ರಾಮನಗರ ಮತಗಟ್ಟೆಗಳ ಬಳಿ ಬಿಗಿ ಪೊಲೀಸ್ ಬಂದೋಬಸ್ತ್
ಮೇ 11, ರಾಮನಗರ: ನಾಳೆ ನಡೆಯಲಿರುವ ಚುನಾವಣೆಗೆ ರಾಮನಗರ ಜಿಲ್ಲಾಡಳಿತ ಸಕಲ ರೀತಿಯಲ್ಲಿಯೂ ಸಜ್ಜಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು. ಜಿಲ್ಲೆಯ ಒಟ್ಟು ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಒಟ್ಟು 8,71,954 ಮತದಾರರಿದ್ದಾರೆ.
ಇದರಲ್ಲಿ 4,33,496 ಪುರುಷರು 4,38,390 ಮಹಿಳಾ ಮತದಾರರು ಹಾಗೂ ಇತರೆ 68 ಮತದಾರರು ನಾಳೆ ಮತದಾನ ಮಾಡಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1140 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಇವುಗಳಲ್ಲಿ 375 ಸೂಕ್ಷ್ಮ 225 ಅತಿ ಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ.
ಅತಿ ಸೂಕ್ಷ್ಮ ಮತಗಟ್ಟೆಗೆ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ ಮೈಕ್ರೋ ಅಬ್ಸರ್ವರ್ ಹಾಗೂ ವಿಡಿಯೋ ಕ್ಯಾಮರಾ ವ್ಯವಸ್ಥೆ ಕೂಡ ಮಾಡಲಾಗಿದೆ. ನಾಳಿನ ಚುನಾವಣಾ ಕರ್ತವ್ಯಕ್ಕೆ 7,410 ಸಿಬ್ಬಂದಿಗಳ ನಿಯೋಜನೆ ಮಾಡಿದ್ದು, ಬಹಳ ವಿಶೇಷವಾಗಿ ಮಹಿಳಾ ಸಿಬ್ಬಂದ್ದಿಗಳೇ ಇರುವ 15 ಪಿಂಕ್ ಮತಗಟ್ಟೆಗಳನ್ನು ಕೂಡ ಸ್ಥಾಪಿಸಲಾಗಿದೆ.

ಮತಗಟ್ಟೆಗೆ ಬರುವ ಅಂಗವಿಕಲರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವೀಲ್ ಚೇರ್ ವ್ಯವಸ್ಥೆ ಕೂಡ ಮಾಡಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲೆಯಾದ್ಯಂತ ಮುಂಜಾಗೃತ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಿದ್ದು, ಮತಗಟ್ಟೆಗಳ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಚುನಾವಣೆಗೆಂದೇ 9 ಕೇಂದ್ರ ಮಿಲಿಟರಿ ತುಕ್ಕಡಿಯ ಒಟ್ಟು 720 ಮಂದಿ ಮಿಲಿಟರಿ ಸಿಬ್ಬಂದಿಗಳನ್ನು ಕೂಡ ನಿಯೋಜಿಸಿಕೊಳ್ಳಲಾಗಿದೆ. ಇಂದು ಮತಗಟ್ಟೆಗಳಿಗೆ ನಿಯೋಜನೆಗೊಂಡಿರುವ ಸಿಬ್ಬಂದಿಗಳಿಗೆ ಆಯಾ ತಾಲೂಕು ಕೇಂದ್ರಗಳಲ್ಲಿ ತರಬೇತಿ ನೀಡಿ, ಸೂಕ್ತ ಭದ್ರತೆಯಲ್ಲಿ ಬಸ್ ಗಳ ಮೂಲಕ ಕಳುಹಿಸಿಕೊಡಲಾಗುವುದು ಎಂದು ರಾಜೇಂದ್ರ ಅವರು ಮಾಹಿತಿ ನೀಡಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications