ನಿತ್ಯಾನಂದ ಸ್ವಾಮಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ
ರಾಮನಗರ ಆಗಸ್ಟ 20: ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಬಹಳ ದಿನಗಳಿಂದ ಕಾಣೆಯಾಗಿದ್ದಾರೆ. ಇದೀಗ ರಾಮನಗರದ ಸ್ಥಳೀಯ ನ್ಯಾಯಾಲಯವು 2010 ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿತ್ಯಾನಂದ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಈ ವಾರಂಟ್ ಹೊರಡಿಸಿದೆ. ಈ ಹಿಂದೆಯೂ ನಿತ್ಯಾನಂದನ ವಿರುದ್ಧ ವಾರೆಂಟ್ ಜಾರಿಯಾಗಿದ್ದರೂ ಆತನನ್ನು ಬಂಧಿಸಲು ಅಥವಾ ಆತ ಎಲ್ಲಿದ್ದಾನೆ ಎಂಬುದನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸಾಧ್ಯವಾಗಿಲ್ಲ.
ಈ ಪ್ರಕರಣದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಚಾರಣೆ ನಡೆಸಲಾಗಿದ್ದು, ಮೂವರು ಸಾಕ್ಷಿಗಳ ವಿಚಾರಣೆಯನ್ನೂ ನಡೆಸಲಾಗಿದೆ. ಆದರೆ, ಪ್ರಮುಖ ಆರೋಪಿ ನಿತ್ಯಾನಂದ ಕೋರ್ಟ್ ಮುಂದೆ ಗೈರುಹಾಜರಾದ ಕಾರಣ ಕಳೆದ ಮೂರು ವರ್ಷಗಳಿಂದ ವಿಚಾರಣೆ ಬಾಕಿ ಉಳಿದಿತ್ತು. 2019 ರಿಂದಲೂ ನಿತ್ಯಾನಂದನಿಗೆ ಹಲವು ಬಾರಿ ಸಮನ್ಸ್ಗಳನ್ನು ನೀಡಲಾಗಿದೆ. ಆದರೆ, ಅವರು ಒಂದೇ ಒಂದು ಸಮನ್ಸ್ಗೆ ಪ್ರತಿಕ್ರಿಯಿಸಿಲ್ಲ. ಇದೀಗ ನ್ಯಾಯಾಲಯ ಹೊರಡಿಸಿರುವ ವಾರಂಟ್ ಸೆ.23ರವರೆಗೆ ಚಾಲ್ತಿಯಲ್ಲಿದೆ. ಅಂದರೆ ಸೆ.23ರೊಳಗೆ ಪೊಲೀಸರು ನಿತ್ಯಾನಂದನನ್ನು ಬಂಧಿಸಿ ಹಾಜರುಪಡಿಸಬೇಕು.
Recommended Video

ಜಾಮೀನು ರದ್ದು
2010ರಲ್ಲಿ ನಿತ್ಯಾನಂದನ ಚಾಲಕ ಲೆನಿನ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿತ್ತು. ಇದೇ ಪ್ರಕರಣದಲ್ಲಿ ನಿತ್ಯಾನಂದನನ್ನು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. 2020 ರ, ನಿತ್ಯಾನಂದ ದೇಶದಿಂದ ಪರಾರಿಯಾಗಿದ್ದಾನೆ ಎಂದು ಲೆನಿನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಈ ಅರ್ಜಿಯ ಆಧಾರದ ಮೇಲೆ ನಿತ್ಯಾನಂದನ ಜಾಮೀನು ರದ್ದುಗೊಳಿಸಲಾಗಿದೆ.
ನಿತ್ಯಾನಂದ ದೇಶ ಬಿಟ್ಟು ಓಡಿ ಹೋಗಿ ಕೈಲಾಸ ಎಂಬ ಹೆಸರಿನ ದ್ವೀಪದಲ್ಲಿ ಆಶ್ರಮ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಆತ ಎಲ್ಲಿದ್ದಾನೆ ಎಂಬುದು ಇನ್ನೂ ದೃಢಪಟ್ಟಿಲ್ಲ. ಅತ್ಯಾಚಾರ ಪ್ರಕರಣದಲ್ಲಿ, ರಾಮನಗರ ಸೆಷನ್ಸ್ ನ್ಯಾಯಾಲಯವು ಹಲವಾರು ಸಮನ್ಸ್ ಜಾರಿಗೊಳಿಸಿತು. ಆದರೆ, 2019 ರಿಂದ ನಿತ್ಯಾನಂದ ಯಾವುದೇ ಸಮನ್ಸ್ಗೆ ಉತ್ತರಿಸಲಿಲ್ಲ ಅಥವಾ ನ್ಯಾಯಾಲಯಕ್ಕೆ ಹಾಜರಾಗಲಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications