"ಅಪ್ಪ ಬೇಕು" ಎನ್ನುತ್ತಲೇ ತಂದೆ ಚಿತೆಗೆ ಅಗ್ನಿಸ್ಪರ್ಶ ಮಾಡಿದ ರಮೇಶ್ ಮಗ
ರಾಮನಗರ, ಅಕ್ಟೋಬರ್ 13: ಮಾಜಿ ಡಿಸಿಎಂ- ಕಾಂಗ್ರೆಸ್ ನಾಯಕ ಡಾ. ಜಿ. ಪರಮೇಶ್ವರ ಅವರ ಆಪ್ತ, ಆದಾಯ ತೆರಿಗೆ ಅಧಿಕಾರಿಗಳ ದಾಳಿಗೆ ಹೆದರಿ ನೇಣಿಗೆ ಶರಣಾದ ರಮೇಶ್ ಅಂತ್ಯಸಂಸ್ಕಾರ ಭಾನುವಾರ ಸ್ವಗ್ರಾಮ ಮೆಳೇಹಳ್ಳಿಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ನೇರವೇರಿತು.
ರಮೇಶ್ ಅಂತ್ಯಕ್ರಿಯೆ ವಿದಾಯದ ವೇಳೆ ಅವರ ಮಗ ಮೋಹಿತ್, "ಅಪ್ಪ ಬೇಕು, ಅಪ್ಪ ಬೇಕು" ಎಂದು ಕಣ್ಣೀರಿಟ್ಟ ಚಿತೆಗೆ ಅಗ್ನಿ ಸ್ಪರ್ಶ ಮಾಡಿದ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಡಾ.ಜಿ. ಪರಮೇಶ್ವರ ಅವರನ್ನು ತಬ್ಬಿ, ಅಪ್ಪ ಬೇಕು, ಅಪ್ಪ ಬೇಕು ಎಂದು ಮೋಹಿತ್ ಗೋಳಾಡುತ್ತಿದ್ದ. ಇನ್ನು ಮುಂದೆ ನಮಗೆ ಯಾರು ದಿಕ್ಕು ಸಾಹೇಬರೇ ಎಂದು ಗೋಳಾಡುತ್ತಿದ್ದ ರಮೇಶ್ ಪತ್ನಿ ಸೌಮ್ಯಾ, ಪಿಳಿ ಪಿಳಿ ಕಣ್ಣು ಬಿಡುತ್ತಾ ಏನು ನಡೆಯುತ್ತಿದೆ ಎಂದು ಕುತೂಹಲದಿಂದ ನೋಡುತ್ತಿದ್ದ ಮಗು ಶ್ರೇಯಾ ಸ್ಥಿತಿ ನೋಡಿದರೆ ಎಂಥವರಿಗೂ ಕರುಳು ಹಿಂಡುವಂತೆ ಇತ್ತು.

ಡಾ. ಜಿ. ಪರಮೇಶ್ವರ, ಮಾಜಿ ಶಾಸಕ ಬಾಲಕೃಷ್ಣ, ಮಾಗಡಿ ಶಾಸಕ ಎ. ಮಂಜುನಾಥ್ ಸೇರಿದಂತೆ ಅನೇಕ ಗಣ್ಯರು ಮತ್ತು ಎರಡು ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲು ಡಾ. ಜಿ. ಪರಮೇಶ್ವರ ನಿರಾಕರಿಸಿದರು. ಮೆಳೇಹಳ್ಳಿಯ ರಮೇಶ್ ನಿವಾಸದಿಂದ ಅಂತಿಮ ಯಾತ್ರೆ ನಡೆಯಿತು. ಅವರದೇ ಜಮೀನಿನಲ್ಲಿ ರಮೇಶ್ ಅಂತ್ಯಕ್ರಿಯೆ ನಡೆಯಿತು.
ಇದಕ್ಕೂ ಮುನ್ನ ಮಾತನಾಡಿದ ರಮೇಶ್ ಸಹೋದರ ಸತೀಶ್, ಆದಾಯ ತೆರಿಗೆ ಇಲಾಖೆ ವಿರುದ್ಧ ಕಿಡಿಕಾರಿದರು. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಮನೆಗೆ ಹೋಗಿ ವಿಚಾರಣೆ ನಡೆಸಿದರೂ ಇಲ್ಲವೆಂದು ಸುಳ್ಳು ಹೇಳಿದ್ದಾರೆ. ಮನೆಗೆ ತೆರಳಿರುವ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಐ. ಟಿ. ಅಧಿಕಾರಿಗಳ ವಿರುದ್ಧ ದೂರು ದಾಖಲಿಸುತ್ತೇವೆ ಎಂದು ಹೇಳಿದರು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications