ರಾಮನಗರದತ್ತ ಸುಳಿಯದ ಬಿಜೆಪಿ ನಾಯಕರು: ಕಾರ್ಯಕರ್ತರು ಕಂಗಾಲು
ಬೆಂಗಳೂರು, ಅಕ್ಟೋಬರ್ 23: ವಿಧಾನಸಭಾ ಉಪ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದ ಅಭ್ಯರ್ಥಿ ಪರ ಬಿಜೆಪಿಯ ಯಾವುದೇ ಪ್ರಮುಖ ನಾಯಕರು ಇಲ್ಲಿಯವರೆಗೆ ಪ್ರಚಾರದಲ್ಲಿ ಭಾಗಿಯಾಗದಿರುವುದು ರಾಮನಗರದ ಬಿಜೆಪಿ ಕಾರ್ಯಕರ್ತರಲ್ಲಿ ತೀವ್ರ ಅಸಮಧಾನ ಮೂಡಿಸಿದೆ.
ಅಷ್ಟೇ ಅಲ್ಲ ರಾಮನಗರ ಕ್ಷೇತ್ರದಲ್ಲಿ ಬಿಜೆಪಿ ಕಣದಿಂದ ಹಿಂದೆ ಸರಿದಿದೆಯೇ ಎಂಬ ಆತಂಕ ಕೂಡ ಕಾರ್ಯಕರ್ತರಲ್ಲಿ ಮಡುಗಟ್ಟಿದೆ. ಇದಕ್ಕೆ ಸಾಕ್ಷಿಯೆಂಬಂತೆ ರಾಮನಗರ ವಿಧಾನಸಭಾ ಕ್ಷೇತ್ರ ಉಸ್ತುವಾರಿಗಳೂ ಸೇರಿದಂತೆ ರಾಜ್ಯದ ಯಾವುದೇ ಬಿಜೆಪಿ ನಾಯಕರು ಇಲ್ಲಿಯವರೆಗೆ ಕ್ಷೇತ್ರಕ್ಕೆ ಕಾಲಿಡದಿರುವುದು ಬಿಜೆಪಿಯು ಕಣದಲ್ಲಿ ಹಿಂದುಳಿಯಲು ಕಾರಣವಾಗಿದೆ.
ರಾಮನಗರದಲ್ಲಿ ಬಿಜೆಪಿ ಶಸ್ತ್ರತ್ಯಾಗ ಮಾಡುತ್ತದೆ ಎನ್ನುವ ಗುಮಾನಿ ಆರಂಭವಾಗಿದೆ. ನಾಮಪತ್ರ ಸಲ್ಲಿಸಿ ಹೋದ ಬಿಜೆಪಿ ಮುಖಂಡರು ನಾಪತ್ತೆಯಾಗಿದ್ದಾರೆ, ಬಿಜೆಪಿ ಅಭ್ಯರ್ಥಿ ಎಲ್ ಚಂದ್ರಶೇಖರ್, ಜಿಲ್ಲಾಧ್ಯಕ್ಷ ಎಂ ರುದ್ರೇಶ್ ಪ್ರಚಾರದಲ್ಲಿ ತೊಡಗಿದ್ದಾರೆ. ಕೆಲವೆಡೆ ಮಾತ್ರ ಪ್ರಚಾರ ನಡೆಸಿದ್ದು ಬಿಟ್ಟರೆ ಮತಬೇಟೆಯಲ್ಲಿ ನಿರುತ್ಸಾಹ ತೋರಿದ್ದಾರೆ.ನೆಪ ಮಾತ್ರಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆಯಾ ಬಿಜೆಪಿ ಎಂದು ಕೇಳುವಂತಾಗಿದೆ.

ಕೇಂದ್ರ ಸಚಿವ ಡಿವಿ ಸದಾನಂದಗೌಡರು ಚುನಾವಣಾ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ ಆದರೂ ಒಮ್ಮೆಯೂ ಅಲ್ಲಿಗೆ ಭೇಟಿ ನೀಡಿಲ್ಲ, ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಭರ್ಜರಿ ಪ್ರಚಾರದಲ್ಲಿ ತೊಡಗಿದೆ ಆದರೆ ಎದುರಾಳಿ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರ ಮುಂದೆ ನಿಲ್ಲಲು ಬಿಜೆಪಿ ಹಿಂದೇಟು ಹಾಕುತ್ತಿರವುದಕ್ಕೆ ಬಿಜೆಪಿ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications