ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗಣೇಶ ಮೂರ್ತಿ ವಿಸರ್ಜನೆ ವೇಳೆ ಜನರೇಟರ್ ಗೆ ಸಿಲುಕಿ ಕತ್ತರಿಸಿದ ಯುವಕನ ಕೈ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಸೆಪ್ಟೆಂಬರ್ 8: ಗಣಪತಿ ಮೂರ್ತಿ‌ ವಿಸರ್ಜನೆ ವೇಳೆ ಜನರೇಟರ್ ಗೆ ಕೈ ಸಿಲುಕಿಕೊಂಡು, ಯುವಕನೊಬ್ಬನ ಕೈ ಕತ್ತರಿಸಿ ಹೋಗಿರುವ ಘಟನೆ ನಡೆದಿದೆ. ನಗರದ ಚಾಮುಂಡೇಶ್ವರಿ ಬಡಾವಣೆ ಅಮೃತ್ ಕೇಬಲ್ ಬಳಿ ಪ್ರತಿಷ್ಠಾಪಿಸಲಾಗಿದ್ದ ಮೂರ್ತಿಯನ್ನು ಶನಿವಾರ ರಾತ್ರಿ‌ ವಿಸರ್ಜನೆ ಮಾಡುವ ವೇಳೆ ಈ ಘಟನೆ ನಡೆದಿದೆ.

ನರೇಂದ್ರ (24) ಕೈ ಕಳೆದುಕೊಂಡ ಯುವಕ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವು- ಬದುಕಿನ ನಡುವೆ ಯುವಕ ಹೋರಾಡುತ್ತಿದ್ದಾನೆ. ಯುವಕನ ಸ್ಥಿತಿ ನೋಡಿದರೆ ಎಂಥವರಿಗೂ ಹೃದಯ ಕಲುಕುವಂತೆ ಇದೆ.

Ramanagar Youth Lost His Hand While Ganesha Idol Immersion

ರಂಗರಾಯರದೊಡ್ಡಿ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ ಬಗ್ಗೆ ಪೊಲೀಸರು ಕೂಲಂಕಷವಾದ ತನಿಖೆ ನಡೆಸುತ್ತಿದ್ದು, ಕೆಲವರ ವಿಚಾರಣೆ ಕೂಡ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.

English summary
Narendra, Ramangar youth hand cut by generator during Ganesha idol immersion on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X