ಕೊರೊನಾ ಸೋಂಕಿನಿಂದ ಡಿಕೆಶಿ ಗುಣಮುಖರಾಗಲಿ ಎಂದು ವಿಶೇಷ ಪೂಜೆ
ರಾಮನಗರ, ಆಗಸ್ಟ್ 28: ಮಹಾಮಾರಿ ಕೊರೊನಾ ಸೋಂಕಿಗೆ ತುತ್ತಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಶೀಘ್ರ ಗುಣಮುಖರಾಗುವಂತೆ ದರ್ಗಾ ಮತ್ತು ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
Recommended Video
ರಾಮನಗರ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಡಿ.ಕೆ ಶಿವಕುಮಾರ್ ಅಭಿಮಾನಿಗಳು ಮತ್ತು ಮುಸ್ಲಿಂ ಮುಖಂಡರು ನಗರದ ಫಿರನ್ಷಾ ವಾಲಿ ದರ್ಗಾ ಮತ್ತು ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಮೊದಲಿಗೆ ನಗರದ ಶಕ್ತಿ ದೇವತೆ ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, 101 ತೆಂಗಿನ ಕಾಯಿ ಒಡೆದು ಡಿಕೆಶಿಯವರು ಗುಣಮುಖರಾಗುವಂತೆ ಪ್ರಾರ್ಥನೆ ಸಲ್ಲಿಸಿದರು ನಂತರ ಇತಿಹಾಸ ಪ್ರಸಿದ್ಧ ದರ್ಗಾದಲ್ಲಿ ಮುಸ್ಲಿಂ ಮುಖಂಡರು ವಿಶೇಷ ಪ್ರಾರ್ಥನೆ ಸಲ್ಲಿಸಿ ಡಿಕೆಶಿಯವರ ಆರೋಗ್ಯ ನೀಡುವಂತೆ ಪ್ರಾರ್ಥನೆ ಸಲ್ಲಿಸಿದರು.

ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡರು, ದೇವಾಲಯ ಮತ್ತು ದರ್ಗಾಗಳಲ್ಲಿ ಪೂಜೆ ಸಲ್ಲಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೊರೊನಾ ಸೋಂಕಿನಿಂದ ಗುಣಮುಖರಾಗಲಿ ಹಾಗೂ ದೇಶವನ್ನು ಕಾಡುತ್ತಿರುವ ಕೊರೊನಾ ಸೋಂಕಿನ ಸಂಕಷ್ಟ ದೂರವಾಗಲಿ ಎಂದು ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದಾಗಿ ತಿಳಿಸಿದರು.












Click it and Unblock the Notifications