ರಾಮನಗರ ದಿಶಾ ಮೀಟಿಂಗ್: ಶಾಸಕರು, ಜಿಲ್ಲಾಧಿಕಾರಿ ನಡುವೆ ವಾಗ್ವಾದ
ಮಾಗಡಿ ಶಾಸಕ ಎ.ಮಂಜುನಾಥ್ ಹಾಗೂ ರಾಮನಗರ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ನಡುವಿನ ಮಾತಿನ ಜಟಾಪಟಿಗೆ ಜಿಲ್ಲಾ ಪಂಚಾಯಿತಿ ಭವನದಲ್ಲಿ ನಡೆದ ದಿಶಾ ಸಭೆ ಸಾಕ್ಷಿಯಾಯಿತು.
ರಾಮನಗರ, ಜನವರಿ 18: ಮಾಗಡಿ ಶಾಸಕ ಎ.ಮಂಜುನಾಥ್ ಹಾಗೂ ರಾಮನಗರ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ನಡುವಿನ ಮಾತಿನ ಜಟಾಪಟಿಗೆ ಜಿಲ್ಲಾ ಪಂಚಾಯಿತಿ ಭವನದಲ್ಲಿ ನಡೆದ ದಿಶಾ ಸಭೆ ಸಾಕ್ಷಿಯಾಯಿತು.
ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ನೇತೃತ್ವದಲ್ಲಿ ರಾಮನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರೆದಿದ್ದ ದಿಶಾ ಸಭೆಯಲ್ಲಿ ಶಾಸಕರು ಮತ್ತು ಜಿಲ್ಲಾಧಿಕಾರಿಗಳ ನಡುವೆ ಮಾತಿನ ಸಮರವೇ ನಡೆಯಿತು.
ಜಿಲ್ಲೆಯಲ್ಲಿ ಜನಪ್ರತಿನಿಧಿಗಳನ್ನ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಆರೋಪಮಾಡಿ ಶಾಸಕ ಎ.ಮಂಜುನಾಥ್ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಮೇಲೆ ಗರಂ ಆದರು.ಮಾಗಡಿ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಯಾವ ಮಾಹಿತಿಯೂ ಕೊಡಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಾಲಗಂಗಾಧರನಾಥ ಸ್ವಾಮೀಜಿಯವರ ಹುಟ್ಟೂರು ಬಾನಂದೂರು ಮತ್ತು ಶಿವಕುಮಾರ ಸ್ವಾಮೀಜಿಯವರ ಹುಟ್ಟೂರು ವೀರಾಪುರ ಈ ಎರಡೂ ಗ್ರಾಮಗಳಿಗೆ ಭೇಟಿ ಕೊಟ್ಟಾಗ ಕ್ಷೇತ್ರದ ಶಾಸಕರಿಗೆ ಮಾಹಿತಿ ನೀಡಿಲ್ಲ ಎಂದು ಜಿಲ್ಲಾಧಿಕಾರಿ ವಿರುದ್ಧ ಕಿಡಿಕಾರಿದರು.
ನಮ್ಮ ಕ್ಷೇತ್ರಕ್ಕೆ ಬಂದಾಗ ಮಾಹಿತಿ ಕೊಡಿ, ನಿಮ್ಮ ಜೊತೆಯಲ್ಲಿ ಬೇರೆ ಯಾರೋ ಬರ್ತಾರೆ ಅವರ್ಯಾರು ಎಂದು ಪ್ರಶ್ನೆ ಮಾಡಿದ ಶಾಸಕ ಎ.ಮಂಜುನಾಥ್, ಈ ವೇಳೆ ಶಾಸಕರ ಪ್ರಶ್ನೆಗೆ ತಬ್ಬಿಬ್ಬಾದ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಸಭೆಯ ವೇದಿಕೆಯಲ್ಲೇ ಸಿಡಿಮಿಡಿಗೊಂಡು ತಮ್ಮ ಕೋಪ ವ್ಯಕ್ತಪಡಿಸಿದರು.

ಶಾಸಕ ಎ.ಮಂಜು ಅರೋಪಕ್ಕೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಸದ ಡಿ.ಕೆ.ಸುರೇಶ್ ರವರಿಗೆ ಸಬೂಬು ನೀಡಲು ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಮುಂದಾದರು.
ಆದರೆ ಡಿ.ಕೆ.ಸುರೇಶ್ ಅವರು, ಅಧಿಕಾರಿಗಳು ಕ್ಷೇತ್ರಕ್ಕೆ ಭೇಟಿ ಕೊಟ್ಟಾಗ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಬೇಕಾದ್ದು ನಿಮ್ಮ ಕರ್ತವ್ಯ, ಮುಂದೆ ಇಂತಹ ಪ್ರಕರಣ ಮರುಕಳಿಸದಂತೆ ಎಚ್ಚರ ವಹಿಸುವಂತೆ ಸಂಸದ ಸುರೇಶ್ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ರವರಿಗೆ ತಿಳಿ ಹೇಳಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications