ರಾಮನಗರ; ಸರ್ಕಾರಿ ಅಧಿಕಾರಿಗಳಿಂದ 25 ಕೋಟಿ ರೂ. ಮೌಲ್ಯದ ಭೂಮಿ ಗುಳುಂ
ರಾಮನಗರ, ಜೂನ್ 6: ಬೆಂಗಳೂರಿಗೆ ಹತ್ತಿರವಿರುವ ರಾಮನಗರ ಜಿಲ್ಲೆಯಲ್ಲಿ ಭೂ ಮಾಫಿಯಾ ಸಕ್ರಿಯವಾಗಿದೆ. ಜಿಲ್ಲೆ ಬೆಳೆದಂತೆ ಭೂಮಿಗೆ ಚಿನ್ನದ ಬೆಲೆ ಬರುತ್ತಿದ್ದ, ಇದನ್ನೇ ಬಂಡವಾಳ ಮಾಡಿಕೊಂಡ ಭೂ ಕಳ್ಳರು ಚನ್ನಪಟ್ಟಣ ತಾಲ್ಲೂಕಿನ ಕಂದಾಯ ಇಲಾಖೆಯ ಕೆಲ ಅಧಿಕಾರಿಗಳು ಸಹಕಾರದಿಂದ 25 ಕೋಟಿ ಮೌಲ್ಯದ ಸರ್ಕಾರಿ ಗೋಮಾಳವನ್ನು ಗುಳುಂ ಮಾಡಿದ್ದಾರೆ.
ಚನ್ನಪಟ್ಟಣ ತಹಶೀಲ್ದಾರ್ ಕಚೇರಿ ದ್ವಿತೀಯ ದರ್ಜೆ ಸಹಾಯಕನಾದ ಬಿ. ಕೆ. ಹರೀಶ್ ಕುಮಾರ್, ಮತ್ತೊಬ್ಬ ಸಹಾಯಕ ನಾಗರಾಜು ಹಾಗೂ ಚನ್ನಪಟ್ಟಣ ನಗರಸಭಾ ಸದಸ್ಯ ಬೋರಲಿಂಗಯ್ಯ, ಜಿಲ್ಲಾಧಿಕಾರಿಗಳ ಕಚೇರಿ ದ್ವಿತೀಯ ದರ್ಜೆ ಕ್ಲರ್ಕ್ ಚಿಕ್ಕಸಿದ್ದಯ್ಯ, ಹಾಗೂ ಗ್ರಾಮ ಪಂಚಾಯಿತಿ ಸದಸ್ಯೆಯ ಪತಿ ಲೋಕೇಶ್ ವಿರುದ್ಧ ಸರ್ಕಾರಿ ಗೋಮಾಳ ಕಬಳಿಸಿದ ಪ್ರಕರಣ ದಾಖಲಾಗಿದೆ.
ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ಚನ್ನಪಟ್ಟಣ ತಾಲೂಕಿನ ಕೋಲೂರು ಗ್ರಾಮದ ಸರ್ವೆ ನಂಬರ್ 118 ರಲ್ಲಿ 192 ಎಕರೆ ಸರ್ಕಾರಿ ಗೋಮಾಳ ಜಮೀನು ಇದೆ. ಈ ಗೋಮಾಳದಲ್ಲಿ ಸುಮಾರು 23 ಎಕರೆ ಜಾಗವನ್ನು ಈ ಮೇಲಿನ ಅಧಿಕಾರಿಗಳು ಹಣದ ಆಸೆಗೆ ಬಿದ್ದು ಕಡತಗಳನ್ನ ಬದಲಿಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಗಳ್ಳರಿಗೆ ನೆರವಾಗಿದ್ದಾರೆ.

ಚನ್ನಪಟ್ಟಣ ತಾಲ್ಲೂಕು ಕಛೇರಿಯ ಉಪ ತಹಶೀಲ್ದಾರ್ ಲಕ್ಷ್ಮೀದೇವಮ್ಮ ಅವರು ಕಡತಗಳ ಪರಿಶೀಲನೆ ವೇಳೆ ಈ ಅಕ್ರಮ ಬೆಳಕಿಗೆ ಬಂದಿದೆ. ಈ ಮೇಲಿನ ಅಧಿಕಾರಿಗಳು ಸೇರಿ ಗೋಮಾಳ ಜಮೀನಿಗೆ ಸೇರಿದ ಕಡತವನ್ನು ಮನೆಗೆ ತೆಗೆದುಕೊಂಡು ಹೋಗಿ ಪುಟ ಸಂಖ್ಯೆ 6 ರಿಂದ 55 ವರೆಗಿನ ಮೂಲತಃ ಪುಟಗಳನ್ನು ತೆಗೆದು ಆ ಜಾಗಕ್ಕೆ ನಕಲು ಸೃಷ್ಟಿಸಿದ ಕಡತದ ಪುಟಗಳನ್ನ ಸೇರಿಸಿದ್ದಾರೆ.
ಅಲ್ಲದೇ ಈ ನಕಲಿ ಪುಟದಲ್ಲಿ ಈ ಹಿಂದಿನ ಹಲವು ರಾಮನಗರ ಜಿಲ್ಲಾಧಿಕಾರಿಗಳು, ಅಪಾರ ಜಿಲ್ಲಾಧಿಕಾರಿಗಳು ಹಾಗೂ ಚನ್ನಪಟ್ಟಣ ತಹಶೀಲ್ದಾರ್ಗಳ ಸಹಿಯನ್ನು ನಕಲು ಮಾಡಿದ್ದಾರೆ. ಈ ಸಂಬಂಧ ಚನ್ನಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಉಪ ತಹಶೀಲ್ದಾರ್ ಲಕ್ಷ್ಮಿ ದೇವಮ್ಮ ಅಧಿಕಾರಿಗಳ ವಿರುದ್ಧ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ಪೋಲಿಸ್ ತನಿಖೆಯಲ್ಲಿ ಅಕ್ರಮ ಸಾಬೀತು; ಈಗಾಗಲೇ ಕೋಟ್ಯಾಂತರ ಮೌಲ್ಯದ ಜಮೀನು ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಲ್ಲಿ ತಾಲ್ಲೂಕು ಕಛೇರಿಯ ಸಹಾಯಕ ಗುಮಾಸ್ತ ಹರೀಶ್ ಕುಮಾರ್, ಮತ್ತೊಬ್ಬ ಸಹಾಯಕ ನಾಗರಾಜ್ ಹಾಗೂ ಚನ್ನಪಟ್ಟಣ ನಗರಸಭೆಯ ಮಾಜಿ ಸದಸ್ಯ ಬೋರಲಿಂಗಯ್ಯನನ್ನು ಪೋಲಿಸರು ಬಂದಿಸಿದ್ದಾರೆ. ಇನ್ನೂ ಜಿಲ್ಲಾಧಿಕಾರಿಗಳ ಕಚೇರಿ ದ್ವಿತೀಯ ದರ್ಜೆ ಕ್ಲರ್ಕ್ ಚಿಕ್ಕಸಿದ್ದಯ್ಯ, ಹಾಗೂ ಗ್ರಾಮ ಪಂಚಾಯಿತಿ ಸದಸ್ಯೆ ಪತಿ ಲೋಕೇಶ್ ಇಬ್ಬರನ್ನು ಬಂಧಿಸಬೇಕಿದೆ.

ಪ್ರಕರಣದಲ್ಲಿ ಪೋಲಿಸ್ ತನಿಖೆಯಲ್ಲಿ ಮೇಲುನೋಟಕ್ಕೆ ಅಕ್ರಮ ನಡೆದಿದೆ. ಇನ್ನಷ್ಟು ತನಿಖೆ ನಡೆಸಿ ಭೂ ಅಕ್ರಮದಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ ಎಂಬುದನ್ನು ಪತ್ತೆ ಹಚ್ಚಬೇಕಿದೆ. ಆರೋಪಿಗಳು ಎಷ್ಟು ಡಿಸಿ ಮತ್ತು ಎಡಿಸಿ, ಎಷ್ಟು ಎಸಿಗಳು ಹಾಗೂ ಎಷ್ಟು ತಹಶೀಲ್ದಾರ್ಗಳ ಸಹಿಗಳನ್ನು ನಕಲಿ ಮಾಡಿದ್ದಾರೆ ಮತ್ತು ಈ ಹಗರಣದಲ್ಲಿ ಎಷ್ಟು ಹಣದ ವ್ಯವಹಾರ ನಡೆದಿದೆ ಎಂಬುದು ತನಿಖೆಯಲ್ಲಿ ತಿಳಿಯಲಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಂತೋಷ ಬಾಬು ತಿಳಿಸಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications