ಸ್ವಾತಂತ್ರ್ಯ ಹೋರಾಟಗಾರರ ಕಾಲಿಗೆ ನಮಸ್ಕರಿಸಿ ಗೌರವ ಸಲ್ಲಿಸಿದ ರಾಮನಗರ ಜಿಲ್ಲಾಧಿಕಾರಿ
ರಾಮನಗರ, ಆಗಸ್ಟ್ 14: ಸುಮಾರು 200 ವರ್ಷಗಳ ಬ್ರಿಟಿಷರ ಆಳ್ವಿಕೆಯನ್ನು ಹೊಗಲಾಡಿಸಲು ಅಖಂಡ ಭಾರತದಲ್ಲಿ ಹಲವು ಹೋರಾಟಗಳು, ಸತ್ಯಾಗ್ರಹಗಳು ನಡೆದವು. ಲಕ್ಷಾಂತರ ಜನರು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನಗನ್ನು ಮಾಡಿದರು. ಅದರ ಫಲವಾಗಿ ಆಗಸ್ಟ್ 15, 1947 ರಂದು ಭಾರತಕ್ಕೆ ಬ್ರಿಟಿಷರಿಂದ ಮುಕ್ತಿ ದೊರಕಿತು.
ಹಲವು ಸಭೆ, ಚರ್ಚೆಗಳ ನಂತರ ಅಖಂಡ ಭಾರತವನ್ನು ಭಾರತ ಮತ್ತು ಪಾಕಿಸ್ತಾನವನ್ನಾಗಿ ತುಂಡರಿಸಿ, ಸ್ವಾತ್ರಂತ್ರ್ಯ ನೀಡಲಾಯಿತು. ಅಂದಿನಿಂದ ಭಾರತ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನವನ್ನಾಗಿ ಆಚರಿಸಿಕೊಳ್ಳುತ್ತಿದೆ.
75ನೇ ಸ್ವಾತಂತ್ರ್ಯೋತ್ಸವ ಹಾಗೂ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರದ ನಿರ್ದೇಶನದಂತೆ ರಾಮನಗರ ಜಿಲ್ಲೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸುವ ಮೂಲಕ ಸ್ವಾತಂತ್ರ್ಯ ಹೋರಾಟಗಾರನ್ನು ಗೌರವಿಸಲಾಯಿತು.

ಕನಕಪುರ ತಾಲ್ಲೂಕಿನ ಇಬ್ಬರು ಹಿರಿಯ ಸ್ವಾತಂತ್ರ ಹೋರಾಟಗಾರರಾದ ಎಂ.ಎಸ್. ಕರಿಯಪ್ಪ, ಮತ್ತು ಎನ್. ಲಿಂಗಯ್ಯರ ಮನೆಗೆ ರಾಮನಗರ ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್ ಕುಮಾರ್ ತೆರಳಿ ಜಿಲ್ಲಾಡಳಿತದ ವತಿಯಿಂದ ಶಾಲು ಹೊದಿಸಿ, ಫಲ ತಾಂಬೂಲ ನೀಡಿ ಸ್ವಾತಂತ್ರ್ಯ ಹೋರಾಟಗಾರರ ಕಾಲಿಗೆ ನಮಿಸಿ, ಗೌರವಿಸಿದರು.
ಸ್ವಾತಂತ್ರ್ಯ ಹೋರಾಟಗಾರರ ಮನೆಯಲ್ಲಿ ಕುಳಿತು ಅವರ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಸ್ವಾತಂತ್ರ್ಯ ಚಳವಳಿಯಲ್ಲಿ ಪಾಲ್ಗೊಂಡ ಅನುಭವ ಕುರಿತ ಮಾತುಗಳನ್ನು ಆಲಿಸಿದರು.
ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಜನರ ಪ್ರತಿಕ್ರಿಯೆ, ಚಳವಳಿ ಕಾವು, ಸೆರೆವಾಸ, ಅಂದಿನ ಪರಿಸ್ಥಿತಿ, ಜೀವನಶೈಲಿ, ಸಿಗುತ್ತಿದ್ದ ಸೌಲಭ್ಯಗಳು, ಸ್ವಾತಂತ್ರ್ಯದ ನಂತರ ಆದ ಬದಲಾವಣೆಗಳು ಕುರಿತು ಸ್ವಾತಂತ್ರ ಹೋರಾಟಗಾರರು ತಮ್ಮ ಅನುಭವವನ್ನು ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್ ಕುಮಾರ್ ಸ್ವಾತಂರತ್ರ್ಯ ಹೋರಾಟಗಾರೊಂದಿಗೆ ಮೆಲುಕು ಹಾಕಿದರು.

ಸ್ವಾತಂತ್ರ್ಯ ಹೋರಾಟಗಾರರು ವಿದ್ಯಾರ್ಥಿ ದೆಸೆಯಿಂದಲೇ ಸ್ವಾತಂತ್ರ್ಯ ಚಳವಳಿಗೆ ತಾವು ಧುಮುಕಿದ ಬಗ್ಗೆ, ಜೈಲು ವಾಸದಲ್ಲಿ ಅನುಭವಿಸಿದ ಕಷ್ಟಗಳನ್ನು, ಒಂದೇ ಕೊಠಡಿಯಲ್ಲಿ ಹೆಚ್ಚಿನ ಜನರನ್ನು ಬಂಧಿಸಿದಾಗ ಉಸಿರಾಡಲು ಕಷ್ಟ ಪಟ್ಟ ಅನುಭವವನ್ನು ವಿಸ್ತಾರವಾಗಿ ವಿವರಿಸಿದರು. ಹೋರಾಟದ ಕಿಚ್ಚು ಕಾರಣವಾಗಲು ಪ್ರೇರೇಪಿತವಾದ ಸಂಗತಿಗಳ ಬಗ್ಗೆಯೂ ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಟ್ಟರು.
ಸ್ವಾತಂತ್ರ್ಯ ಸಂಗ್ರಾಮದ ರಾಮನಗರ ಜಿಲ್ಲೆಯ ಹೋರಾಟದ ನೇತಾರರು ಹಂಚಿಕೊಂಡ ಅನುಭವದ ನುಡಿಗಳನ್ನು ಆಲಿಸಿದ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್ ಕುಮಾರ್ ನಿಮ್ಮ ಅನುಭವವೇ ನಮ್ಮೆಲ್ಲರಿಗೂ ಸ್ಪೂರ್ತಿ, ನಿಮ್ಮ ಜೀವನ ಮೌಲ್ಯ ಆದರ್ಶಗಳು ಎಲ್ಲರಿಗೂ ಮುನ್ನೆಡೆಯಲು ಸಹಕಾರಿಯಾಗಿದೆ ಎಂದರು.

ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದ್ದು, ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಮಾಡಲಾಗುತ್ತಿದೆ. ಇಂತಹ ಅಮೂಲ್ಯ ವಿಶೇಷ ಸಂದರ್ಭದ ಆಚರಣೆಯಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಜಿಲ್ಲೆಯ ಹಿರಿಯ ಚೇತನ ಹೋರಾಟಗಾರರನ್ನು ಸನ್ಮಾನಿಸಿ ಗೌರವಿಸುವುದು ಸರ್ಕಾರದ ಉದ್ದೇಶವಾಗಿದೆ.
ಸಾರ್ವಜನಿಕರು ಪ್ರತಿದಿನ ತಮ್ಮ ಸ್ವಂತ ಕೆಲಸದಲ್ಲಿ ತೊಡಗಿಕೊಂಡಿರುತ್ತಾರೆ. ತಿಂಗಳಲ್ಲಿ ಒಂದು ಎರಡು ದಿನ ಸಮಾಜಕ್ಕೆ ಕೊಡುಗೆ ನೀಡಬೇಕು. ಸಸಿ ನೆಡುವುದು, ಸ್ವಚ್ಛತೆಯಲ್ಲಿ ಭಾಗವಹಿಸುವುದು ಮುಂತಾದ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಳ್ಳಬೇಕು ಎಂದು ಯುವ ಜನತೆಗೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಕರೆ ನೀಡಿದರು.
ರಾಮನಗರ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸುವ ಸಂದರ್ಭದಲ್ಲಿ ಕನಕಪುರ ತಹಶೀಲ್ದಾರ ವಿಶ್ವನಾಥ್ ಉಪಸ್ಥಿತರಿದ್ದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications