ಯಶಸ್ಸಿಗಾಗಿ ದೇವರ ಮೊರೆ ಹೋದ ಕುಮಾರಸ್ವಾಮಿ: ಬಿಡದಿಯ ತೋಟದ ಮನೆಯಲ್ಲಿ ಶತ ಚಂಡಿಕಾ ಯಾಗ
ಇದೀಗ ಚುನಾವಣೆ ಹೊಸ್ತಿಲಲ್ಲಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ದೇವರ ಮೊರೆ ಹೋಗಿದ್ದು, ರಾಮನಗರ ಜಿಲ್ಲೆಯ ಬಿಡದಿಯ ತಮ್ಮ ತೋಟದ ಮನೆಯಲ್ಲಿ ಶತ ಚಂಡಿಕಾ ಯಾಗ ಹಾಗೂ ಕೋಟಿ ಮೃತ್ಯುಂಜಯ ಜಪ ಹಮ್ಮಿಕೊಂಡಿದ್ದಾರೆ.
ರಾಮನಗರ, ಮಾರ್ಚ್ 3: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಹುಮತ ಸಾಧಿಸಲೇ ಬೇಕು ಎಂದು ಪಣತೊಟ್ಟಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಗೆಲುವಿಗಾಗಿ ರಾಜ್ಯಾದ್ಯಂತ ಪಂಚರತ್ನ ಯಾತ್ರೆ ಕೈಗೊಂಡಿದ್ದಾರೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಪಂಚರತ್ನ ಯಾತ್ರೆಗೆ ಭರ್ಜರಿ ಸ್ಪಂದನೆ ಸಿಕ್ಕಿದ್ದು, ಜೆಡಿಎಸ್ ಅಭ್ಯರ್ಥಿಗಳಲ್ಲಿ ಗೆಲುವಿನ ವಿಶ್ವಾಸ ಮೂಡಿದೆ.
ಇದೀಗ ಚುನಾವಣೆ ಹೊಸ್ತಿಲಲ್ಲಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ದೇವರ ಮೊರೆ ಹೋಗಿದ್ದು, ರಾಮನಗರ ಜಿಲ್ಲೆಯ ಬಿಡದಿಯ ತಮ್ಮ ತೋಟದ ಮನೆಯಲ್ಲಿ ಬಹುದೊಡ್ಡ ಯಾಗ ಹಮ್ಮಿಕೊಂಡಿದ್ದಾರೆ. ಮಾರ್ಚ್ 3ರಿಂದ 9 ದಿನಗಳ ಕಾಲ ರಾಮನಗರ ತಾಲೂಕಿನ ಬಿಡದಿಯ ಕೇತಿಗಾನಹಳ್ಳಿಯ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಶತ ಚಂಡಿಕಾ ಯಾಗ ಹಾಗೂ ಕೋಟಿ ಮೃತ್ಯುಂಜಯ ಜಪ ನಡೆಯಲಿದೆ.

ಕುಟುಂಬಸ್ಥರ ಆರೋಗ್ಯಕ್ಕಾಗಿ ಹಾಗೂ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಯಶಸ್ಸಿಗಾಗಿ ಕುಮಾರಸ್ವಾಮಿ ಶತ ಚಂಡಿಕಾ ಯಾಗ ನಡೆಸುತ್ತಿದ್ದು, ಸತತ 9 ದಿನಗಳ ಕಾಲ ಈ ಪೂಜಾ ಕಾರ್ಯ ನಡೆಯಲಿದೆ. ಇಂದಿನಿಂದಲೇ ಪೂಜೆ ಆರಂಭವಾಗಿದ್ದು, ಶೃಂಗೇರಿಯಿಂದ ಆಗಮಿಸಿರುವ 25 ಮಂದಿ ಪುರೋಹಿತರ ತಂದ ಈ ಯಾಗವನ್ನು ನೆರವೇರಿಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಶತ ಚಂಡಿಕಾ ಯಾಗ ಹಾಗೂ ಕೋಟಿ ಮೃತ್ಯುಂಜಯ ಜಪ ಪೂಜಾ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಎಚ್.ಡಿ ರೇವಣ್ಣ ಹಾಗೂ ಕುಟುಂಬಸ್ಥರು ಭಾಗಿಯಾಗಿದ್ದು, ವಿಶೇಷ ಯಾಗದ ಹಿನ್ನಲೆಯಲ್ಲಿ ಆಪ್ತರನ್ನು ಹೊರತುಪಡಿಸಿ ತೋಟದ ಮನೆಗೆ ಇತರರಿಗೆ ನಿರ್ಭಂಧ ಹೇರಲಾಗಿದೆ.

ಮೊಣಕಾಲು ನೋವಿನಿಂದ ಬಳಲುತ್ತಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇ ಗೌಡರು ಇತ್ತೀಚಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದರ ಬೆನ್ನಲ್ಲೇ ಕುಮಾರಸ್ವಾಮಿ ಶತ ಚಂಡಿಕಾ ಯಾಗ ಹಾಗೂ ಕೋಟಿ ಮೃತ್ಯುಂಜಯ ಜಪ ನಡೆಸುತ್ತಿದ್ದು, ದೇವೇಗೌಡರ ಆರೋಗ್ಯ ವೃದ್ಧಿಗಾಗಿ ಕುಟುಂಬಸ್ಥರು ವಿಶೇಷ ಪೂಜೆ ನೆರವೇರಿಸಿ ಪ್ರಾರ್ಥನೆ ಮಾಡಿದ್ದಾರೆ.
ಹಾಸನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಇನ್ನೂ ಜೆಡಿಎಸ್ ಟಿಕೆಟ್ ಘೋಷಣೆಯಾಗದೇ ಗೊಂದಲದಲ್ಲೇ ಇದ್ದು, ಇನ್ನು ಟಿಕೆಟ್ ಘೋಷಣೆಯಾಗಿರುವ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿ ಹಾಗೂ ಕಾರ್ಯಕರ್ತರ ನಡುವೆ ಅಸಮಾಧಾನ ಕಂಡು ಬರುತ್ತಿದೆ. ಸದ್ಯ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲಾ ಸಮಸ್ಯೆಗಳು ದೂರಾಗಿ ಪಕ್ಷ ಯಶಸ್ಸಿನ ಹಾದಿಯತ್ತ ಸಾಗಲಿ ಎಂದು ಕುಮಾರಸ್ವಾಮಿ ವಿಶೇಷ ಪೂಜೆ ನಡೆಸಿದ್ದಾರೆ. ಇನ್ನು ಇತ್ತೀಚಿಗಷ್ಟೇ ಕುಮಾರಸ್ವಾಮಿ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಅದ್ಧೂರಿಯಾಗಿ ಶ್ರೀನಿವಾಸ ಕಲ್ಯಾಣ ನಡೆಸಲಾಗಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications