ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿತ್ಯಾನಂದ ಸ್ವಾಮಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಸೆಪ್ಟೆಂಬರ್.07: ರಾಮನಗರ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಬಿಡದಿ ನಿತ್ಯಾನಂದ ಸ್ವಾಮಿ ವಿರುದ್ಧ ಅತ್ಯಾಚಾರ ಹಾಗೂ ರಾಸಲೀಲೆ ಪ್ರಕರಣದ ವಿಚಾರಣೆ ಕೈಗೆತ್ತಿಗೊಂಡಿದ್ದು, ವಿಚಾರಣೆಗೆ ಹಾಜರಾಗದೆ ಪದೇ ಪದೆ ಗೈರಾಗುತ್ತಿರುವ ನಿತ್ಯಾನಂದ ಸ್ವಾಮಿ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.

ರಾಮನಗರ ಜಿಲ್ಲಾ ನ್ಯಾಯಲಯದ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶರಾದ ಗೋಪಾಲ್‌ಕೃಷ್ಣ ರೈ ಪೀಠ ವಾರೆಂಟ್ ಆದೇಶ ಹೊರಡಿಸಿದೆ. ಈಗಾಗಲೇ ಪ್ರಕರಣವನ್ನು ತ್ವರಿತಗತಿಯಲ್ಲಿ ಮುಗಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದರೂ ಸಹ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗದೆ ವಿಚಾರಣೆಗೆ ಹಿನ್ನಡೆ ಉಂಟು ಮಾಡುತ್ತಿದ್ದಾರೆಂದು ಸರ್ಕಾರಿ ಪರ ವಕೀಲ ವಡವಡಗಿ ಆಕ್ಷೇಪಣೆ ಸಲ್ಲಿಸಿದರು.

ರಾಮನಗರ ಕೋರ್ಟ್‌ಗೆ ಬಂದ ನಿತ್ಯಾನಂದ ಸ್ವಾಮಿ ರಾಮನಗರ ಕೋರ್ಟ್‌ಗೆ ಬಂದ ನಿತ್ಯಾನಂದ ಸ್ವಾಮಿ

ಇದನ್ನ ಮಾನ್ಯ ಮಾಡಿದ ನ್ಯಾಯಾಧೀಶರು ಮುಂದಿನ ವಿಚಾರಣೆಗೆ ಆರೋಪಿಗಳು ತಪ್ಪಿಸಿಕೊಳ್ಳದಂತೆ ಹಾಜರಾಗಲು ತಾಕೀತು ಮಾಡಿದರು. ನ್ಯಾಯಾಲಯದ ಎಚ್ಚರಿಕೆಯನ್ನು ಕಡೆಗಣಿಸಿ ನಿತ್ಯಾನಂದ ಕಳೆದ ಮೂರು ವಿಚಾರಣೆಗೆ ಹಾಜರಾಗಿರಲಿಲ್ಲ.

Ramanagara third additional district court issued a non-bailable warrant against Nityananda Swamy

ಇನ್ನು ನಿತ್ಯಾನಂದ ಸ್ವಾಮಿಯ ಮಾಜಿ ಕಾರು ಚಾಲಕ ಹಾಗೂ ಪ್ರಮುಖ ಸಾಕ್ಷಿ ಲೆನಿನ್ ಕುರುಪ್ಪನ್ ನ ವಿಚಾರಣೆ ವೇಳೆ ಹಾಜರಾಗಬೇಕಿದ್ದ ನಿತ್ಯಾನಂದ ಪ್ರಕರಣದ ವಿಚಾರಣೆಯನ್ನು ನಿಧಾನಗೊಳಿಸಲು ತಪ್ಪಿಸಿಕೊಂಡಿದ್ದರು.

ಮಧುರೈ ಅಧೀನಂ ಪೀಠ ಪ್ರವೇಶಿಸದಂತೆ ನಿತ್ಯಾನಂದ ಸ್ವಾಮೀಜಿಗೆ ತಡೆಮಧುರೈ ಅಧೀನಂ ಪೀಠ ಪ್ರವೇಶಿಸದಂತೆ ನಿತ್ಯಾನಂದ ಸ್ವಾಮೀಜಿಗೆ ತಡೆ

ನಿತ್ಯಾನಂದ ಗೈರಿನ ನಡುವೆ ಲೆನಿನ್ ವಿಚಾರಣೆಯನ್ನು ಎರಡು ದಿನ ಇನ್ ಕ್ಯಾಮೆರಾ ಪ್ರೊಸೆಡಿಂಗ್ ಮೂಲಕ ನಡೆಸಿ, ಮುಂದಿನ ವಿಚಾರಣೆಯನ್ನು ಇದೇ ಸೆಪ್ಟೆಂಬರ್ ತಿಂಗಳ 14ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

English summary
Ramanagara third additional district court issued a non-bailable warrant against Nityananda Swamy. Court issued a warrant for Nityananda Swamy for not appearing before the court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X