ಸಿದ್ದಗಂಗಾ ಶ್ರೀಗಳ ಮನೆ ಜೀರ್ಣೋದ್ಧಾರ; ಸಚಿವರಿಂದ ಭೂಮಿ ಪೂಜೆ
ರಾಮನಗರ, ಜೂನ್ 18; ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶಿವಕುಮಾರ ಮಹಾಸ್ವಾಮಿಗಳು ಲಿಂಗೈಕ್ಯರಾಗಿ ಎರಡು ವರ್ಷಗಳು ಕಳೆದಿದೆ. ಅಂದಿನಿಂದಲೂ ಹುಟ್ಟಿದ ಗ್ರಾಮವನ್ನು ಅಭಿವೃದ್ದಿಪಡಿಸಿ ವಿಶ್ವ ಮಟ್ಟದ ಪಾರಂಪರಿಕ ತಾಣ ಮಾಡಬೇಕು ಎಂದು ಸರ್ಕಾರ ತೀರ್ಮಾನಿಸಿತ್ತು. ಆದರೆ ಕೋವಿಡ್ನಿಂದ ಎಲ್ಲಾ ಕೆಲಸಗಳನ್ನು ನಿಲ್ಲಿಸಲಾಗಿತ್ತು.
ಇದೀಗ ಮತ್ತೆ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ಶುಕ್ರವಾರ ಸಿದ್ದಗಂಗಾ ಶ್ರೀಗಳ ಹುಟ್ಟಿದ ಮನೆಯ ಪುನರ್ ನವೀಕರಣ ಕಾಮಗಾರಿಗೆ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ವೀರಾಪುರದಲ್ಲಿ ಭೂಮಿ ಪೂಜೆ ನೆರವೇರಿಸಿದರು.
ಶ್ರೀಗಳು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ವೀರಾಪುರ ಗ್ರಾಮದಲ್ಲಿ ಜನಿಸಿದ್ದರು. ಕುಗ್ರಾಮದಲ್ಲಿ ಜನಿಸಿದ್ದ ಅವರು ವಿಶ್ವ ಮಟ್ಟದಲ್ಲೇ ಹೆಸರು ಮಾಡಿದ್ದರು. ಚಿಕ್ಕ ವಯಸ್ಸಿನಲ್ಲಿ ಅವರು ವಾಸ ಮಾಡಿಕೊಂಡಿದ್ದ ಮನೆ ಸಂಪೂರ್ಣ ನೆಲಸಮವಾಗಿದೆ.

ಶ್ರೀಗಳು ವಾಸ ಮಾಡಿಕೊಂಡಿದ್ದ ಮನೆಯ ಸಂಪೂರ್ಣ ಮಾಹಿತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ. ಹಿಂದೆ ಇದ್ದ ಮಾದರಿಯಲ್ಲಿ ಮನೆಯನ್ನ ಕಟ್ಟಿ ಅವರು ಉಪಯೋಗಿಸುತ್ತಿದ್ದ ಎಲ್ಲಾ ವಸ್ತುಗಳ ಇಡಬೇಕು ಎಂದು ಸರ್ಕಾರ ತೀರ್ಮಾನಕ್ಕೆ ಬಂದಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಮನೆಯ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕೆಆರ್ಡಿಎಲ್ ಅಧ್ಯಕ್ಷ ಎಂ. ರುದ್ರೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.
ವೀರಾಪುರ ಗ್ರಾಮದ ಸಮೀಪವೇ ಇರುವ ಎತ್ತರದ ಪ್ರದೇಶದಲ್ಲಿ ಶಿವಗಂಗಾ ಬೆಟ್ಟದ ಕಡೆ ತಿರುಗಿ ನಿಂತಿರುವ ಶ್ರೀಗಳ 111 ಅಡಿ ಎತ್ತರದ ಪುತ್ಥಳಿ ನಿರ್ಮಾಣವಾಗಲಿದೆ. ಪುತ್ಥಳಿ ಸಮೀಪವೇ ಆಡಿಟೋರಿಯಂ ಹಾಗೂ ವಸ್ತು ಸಂಗ್ರಹಾಲಯ ಮಾಡಲು ತೀರ್ಮಾನಿಸಲಾಗಿದೆ.

"ವೀರಾಪುರದಿಂದ ಸಿದ್ದಗಂಗಾ ಮಠಕ್ಕೆ 22 ಕಿ. ಮೀ. ದೂರವಿದೆ. ಅಲ್ಲಿಗೆ ನೇರವಾಗಿ ತಲುಪಲು ರಸ್ತೆ ಮಾಡಿಕೊಡಬೇಕು ಎಂಬ ಬೇಡಿಕೆ ಇದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ರಸ್ತೆ ಅಭಿವೃದ್ಧಿ ಪಡಿಸುತ್ತೇವೆ" ಎಂದು ಸಚಿವ ಅರವಿಂದ ಲಿಂಬಾವಳಿ ಭರವಸೆ ನೀಡಿದರು.
"ಬಿಡದಿಯ ಬಾನಂದೂರು ಗ್ರಾಮದಲ್ಲಿ ಜನಸಿದ್ದ ಬಾಲಗಂಗಾಧರನಾಥ ಸ್ವಾಮೀಜಿಗಳ ಊರನ್ನು ಅಭಿವೃದ್ಧಿ ಮಾಡಲಾಗುವುದು. ಈ ಎರಡು ಸ್ಥಳಗಳಿಗೆ ಈಗಾಗಲೇ ಸರ್ಕಾರದಿಂದ ತಲಾ 25 ಕೋಟಿ ಹಣ ಸಹ ಬಿಡುಗಡೆ ಮಾಡಲಾಗಿದೆ" ಎಂದು ಸಚಿವರು ತಿಳಿಸಿದರು.
ಒಟ್ಟಾರೆ ರೇಷ್ಮೆನಗರಿ ರಾಮನಗರ ಜಿಲ್ಲೆಯಲ್ಲೇ ಇಬ್ಬರು ಮಹಾ ಚೇತನರು ಜನಿಸಿದ್ದು ಈಗ ಅವರಿಬ್ಬರ ಗ್ರಾಮಗಳನ್ನು ಅಭಿವೃದ್ಧಿ ಮಾಡುವ ಭಾಗ್ಯ ರಾಜ್ಯ ಸರ್ಕಾರಕ್ಕೆ ದೊರಕಿದೆ. ಆದರೆ ಕೊರೊನಾದಿಂದ ಇವೆಲ್ಲವೂ ವಿಳಂಬವಾಗಿತ್ತು. ಆದಷ್ಟು ಬೇಗ ಈ ಎರಡೂ ಗ್ರಾಮಗಳ ಅಭಿವೃದ್ಧಿ ನಡೆಯಲಿ ಎಂಬುದು ಎಲ್ಲರ ಆಶಯ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications