ಸಾವನದುರ್ಗದ ಲಕ್ಷೀನರಸಿಂಹಸ್ವಾಮಿ ದೇಗುಲದ ಹುಂಡಿಯಲ್ಲಿ 32 ಲಕ್ಷ ಸಂಗ್ರಹ
ಮಾಗಡಿ (ರಾಮನಗರ), ಜುಲೈ 26: ಮಾಗಡಿ ತಾಲೂಕಿನ ಪ್ರಸಿದ್ಧವಾದ ಸಾವನದುರ್ಗ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಹುಂಡಿಯಲ್ಲಿ ಈಗಾಗಲೇ ನಿಷೇಧವಾಗಿರುವ 1000 ಮತ್ತು 500 ಮುಖಬೆಲೆಯ ನೋಟುಗಳು ಆರು ಸಾವಿರ ರುಪಾಯಿಯಷ್ಟು ಪತ್ತೆಯಾಗಿವೆ.
1000 ಹಾಗೂ 500 ಮುಖಬೆಲೆಯ ಹಳೆ ನೋಟುಗಳನ್ನು ನಿಷೇಧಿಸಿ ಎರಡು ವರ್ಷ ಒಂಬತ್ತು ತಿಂಗಳು ಕಳೆದಿವೆ ಹಾಗೂ ಅಮಾನ್ಯಗೊಂಡ ನೋಟುಗಳನ್ನು ಸಂಗ್ರಹ ಎಂಬ ಕಾರಣಕ್ಕೆ ಒಂದೆರಡು ಇರಿಸಿಕೊಳ್ಳ ಬಹುದೇ ವಿನಾ ಅದಕ್ಕಿಂತ ಹೆಚ್ಚು ನೋಟು ತಮ್ಮ ಬಳಿ ಇಟ್ಟುಕೊಳ್ಳುವುದು ಅಪರಾಧ ಎಂದು ಘೋಷಣೆ ಮಾಡಿದ್ದರೂ ಕೆಲ ದೇವಾಲಯಗಳ ಹುಂಡಿಯಲ್ಲಿ ಅಮಾನ್ಯಗೊಂಡ ನೋಟುಗಳು ಸಿಗುತ್ತಿವೆ.
ಸಾವನದುರ್ಗದ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಹುಂಡಿ ಹಣವನ್ನು ಎಣಿಕೆ ಮಾಡುವ ವೇಳೆ 1 ಸಾವಿರ ಮುಖ ಬೆಲೆಯ 2 ನೋಟು ಹಾಗೂ 500 ಮುಖಬೆಲೆಯ 8 ಅಮಾನ್ಯಗೊಂಡ ಹಳೇ ನೋಟುಗಳು ಸೇರಿ, 6 ಸಾವಿರ ಮೌಲ್ಯದ ಹಣ ದೊರೆತಿವೆ.

ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯವು ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಟ್ಟಿದ್ದು, ತಹಸೀಲ್ದಾರ್ ಸಮ್ಮುಖದಲ್ಲಿ ಹುಂಡಿ ಹಣದ ಎಣಿಕೆ ಕಾರ್ಯ ನಡೆಯಿತು. ಹುಂಡಿಯಲ್ಲಿ 32,50,045 ರುಪಾಯಿ ಹಣ ಸಂಗ್ರಹವಾಗಿದೆ. ಕಳೆದ ಬಾರಿ ಅಂದರೆ 8 ತಿಂಗಳ ಹಿಂದೆ ಸುಮಾರು 30,39,053 ರುಪಾಯಿ ಸಂಗ್ರಹವಾಗಿತ್ತು.
ಮುಜರಾಯಿ ನಿಯಾಮದ ಪ್ರಕಾರ ಹುಂಡಿಯಲ್ಲಿ ಸಂಗ್ರಹವಾಗಿರುವ ಹಣವನ್ನು ಎಣಿಕೆ ಮಾಡಲಾಗಿದೆ. ಈ ಬಾರಿ ಶಸ್ತ್ರಸಜ್ಜಿತ ಪೊಲೀಸರ ಬಂದೋಬಸ್ತ್ ನಲ್ಲಿ ಹಣ ಎಣಿಕೆ ನಡೆಸಿದ್ದು, ಎಸ್ ಬಿಐ ಬ್ಯಾಂಕ್ ನ ಸಿಬ್ಬಂದಿ ಹಾಜರಿದ್ದರು. ಸಂಗ್ರಹವಾದ ಹಣವನ್ನು ಸಂಜೆ 6 ಗಂಟೆಗೆ ಬ್ಯಾಂಕ್ ಗೆ ಜಮಾ ಮಾಡಲಾಗಿದೆ.

ಹುಂಡಿ ಹಣ ಎಣಿಕೆ ವೇಳೆ ಸಿಕ್ಕ 6 ಸಾವಿರ ಮೌಲ್ಯದ ನಿಷೇಧಿತ ನೋಟುಗಳನ್ನು ಮತ್ತೆ ಹುಂಡಿಯಲ್ಲಿ ಹಾಕಲಾಗಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications