ಜಾನಪದ ಲೋಕದ ಸಂಕ್ರಾಂತಿ ಸಂಭ್ರಮ ಕಸಿದ ಕೊರೊನಾ ಭೀತಿ
ರಾಮನಗರ, ಜನವರಿ 14: ಜಾನಪದ ಕಲೆಗಳ ತವರೂರು, ಜನಪದರ ಕಾಶಿ ಖ್ಯಾತಿಯ ಜಾನಪದ ಲೋಕದಲ್ಲಿ ಇಂದು ನಡೆದ ಮಕರ ಸಂಕ್ರಾಂತಿಯ ಸುಗ್ಗಿಯ ಹಬ್ಬ ಕೋವಿಡ್-19 ಭೀತಿಯಿಂದ ಸರಳವಾಗಿ ಆಚರಣೆ ಮಾಡಲಾಯಿತು.
ಅನ್ನದಾತನ ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ದವಸ ಧಾನ್ಯಗಳಾದ ರಾಗಿ, ಕಡಲೆಕಾಯಿ, ಜೋಳ ಹಾಗೂ ಅವರೆಕಾಯಿ ರಾಶಿ ಮಾಡಿ ಅದಕ್ಕೆ ಗ್ರಾಮೀಣ ಸೊಗಡಿನ ರಾಶಿ ಪೂಜೆ ನೆರವೇಸುವ ಮೂಲಕ ಸಂಪ್ರದಾಯಕ ಸಂಕ್ರಾಂತಿ ಆಚರಿಸಲಾಯಿತು.
ಅಲ್ಲದೇ ರಾಶಿ ಪೂಜೆಯ ಸುತ್ತಲೂ ರೈತರು ವ್ಯವಸಾಯದಲ್ಲಿ ಬಳಸುವ ವಿವಿಧ ಪರಿಕರಗಳು, ಜನಪದರ ಗ್ರಾಮೀಣ ಬದುಕಿನಲ್ಲಿ ದಿನ ನಿತ್ಯ ಬಳಸುತ್ತಿದ್ದ ಅಲವಾರು ಪರಿಕಾರಗಳ ಪ್ರದರ್ಶನಕ್ಕೆ ಇಡುವ ಮೂಲಕ, ಜಾನಪದ ಲೋಕಕ್ಕೆ ಬರುವ ಮಂದಿಗೆ ರೈತರ ಪರಿಕರಗಳನ್ನು ಪರಿಚಯಿಸುವ ಸಣ್ಣ ಪ್ರಯತ್ನವನ್ನು ಮಾಡಲಾಗಿತ್ತು.

ಸಂಕ್ರಾಂತಿ ಹಬ್ಬದ ಸಾಂಪ್ರದಾಯಿಕ ಆಚರಣೆಯದ ಸಂಕ್ರಾಂತಮ್ಮಗೆ ಪೂಜೆ ಸಲ್ಲಿಸುವುದು ಹಾಗೂ ಬೆಂಕಿಯ ಮೇಲೆ ರಾಸುಗಳನ್ನು ಓಡಿಸುವುದು, ಬೆಂಕಿಯಲ್ಲಿ ಕಿಚ್ಚಾಯಿಸುವುದನ್ನು ಸರಳವಾಗಿ ಆಚರಣೆ ಮಾಡಲಾಯಿತು. ಜನರು ಕೂಡ ಬಹಳ ಉತ್ಸಾಹಕರಾಗಿ ಬಂದು ಈ ಜಾನಪದ ಲೋಕದ ಈ ಸುಗ್ಗಿಯ ಹಬ್ಬವನ್ನ ವೀಕ್ಷಣೆ ಮಾಡಿದ್ದು ವಿಶೇಷವಾಗಿತ್ತು.

ಜಾನಪದ ಲೋಕದ ಸಂಕ್ರಾಂತಿ ಸುಗ್ಗಿ ಹಬ್ಬಕ್ಕೆ ರಾಶಿ ಪೂಜೆ ಮಾಡುವ ಮೂಲಕ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರು ಚಾಲನೆ ನೀಡಿದರು. ಇನ್ನು ಸುಗ್ಗಿ ಹಬ್ಬದಲ್ಲಿ ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷರಾದ ಟಿ.ತಿಮ್ಮೇಗೌಡ, ಪರಿಷತ್ ಮ್ಯಾನೇಜಿಂಗ್ ಟ್ರಸ್ಟಿ ಅದಿತ್ಯ ನಂಜರಾಜ್, ಲೋಕದ ಅಧಿಕಾರಿ ರುದ್ರಪ್ಪ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications