ಗಣೇಶ ಮೂರ್ತಿ ವಿಸರ್ಜನೆ ವೇಳೆ ಜನರೇಟರ್ ಗೆ ಸಿಲುಕಿ ಕತ್ತರಿಸಿದ ಯುವಕನ ಕೈ
ರಾಮನಗರ, ಸೆಪ್ಟೆಂಬರ್ 8: ಗಣಪತಿ ಮೂರ್ತಿ ವಿಸರ್ಜನೆ ವೇಳೆ ಜನರೇಟರ್ ಗೆ ಕೈ ಸಿಲುಕಿಕೊಂಡು, ಯುವಕನೊಬ್ಬನ ಕೈ ಕತ್ತರಿಸಿ ಹೋಗಿರುವ ಘಟನೆ ನಡೆದಿದೆ. ನಗರದ ಚಾಮುಂಡೇಶ್ವರಿ ಬಡಾವಣೆ ಅಮೃತ್ ಕೇಬಲ್ ಬಳಿ ಪ್ರತಿಷ್ಠಾಪಿಸಲಾಗಿದ್ದ ಮೂರ್ತಿಯನ್ನು ಶನಿವಾರ ರಾತ್ರಿ ವಿಸರ್ಜನೆ ಮಾಡುವ ವೇಳೆ ಈ ಘಟನೆ ನಡೆದಿದೆ.
ನರೇಂದ್ರ (24) ಕೈ ಕಳೆದುಕೊಂಡ ಯುವಕ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವು- ಬದುಕಿನ ನಡುವೆ ಯುವಕ ಹೋರಾಡುತ್ತಿದ್ದಾನೆ. ಯುವಕನ ಸ್ಥಿತಿ ನೋಡಿದರೆ ಎಂಥವರಿಗೂ ಹೃದಯ ಕಲುಕುವಂತೆ ಇದೆ.
ರಂಗರಾಯರದೊಡ್ಡಿ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ ಬಗ್ಗೆ ಪೊಲೀಸರು ಕೂಲಂಕಷವಾದ ತನಿಖೆ ನಡೆಸುತ್ತಿದ್ದು, ಕೆಲವರ ವಿಚಾರಣೆ ಕೂಡ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.
Comments
English summary
Narendra, Ramangar youth hand cut by generator during Ganesha idol immersion on Saturday.