ಚರ್ಮಗಂಟು ರೋಗ; ರಾಮನಗರದಲ್ಲಿ ಒಂದು ತಿಂಗಳು ಜಾನವಾರು ಜಾತ್ರೆ ನಿಷೇಧ
ರಾಮನಗರ, ಅಕ್ಟೋಬರ್, 12; ರಾಜ್ಯಾದ್ಯಂತ ಜಾನುವಾರುಗಳಿಗೆ ಚರ್ಮಗಂಟು ರೋಗ ಹರಡುವುದು ಹೆಚ್ಚಾಗಿಬಿಟ್ಟಿದೆ. ಆದ್ದರಿಂದ ಜಿಲ್ಲೆಯಲ್ಲಿ ರೋಗವು ಹರಡದಂತೆ ಮುನ್ನೆಚರಿಕೆ ಕ್ರಮವಾಗಿ ಅಕ್ಟೋಬರ್ 11ರಿಂದ ನವೆಂಬರ್ 10ರವರೆಗೆ ಒಂದು ತಿಂಗಳ ಕಾಲ ಜಾನುವಾರುಗಳ ಜಾತ್ರೆ, ದನಗಳ ಸಂತೆ ಮತ್ತು ಜಾನುವಾರುಗಳ ಸಾಗಾಣಿಕೆಯನ್ನು ನಿಷೇಧಿಸಲಾಗಿದೆ.
ಈಗಾಗಲೇ ರಾಜ್ಯಾದ್ಯಂತ ಮಾರಕ ಚರ್ಮಗಂಟು ರೋಗ ಉಲ್ಬಣಿಸಿ, ಹಲವಾರು ರಾಸುಗಳು ಈ ಮಾರಕ ಕಾಯಿಲೆಗೆ ಬಲಿಯಾಗುತ್ತಲೇ ಇವೆ. ಈ ಹಿನ್ನೆಲೆ ಮಾರಕ ಚರ್ಮಗಂಟು ರೋಗ ತಡೆಗಟ್ಟುವ ನಿಟ್ಟಿನಲ್ಲಿ ರಾಮನಗರ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಜಿಲ್ಲೆಯಲ್ಲಿ ಜಾನುವಾರು ಜಾತ್ರೆ ಮತ್ತು ಸಾಗಾಣಿಕೆಯನ್ನು ನಿಷೇಧಸಿ ಆದೇಶ ಮಾಡಿದ್ದಾರೆ.
ಹೈನುಗಾರಿಕೆ ಉದ್ಯಮದಲ್ಲಿ ಜಿಲ್ಲೆ ಮುಂಚೂಣಿ
ಜಿಲ್ಲೆ ರೇಷ್ಮೆ ಉತ್ಪಾದನೆಯಲ್ಲಿ ಖ್ಯಾತಿ ಪಡೆದಿದ್ದು, ರೇಷ್ಮೆ ನಗರಿ ಎಂಬ ಹೆಸರು ಪಡೆದಿದೆ. ಜಿಲ್ಲೆಯಲ್ಲಿ ಹೈನುಗಾರಿಕೆಯನ್ನು ನಂಬಿರುವ ಸುಮಾರು 1,45,095 ಕುಟುಂಬಗಳು ಜಾನುವಾರು ಸಾಕಾಣಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಹಾಗೆಯೇ ಜಿಲ್ಲೆಯಲ್ಲಿ ಒಟ್ಟು 6,13,337 ಸಂಖ್ಯೆಯ ಜಾನುವಾರುಗಳಿವೆ. ಅಲ್ಲದೇ ಕೃತಕ ಗರ್ಭಧಾರಣೆ ಪ್ರಮಾಣ ಕೂಡ ಶೇಕಡಾ 68ರಷ್ಟಿದೆ.

ಕೊರೊನಾ ಸಂಕಷ್ಟದ ಕಾಲದಲ್ಲೂ ರೈತನ ಬದುಕು ಕಾಪಾಡಿದ್ದ ಹೈನು ಉದ್ಯಮ ಪ್ರಸ್ತುತ ಕಾಣಿಸಿಕೊಂಡಿರುವ ಚರ್ಮಗಂಟು ಕಾಯಿಲೆಗೆ ತತ್ತರಿಸಿದೆ. ಕೆಲ ತಿಂಗಳುಗಳ ಹಿಂದೆ ರಾಸುಗಳಿಗೆ ಕಾಲು ಬಾಯಿ ಜ್ವರ ಕಾಣಿಸಿಕೊಂಡು ಹೈನುಗಾರಿಕೆಗೆ ಬಾರಿ ಪ್ರಮಾಣದ ಹೊಡೆತ ನೀಡಿತ್ತು. ಇದೀಗ ವಿಚಿತ್ರ ಕಾಯಿಲೆ ಚರ್ಮಗಂಟು ರೋಗದಿಂದ ಹಾಲು ಉತ್ಪಾದಕರು ಆತಂಕಕ್ಕೆ ಒಳಗಾಗಿದ್ದಾರೆ.
ಹಳ್ಳಿಗರಿಗೆ ಜೀವನ ರೂಪಿಸಿದ್ದ ಹೈನುಗಾರಿಕೆ
ಪಟ್ಟಣದಲ್ಲಿ ವ್ಯಾಪಾರ, ಉದ್ಯೋಗ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಗ್ರಾಮೀಣ ಭಾಗದ ಜನರು ಕೊರೊನಾ ಮಹಾಮಾರಿ ಭೀತಿಯಿಂದ ಪಟ್ಟಣ ತೊರೆದು ಮತ್ತೆ ಹಳ್ಳಿಗಳತ್ತ ಮುಖ ಮಾಡಿದ್ದರು. ಆಗ ಅವರ ಬದುಕಿಗೆ ನೆರವಾಗಿದ್ದು ಹೈನುಗಾರಿಕೆ. ಕೋವಿಡ್ ಸೋಂಕು ಕಡಿಮೆಯಾಗಿ ಜನ ಜೀವನ ಸಹಜ ಸ್ಥಿತಿಯತ್ತ ಮರಳಿದಾಗಲೂ ಎಷ್ಟೋ ಜನ ಪಟ್ಟಣಕ್ಕೆ ತೆರಳದೆ ಹೈನುಗಾರಿಕೆಯನ್ನೇ ನಂಬಿಕೊಂಡು ಹಳ್ಳಿಯಲ್ಲಿಯೇ ಬದುಕು ಕಟ್ಟಿಕೊಂಡಿದ್ದಾರೆ. ಮತ್ತೆ ಇದೀಗ ರಾಸುಗಳಿಗೆ ಚರ್ಮಗಂಟು ರೋಗ ಉಲ್ಬಣಿತ್ತಲೇ ಇದ್ದು, ಜನರನ್ನು ಆತಂಕಕ್ಕೆ ತಳ್ಳಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications