಿದ್ದಾರೆ.

ಡಿಕೆಶಿ- ರೇವಣ್ಣ ಜಗಳ ಹತ್ತಲ್ಲ, ಹರಿಯಲ್ಲ ಏಕೆ? ಜ್ಯೋತಿಷ್ಯ ವಿಶ್ಲೇಷಣೆಡಿಕೆಶಿ- ರೇವಣ್ಣ ಜಗಳ ಹತ್ತಲ್ಲ, ಹರಿಯಲ್ಲ ಏಕೆ? ಜ್ಯೋತಿಷ್ಯ ವಿಶ್ಲೇಷಣೆ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರಿಗೆ ವಿಷ ಉಣ್ಣಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Ramanagar congress leaders upset upon DCM Parameshwar

ಪರಮೇಶ್ವರ್ ಅವರು ಕಾಂಗ್ರೆಸ್‌ ಅನ್ನು ದಿವಾಳಿ ಎಬ್ಬಿಸುವಲ್ಲಿ ನಿರತರಾಗಿದ್ದು ಅವರಿಗೆ ಉಪಮುಖ್ಯಮಂತ್ರಿ ಆಗಿದ್ದೇ ತೃಪ್ತಿ ತಂದಿದೆಯಂತೆ ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಮುಖ್ಯಮಂತ್ರಿ ಆಗಬೇಕು‌ ಎಂಬ ಗುರಿಯೇ ಇಲ್ಲ ಅವರಿಗೆ' ಎಂದು ಟೀಕಿಸಿದರು.

ಕಿರಿಯರಿಗೆ ಮಣೆ ಹಾಕುತ್ತಿರುವುದಕ್ಕೆ ಎಚ್‌.ಎಂ. ರೇವಣ್ಣ ಅಸಮಾಧಾನ ಕಿರಿಯರಿಗೆ ಮಣೆ ಹಾಕುತ್ತಿರುವುದಕ್ಕೆ ಎಚ್‌.ಎಂ. ರೇವಣ್ಣ ಅಸಮಾಧಾನ

ಡಿಕೆ ಶಿವಕುಮಾರ್‌ ಅವರಿಗೆ ಮಂತ್ರಿ ಸ್ಥಾನ ನಿರಾಕರಿಸುವ ತಾಕತ್ತು ಯಾರಿಗೂ ಇಲ್ಲ ಎಂದು ಗುಟುರು ಹಾಕಿದ ಅವರು, 'ಆದರೂ ಸಹ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಡಿಕೆಶಿ ಯಿಂದ ತಪ್ಪಿಸಲು ಒಳ ಸಂಚು ನಡೆಯುತ್ತಿದೆ' ಎಂದು ಅವರು ಹೇಳಿದರು.

ಕುಮಾರಸ್ವಾಮಿ ಅವರ ರಾಜಿನಾಮೆಯಿಂದ ತೆರವಾಗಿರುವ ರಾಮನಗರದಲ್ಲಿ ಉಪ-ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ ಎಂದು ಪರಮೇಶ್ವರ್ ಅವರು ಹೇಳಿದ್ದರು.

English summary
Ramanagar congress leaders upset upon Parameshwar. MLC Lingappa said Parameshwar destroying congress party. Parameshwar hinted that congress not contesting in Ramanagar by-election that's why leaders upset about Parameshwar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X