ಹೋಂ ಕ್ವಾರಂಟೇನ್ ಗಳಿಂದ ಗಂಟೆಗೊಂದು ಸೆಲ್ಫೀ; ರಾಮನಗರ ಡಿಸಿ ಸೂಚನೆ
ರಾಮನಗರ, ಏಪ್ರಿಲ್ 04: ಕೊರೊನಾ ವೈರಸ್ ಶಂಕಿತರಾಗಿ ಹೋಂ ಕ್ವಾರಂಟೈನ್ ನಲ್ಲಿರುವವರ ಮೇಲೆ ಸತತ ನಿಗಾವಹಿಸಲು ಪ್ರತಿ ಗಂಟೆಗೊಂದು ಸೆಲ್ಫಿ ಕ್ಲಿಕ್ಕಿಸಿ ಸರ್ಕಾರದ ಅಧಿಕೃತ ವೆಬ್ ಸೈಟ್ ಗೆ ಅಪ್ ಲೋಡ್ ಮಾಡಲು ರಾಮನಗರ ಜಲ್ಲಾಡಳಿತ ಸೂಚನೆ ನೀಡಿದೆ.
Recommended Video
ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ 14 ದಿನಗಳ ಕಾಲ ಹೋಂ ಕ್ವಾರಂಟೇನ್ ನಲ್ಲಿರುವವರು ಸೆಲ್ಫಿ ತೆಗೆದು ಸರ್ಕಾರದ ಅಧಿಕೃತ "Quarantine Watch" ಮೊಬೈಲ್ ಅಪ್ಲಿಕೇಷನ್ ಅನ್ನು ಡೌನ್ಲೋಡ್ ಮಾಡಿಕೊಂಡು ಸೆಲ್ಫಿ ಅಪ್ಲೋಡ್ ಮಾಡುವಂತೆ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಸೂಚನೆ ನೀಡಿದ್ದಾರೆ.
ಗೃಹ ನಿರ್ಬಂಧನೆಗೆ ಸೂಚಿಸಿರುವ ವ್ಯಕ್ತಿಗಳು ಕಡ್ಡಾಯವಾಗಿ ಪ್ರತಿ ಗಂಟೆಗೆ ಒಮ್ಮೆ ಸೆಲ್ಫಿ ತೆಗೆದು ಅಪ್ಲೋಡ್ ಮಾಡಬೇಕು. ಆದರೆ ರಾತ್ರಿ 9 ರಿಂದ ಬೆಳಿಗ್ಗೆ 7 ಗಂಟೆಯನ್ನು ನಿದ್ರಾ ಅವಧಿಯೆಂದು ಪರಿಗಣಿಸಿದೆ. ಈ ಅವಧಿಯನ್ನು ಹೊರತುಪಡಿಸಿ ಇನ್ನುಳಿದ ಅವಧಿಯಲ್ಲಿ ಪ್ರತಿ ಗಂಟೆಗೆ ಒಂದರಂತೆ ಒಟ್ಟು 14 ಸೆಲ್ಫಿಗಳನ್ನು ಅಪ್ಲೋಡ್ ಮಾಡುವುದು ಕಡ್ಡಾಯವಾಗಿರುತ್ತದೆ.

ಹೋಂ ಕ್ವಾರಂಟೈನ್ ನಲ್ಲಿರುವವರು ತೆಗೆದು ಕಳುಹಿಸುವ ಸೆಲ್ಫಿಗಳನ್ನು ಯಾವುದೇ ರೀತಿ ಸರ್ಕಾರ ಬಳಸಿಕೊಳ್ಳುವುದಿಲ್ಲ. ಸೆಲ್ಫಿಗಳ ಖಾಸಗಿತನವನ್ನು ಸರ್ಕಾರ ಗೌರವಿಸುತ್ತದೆ. ಹಾಗೆಯೇ ಅವುಗಳು ಸೋರಿಕೆಯಾಗದಂತೆ ಕ್ರಮವಹಿಸುತ್ತದೆ. ಒಂದು ವೇಳೆ ಆದೇಶವನ್ನು ಪಾಲಿಸದಿದ್ದರೆ ಅಂತಹವರನ್ನು ಹೋಂ ಕ್ವಾರಂಟೈನ್ ನಿಂದ ತೆಗೆದು ಮಾಸ್ ಕ್ವಾರಂಟೇನ್ ಗೆ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications