ಜಾರಕಿಹೊಳಿ ವಿರುದ್ಧದ ಕೇಸ್ ವಾಪಸ್ ಪಡೆದ ನಂತರ ಕಲ್ಲಹಳ್ಳಿ ಮೊದಲ ಪ್ರತಿಕ್ರಿಯೆ
ರಾಮನಗರ, ಮಾರ್ಚ್ 10: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ದೂರು ವಾಪಸ್ ಪಡೆದ ನಂತರ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
Recommended Video
ಕನಕಪುರದಲ್ಲಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ನನ್ನ ವಕೀಲರು ಹೇಳಿದ ಬಳಿಕ ನಾನು ಠಾಣೆಗೆ ಹೋಗಿ ದೂರು ವಾಪಸ್ ಪಡೆದಿದ್ದೇನೆ. ಐದು ಪುಟಗಳು ಸುದೀರ್ಘವಾಗಿ ಬರೆದಿದ್ದೇನೆ. ದೂರು ವಾಪಸ್ ಪಡೆಯಲು ಹಲವಾರು ಕಾರಣಗಳಿವೆ'' ಎಂದು ತಿಳಿಸಿದರು.
ಪೊಲೀಸರು ಮತ್ತೆ ವಿಚಾರಣೆಗೆ ಕರೆದರೆ ಕಾನೂನಾತ್ಮಕವಾಗಿ ಠಾಣೆಗೆ ಹೋಗುತ್ತೇನೆ, ಸುಮೊಟೋ ಕೇಸ್ ದಾಖಲು ಮಾಡುವುದು, ಬಿಡುವುದು ತನಿಖಾಧಿಕಾರಿಗಳಿಗೆ ಬಿಟ್ಟಿದ್ದು, ಯಾವುದೇ ರಾಜಕಾರಣಕ್ಕೆ ಸೇರಿಕೊಳ್ಳುವ ಇಚ್ಛೆ ಇಲ್ಲವೆಂದರು.

""ನಾನು ಯಾವುದೇ ಒತ್ತಡಗಳಿಗೆ ಮಣೆದಿಲ್ಲ, ಮಾನಸಿಕವಾಗಿ ಹಾಗೂ ಹಲವು ಮಾಧ್ಯಮಗಳಲ್ಲಿ ಷಡ್ಯಂತ್ರ ಮಾಡಿದ್ದಾರೆ. ಗುರುತರ ಆರೋಪಗಳಿಂದ ನಾನು ಮೊದಲು ಮುಕ್ತನಾಗಬೇಕಿದೆ. ಹಲವು ಜನ ನನ್ನ ಮೇಲೆ ಟೀಕೆಗಳನ್ನು ಮಾಡುತ್ತಿದ್ದಾರೆ'' ಎಂದು ಹೇಳೀದರು.
ಯಾರಾದರೂ ದಾಖಲೆಗಳನ್ನು ಇಟ್ಟು ಆರೋಪ ಮಾಡಿದರೆ ನಾನು ಯಾವುದೇ ಹೋರಾಟ ಮಾಡುವುದಿಲ್ಲ. ಕೆಲವರು ತೆವಲಿಗೆ ಮಾತನಾಡ್ತಿದ್ದಾರೆ ಅಷ್ಟೇ. ಮಾತನಾಡೋದು ಸುಲಭ, ಆದರೆ ಮಾತಿನಂತೆ ಹೋರಾಟ ಮಾಡಲು ಕಷ್ಟ ಇದೇ, ತೆವಲಿಗೆ ಮಾತನಾಡಬಾರದು ಎಂದು ಮಾಜಿ ಸಿಎಂ ಎಚ್ಡಿಕೆ ಹೆಸರು ಬಳಸದೇ ದಿನೇಶ್ ಕಲ್ಲಹಳ್ಳಿ ಟಾಂಗ್ ನೀಡಿದರು.
ನನ್ನ ಘನತೆಗೆ ಧಕ್ಕೆಯಾಗಿದ್ದರಿಂದ ಪ್ರಕರಣದಿಂದ ಹಿಂದೆ ಸರಿದಿದ್ದೇನೆ, ಮಾಹಿತಿಗಳನ್ನು ಮಾತ್ರ ಅಧಿಕಾರಿಗಳಿಗೆ ಕೊಟ್ಟು ಸತ್ಯ ಇದ್ದರೆ ತನಿಖೆ ಮಾಡಿ ಎಂದು ಕೊಟ್ಟಿದ್ದೇನೆ ಎಂದರು.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಹಾನಾಯಕ ಇದ್ದಾರೆ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಕಲ್ಲಹಳ್ಳಿ, ಯಾರು ಮಹಾ ನಾಯಕ ಎಂಬುದು ನನಗೆ ಗೊತ್ತಿಲ್ಲ. ನನ್ನ ವಿರುದ್ಧ ಷಡ್ಯಂತ್ರ ಮಾಡಿದವನ್ನು ಜೈಲಿಗೆ ಕಳುಹಿಸುವೆ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ, ಕಾನೂನಾತ್ಮಕವಾಗಿ ಹೋರಾಟ ಮಾಡಲು ಎಲ್ಲರಿಗೂ ಅವಕಾಶವಿದೆ ಎಂದು ತಿಳಿಸಿದರು.
ರಮೇಶ್ ಜಾರಕಿಹೊಳಿ ಅವರು ಹೋರಾಟ ಮಾಡಲಿ, ನಾನು ಕಾನೂನಾತ್ಮಕವಾಗಿ ಹೋರಾಟ ಮಾಡಲು ಸಿದ್ಧನಿದ್ದೇನೆ ಎಂದು ಕನಕಪುರದ ಕಲ್ಲಹಳ್ಳಿ ನಿವಾಸದಲ್ಲಿ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಹೇಳಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications