ನೀವು ಕೆಂಪೇಗೌಡರ ಮಗನಾದರೆ, ನಾನು ಕಾಳೇಗೌಡರ ಮೊಮ್ಮಗ; ರಿಷಿ ಕುಮಾರ ಸ್ವಾಮೀಜಿ
ರಾಮನಗರ, ಜನವರಿ 10: "ಕನಕಪುರಕ್ಕೂ ಕಾಳಿಗೂ ಏನ್ ಸಂಬಂಧ ಅಂತೀರಾ, ನಾನು ಕನಕಪುರದ ಮೊಮ್ಮಗ. ನಾನು ಕೆಂಪೇಗೌಡರ ಮಗ ಅಂತೀರಲ್ಲ ಹಾಗೇ ಕಾಳೇಗೌಡರ ಮೊಮ್ಮಗ ನಾನು" ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕಾಳಿ ಮಠದ ರಿಷಿ ಕುಮಾರ ಸ್ವಾಮೀಜಿ ಎದುರೇಟು ಹಾಕಿದ್ದಾರೆ.
ಕೆಲ ದಿನಗಳ ಹಿಂದೆ ಕಪಾಲ ಬೆಟ್ಟಕ್ಕೆ ಭೇಟಿ ನೀಡಿ ಏಸು ಪ್ರತಿಮೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದ ರಿಷಿ ಕುಮಾರ ಸ್ವಾಮೀಜಿ, ಕಪಾಲ ಬೆಟ್ಟದ ಮೇಲೆ ಪ್ರತಿಮೆ ನಿರ್ಮಾಣಕ್ಕೆ ದಾಸ್ತಾನು ಮಾಡಿರುವ ಕಲ್ಲಿನ ದಿಮ್ಮಿಗಳನ್ನು ಜಿಲ್ಲಾಡಳಿತ ವಶಪಡಿಸಿಕೊಳ್ಳಬೇಕೆಂದು ಆಗ್ರಹಿಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ನಂತರ ಮಾಧ್ಯಮಗಳೂಂದಿಗೆ ಮಾತನಾಡಿದರು.
ಕಾಳಿ ಮಠಕ್ಕೂ ಕನಕಪುರಕ್ಕೂ ಏನು ಸಂಬಂಧ ಎಂದು ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, "ಹೆದರಿಸಬೇಡಿ. ಇಲ್ಲಿ ಹೆದರಿಕೊಳ್ಳುವವರು ಯಾರೂ ಇಲ್ಲ. ಕನಕಪುರ ನಿಮ್ಮದಲ್ಲ, ರಾಮನಗರ ನಿಮ್ಮದಲ್ಲ, ಕರ್ನಾಟಕ ನಿಮ್ಮದಲ್ಲ, ನಮ್ಮದೂ ರಾಮನಗರನೇ, ಬೆಟ್ಟಕ್ಕೆ ಭೇಟಿ ನೀಡಿದ ಬಳಿಕ ಅಪಪ್ರಚಾರ ಮತ್ತು ದೂರಿನ ಮೂಲಕ ಹೆದರಿಸಲು ನೋಡ್ತಿದ್ದೀರಿ. ಇದಕ್ಕೆಲ್ಲ ನಾವು ಹೆದರುವವನಲ್ಲ. ರಿಷಿ ಕುಮಾರಸ್ವಾಮೀಜಿ ಮೊದಲಿನಂತಿಲ್ಲ, ಹೆದರಿಸಬೇಡಿ" ಎಂದು ಡಿಕೆಶಿ ಹೆಸರೇಳದೆ ಹರಿಹಾಯ್ದರು.

ಪ್ರತಿಮೆ ನಿರ್ಮಾಣಕ್ಕೆ ದಾಸ್ತಾನು ಮಾಡಿರುವ ಬೃಹತ್ ಕಲ್ಲಿನ ದಿಮ್ಮಿಗಳು ಮತ್ತು ಯಂತ್ರವನ್ನು ಇದೇ 19ರ ಒಳಗೆ ತೆರವು ಮಾಡಬೇಕು. ಹೀಗೆ ಮಾಡದಿದ್ದರೆ 20 ರಂದು ಕೋತಿ ಆಂಜನೇಯ ದೇವಾಲಯದಿಂದ ಕಪಾಲ ಬೆಟ್ಟಕ್ಕೆ ಪಾದಯಾತ್ರೆ ಮಾಡ್ತೇವೆ. ಪಾದಯಾತ್ರೆಯಲ್ಲಿ ಅನೇಕ ಸಾಧು ಸಂತರು, ಹಿಂದು ಸಂಘಟನೆಗಳು ಭಾಗವಹಿಸಲಿವೆ" ಎಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications