ರಾಮನಗರ: ಕಷ್ಟದಲ್ಲಿದ್ದ ಜಾನಪದ ಕಲಾವಿದರಿಗೆ ದಿನಸಿ ಕಿಟ್ ವಿತರಣೆ
ರಾಮನಗರ, ಮೇ 30: ರಾಮನಗರದ ಜಾನಪದ ಲೋಕವು ಲಾಕ್ ಡೌನ್ ನಿಂದ ಸಂಕಷ್ಟದಲ್ಲಿದ್ದ ರಾಮನಗರ ಜಿಲ್ಲೆಯ ಜಾನಪದ ಕಲಾವಿದರಿಗೆ ದಿನಸಿ ಕಿಟ್ ವಿತರಿಸುವ ಮೂಲಕ ಕಲಾವಿದರ ನೆರವಿಗೆ ದಾವಿಸಿದೆ.
ಇಂದು ಜಾನಪದ ಲೋಕದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಮನಗರ ಜಿಲ್ಲೆಯ ನಾಲ್ಕು ತಾಲ್ಲೂಕುಗಳ ಸುಮಾರು 110 ಜನ ಜಾನಪದ ಕಲಾವಿದರಿಗೆ ದಿನಸಿ ಕಿಟ್ಗಳನ್ನು ವಿತರಿಸಿದರು. ರಾಜ್ಯದ ಬೇರೆ ಜಿಲ್ಲೆಗಳ ಜಾನಪದ ಕಲಾವಿದರಿಗೂ ದಿನಸಿ ಕಿಟ್ ವಿತರಣೆ ಮಾಡಲಾಗುವುದು ಎಂದು ಜಾನಪದ ಲೋಕ ಅಡಳಿತ ಮಂಡಳಿ ತಿಳಿಸಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಟಿ.ತಿಮ್ಮೇಗೌಡ ಅವರು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ಡೌನ್ ನಿಂದ ನಮ್ಮ ಬಡ ಜಾನಪದ ಕಲಾವಿದರು ಸಾಕಷ್ಟು ಕಷ್ಟವನ್ನು ಅನುಭವಿಸಿದ್ದಾರೆ ಎಂದು ಹೇಳಿದರು.

ಲಾಕ್ ಡೌನ್ ಘೋಷಣೆಯಾದ ನಂತರ ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ ರವಿ ಅವರನ್ನು ಸಂಪರ್ಕಿಸಿ ಜಾನಪದ ಕಲಾವಿದರಿಗೆ ಕನಿಷ್ಠ ಎರಡು ಸಾವಿರ ಸಹಾಯ ಧನ ನೀಡುವ ಮೂಲಕ ಸಹಾಯ ಹಸ್ತ ನೀಡಬೇಕು ವಿನಂತಿಸಿಕೊಂಡಿದ್ದೇವೆ ಎಂದರು.
ಅಲ್ಲದೇ ಟಿ.ಎಸ್ ನಾಗಾಭರಣ ಮತ್ತು ಕಪ್ಪಣ್ಣ ಹಾಗೂ ಇತರೆ ಪ್ರಮುಖರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಜಾನಪದ ಕಲಾವಿದರ ನೆರವಿಗೆ ದಾವಿಸುವಂತೆ ಒತ್ತಾಯಿಸಿದರು.
ಮುಖ್ಯಮಂತ್ರಿಗಳು ಕಲಾವಿದರ ನೆರವಿಗೆ ಎರಡು ಕೋಟಿ ರೂ. ಹಣ ಮುಂಜೂರು ಮಾಡಿದರು, ಅದರೆ ಮುಖ್ಯಮಂತ್ರಿಗಳ ಆದೇಶಕ್ಕೆ ಇನ್ನು ಹಣಕಾಸು ಇಲಾಖೆಯಿಂದ ಮುಕ್ತಿ ಸಿಕ್ಕಿಲ್ಲ. ಸದ್ಯದಲ್ಲೆ ಹಣ ಬಿಡುಗಡೆಯಾಗುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications