ರಂಗಾಯಣ ನಿರ್ದೇಶಕರ ನೇಮಕ ಅಕ್ರಮವೆಂದ ಮಾಜಿ ನಿರ್ದೇಶಕ
ಮೈಸೂರು, ಫೆಬ್ರವರಿ 20: ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರು ಅಕ್ರಮವಾಗಿ ನಿರ್ದೇಶಕರಾಗಿ ನೇಮಕವಾಗಿದ್ದಾರೆ ಎಂದು ರಂಗಾಯಣದ ಮಾಜಿ ನಿರ್ದೇಶಕ ಎಚ್.ಜನಾರ್ಧನ್ (ಜನ್ನಿ) ಆರೋಪಿಸಿದ್ದಾರೆ.
ಮೈಸೂರು ನಗರದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜನಾರ್ಧನ್ ಅವರು, ರಂಗಾಯಣ ಸ್ವಾಯತ್ತ ಸಂಸ್ಥೆಯಾಗಿದ್ದು, ನಿರ್ದೇಶಕರ ಆಯ್ಕೆ ರಂಗ ಸಮಾಜದ ಮೂಲಕ ಆಗುತ್ತದೆ ಎಂದರು.
ಆದರೆ ರಂಗ ಸಮಾಜದಲ್ಲಿ ಅಡ್ಡಂಡ ಕಾರ್ಯಪ್ಪ ಹೆಸರು ಪ್ರಸ್ತಾಪವೇ ಆಗಿಲ್ಲ. ರಂಗಾಯಣ ನಿರ್ದೇಶಕರಾಗಲು ಅನೇಕ ಮಾನದಂಡ ಇದೆ. ಆ ಮಾನದಂಡ ಅಡ್ಡಂಡ ಕಾರ್ಯಪ್ಪನಿಗೆ ಇಲ್ಲ. ಆದರೂ ಏಕಾಏಕಿ ಅಡ್ಡಂಡ ಕಾರ್ಯಪ್ಪನನ್ನು ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಗಿದೆ. ಅಡ್ಡಂಡ ಕಾರ್ಯಪ್ಪ ರಾಜಕೀಯವಾಗಿ ನಿರ್ದೇಶಕರಾಗಿ ನೇಮಕವಾಗಿದ್ದಾರೆ ಎಂದು ಆಪಾದಿಸಿದರು.

ರಂಗಾಯಣಕ್ಕೆ ಕೊರೊನಾ ವೈರಸ್ ಬಂದಿದೆ. ಅಲ್ಲಿನ ಕಲಾವಿದರು ಈ ಕೊರೊನಾದಿಂದ ತಪ್ಪಿಸಿಕೊಳ್ಳಬೇಕಿದೆ. ಯಾರೂ ಕೂಡ ಈ ವೈರಸ್ ಗೆ ಬಲಿಯಾಗಬಾರದು. ಹಾಗಾಗಿ ನಾವು ಈ ವೈರಸ್ ಬಗ್ಗೆ ನಾವು ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಅಡ್ಡಂಡ ಕಾರ್ಯಪ್ಪ ಅವರನ್ನು ಕೊರೊನಾ ವೈರಸ್ ಗೆ ಹೋಲಿಸಿದ್ದಾರೆ.
ಅಡ್ಡಂಡ ಕಾರ್ಯಪ್ಪ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ. ಈಗಾಗಲೇ ಅವರಿಗೆ ನೋಟಿಸ್ ನೀಡಲಾಗಿದೆ. ಈ ಕೂಡಲೇ ಅಡ್ಡಂಡ ಕಾರ್ಯಪ್ಪ ಕ್ಷಮೆ ಕೋರದಿದ್ದರೆ ಉಗ್ರ ಹೋರಾಟ ನಡೆಸುತ್ತೇವೆ. ಅವರ ಅಕ್ರಮದ ಬಗ್ಗೆ ಎಲ್ಲ ದಾಖಲೆ ನಮ್ಮ ಬಳಿ ಇದೆ ಎಂದು ತಿರುಗೇಟು ನೀಡಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications