Shiggaon By Election: ಶಿಗ್ಗಾಂವಿಯಲ್ಲಿ ಕಾಂಗ್ರೆಸ್ಗೆ ಭಿನ್ನಮತದಿಂದ ಹಿನ್ನಡೆ? ಆಂತರಿಕ ಸಮೀಕ್ಷಾ ವರದಿಯಲ್ಲೇನಿದೆ?
ಹಾವೇರಿ ನವೆಂಬರ್ 10: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಸ್ಪರ್ಧಿಸುತ್ತಿರುವ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ಸ್ಥಾನ ಭದ್ರಪಡಿಸಿಕೊಳ್ಳಲು ಕಾಂಗ್ರೆಸ್ ತೊಡೆತಟ್ಟಿ ನಿಂತಿದೆ. ಕಾಂಗ್ರೆಸ್ ಹಲವು ತಂತ್ರಗಾರಿಕೆ ಮೂಲಕ ಬೊಮ್ಮಾಯಿ ಭದ್ರಕೇಟೆಯನ್ನು ಒಡೆಲು ಕಸರತ್ತು ನಡೆಸಿದೆ. ಈ ನಡುವೆ ಕಾಂಗ್ರೆಸ್ ನಡೆಸಿದ ಆಂತರಿಕ ಸಮೀಕ್ಷಾ ವರದಿ ಕಾಂಗ್ರೆಸ್ ಕೈ ಸೇರಿದ್ದು ಗೆಲುವಿನ ಲೆಕ್ಕಾಚಾರಗಳು ತಲೆಕೆಳಗಾಗಿವಿ.
ಹೌದು... ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಯಾಸಿರ್ ಖಾನ್ ಪಠಾಣ್ ಅವರನ್ನು ಕಣಕ್ಕಿಳಿಸಿದೆ. ಅವರ ಗೆಲುವಿಗಾಗಿ ಆಡಳಿತ ಪಕ್ಷ ಕಾಂಗ್ರೆಸ್ ಭರ್ಜರಿ ಪ್ರಚಾರ ಕೂಡ ನಡೆಸಿದೆ. ಆದರೆ ಕಾಂಗ್ರೆಸ್ ನಡೆಸಿದ ಆಂತರಿಕಾ ಸಮೀಕ್ಷಾ ವರದಿ ಪ್ರಕಾರ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ಗೆ ಭಿನ್ನಮತದಿಂದ ಹಿನ್ನಡೆಯಾಗುವ ಸೂಚನೆಗಳು ಸಿಕ್ಕಿವೆ.

ಕ್ಷೇತ್ರದಲ್ಲಿ ಜನರನ್ನು ರೀಚ್ ಆಗದ ಪಠಾಣ್ಗೆ ಮತಗಳು ಬರುತ್ತವಾ ಎನ್ನುವ ಅನುಮಾನ ಮೂಡಿದೆ. ಇದಲ್ಲದೆ ಬೊಮ್ಮಾಯಿ ಪರ ಮುಸ್ಲಿಂರ ಸಾಫ್ಟ್ ಕಾರ್ನರ್ ಇದ್ದು, ಭರತ್ ಮಾಡಿರುವ ಗ್ರೌಂಡ್ ವರ್ಕ್ ಪ್ಲಸ್ ಆಗುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಆಂತರಿಕಾ ವರದಿಯಲ್ಲಿ ಗೊತ್ತಾಗಿದೆ. ಹೀಗಾಗಿ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪ್ರಚಾರಕ್ಕೆ ವೇಗ ನೀಡಬೇಕು ಎನ್ನುವ ಸುಳಿವನ್ನು ವರದಿ ನೀಡಿದೆ.
ಹಾವೇರಿಯಲ್ಲಿ ಉಪಚುನಾವಣೆ ಕದನ ಜೋರಾಗಿ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭರ್ಜರಿ ಮತಬೇಟೆ ನಡೆಸಿ, ಶಿಗ್ಗಾಂವಿ ತಾಲೂಕಿನ ಹಲವು ಪ್ರದೇಶಗಳಲ್ಲಿ ರೋಡ್ಶೋ ಕೂಡ ಮಾಡಿದರು. ಅಖಾಡದಲ್ಲಿ ಮಾತಿನ ಯುದ್ಧದ ನಡುವೆ ಕಾಂಗ್ರೆಸ್ ನಡೆಸಿದ ಸಮೀಕ್ಷೆ ಸರ್ಕಾರದ ನಿದ್ದೆಗೆಡಿಸಿದೆ.
ಬೊಮ್ಮಾಯಿಯ ಪ್ರತಿಷ್ಠೆಯ ಕ್ಷೇತ್ರವಾದ ಶಿಗ್ಗಾಂವಿಯಲ್ಲಿ ಬಿಜೆಪಿಗೆ ಸೋಲಿನ ರುಚಿ ತೋರಿಸಲು ಕಾಂಗ್ರೆಸ್ ಸಾಕಷ್ಟು ಕಸರತ್ತು ನಡೆಸಿದೆ. ಐದು ಬಾರಿ ಸೋಲುಂಡಿರುವ ಕಾಂಗ್ರೆಸ್ ಈ ಬಾರಿ ಗೆಲುವಿಗೆ ಶತಪ್ರಯತ್ನ ನಡೆಸಿದೆ. ಇದಕ್ಕಾಗಿ ಕಾಂಗ್ರೆಸ್ನ ಮಂತ್ರಿಗಳು, ಶಾಸಕರು ಕ್ಷೇತ್ರದಲ್ಲಿ ಠಿಕಾಣಿ ಹೂಡಿದ್ದು ತೆರೆಮರೆಯಲ್ಲಿ ಗೆಲುವಿನ ಆಟ ಶುರು ಮಾಡಿದ್ದಾರೆ.

ಇನ್ನೂ ಸಚಿವ ಸತೀಶ್ ಜಾರಕಿಹೊಳಿ ನಿದ್ದೆಗೆಟ್ಟು ಕ್ಷೇತ್ರ ಸಂಚಾರ ಮಾಡಿ ಸಮುದಾಯಗಳ ಮನವೊಲಿಸಲು ಯತ್ನಿಸಿದ್ದಾರೆ. ಪಠಾಣ್ಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದರಿಂದ ಬಂಡಾಯವೆದಿದ್ದ ಅಜ್ಜಂಪೀರ್ ಖಾದ್ರಿಯ ಕೋಪವನ್ನು ಶಮನ ಮಾಡಲು ಯಶಸ್ವಿಯಾಗಿರುವ ಕಾಂಗ್ರೆಸ್ ಕ್ಷೇತ್ರದಲ್ಲಿ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಮುನ್ನುಗ್ಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪ್ರಚಾರದ ಹಾದಿಯಲ್ಲಿ ಎಲ್ಲವೂ ಸುಗಮವಾಗಿ ಸಾಗುತ್ತಿದೆ. ಆದರೆ ಕಾಂಗ್ರೆಸ್ ನಡೆಸಿದ ಆಂತರಿಕ ವರದಿ ಮಾತ್ರ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ನಿದ್ದೆಗೆಡಿಸಿದ್ದು ಕೈ ನಾಯಕರು ಹಗಲು ರಾತ್ರಿ ಎನ್ನದೆ ಶ್ರಮಿಸುತ್ತಿದ್ದಾರೆ.
ಶಿಗ್ಗಾಂವಿ ಕ್ಷೇತ್ರ ಸದ್ಯ ಭರತ್ ಬೊಮ್ಮಾಯಿ ಹಾಗೂ ಯಾಸಿರ್ ಖಾನ್ ಪಠಾಣ್ ಕದನದ ಕ್ಷೇತ್ರವಾಗಿರದ ಬಸವರಾಜ್ ಬೊಮ್ಮಾಯಿ ಹಾಗೂ ಕಾಂಗ್ರೆಸ್ ನಡುವಿನ ಕದನವಾಗಿದೆ. ಒಟ್ಟಿನಲ್ಲಿ ಶತಾಯಗತಾಯ ಬಿರುಸಿನ ಪ್ರಚಾರದ ಮೂಲಕ ಜಾತಿಲೆಕ್ಕಾಚಾರದಲ್ಲಿ ಸಮುದಾಯಗಳನ್ನು ಸೆಳೆಯುತ್ತಾ ಕಾಂಗ್ರೆಸ್ ಗೆಲ್ಲಲು ಶತಪ್ರಯತ್ನ ನಡೆಸಿದೆ. ಶಿಗ್ಗಾಂವಿ ಜನ ಯಾರ ಕೈ ಹಿಡಿಯುತ್ತಾರೆಂದು ಕಾದು ನೋಡಬೇಕಿದೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications