ಗೃಹಿಣಿ ಹಿಂದೆ ಓಡಿ ಹೋದ ಮಗ: ಹೆತ್ತವರು ವಿಷ ಸೇವಿಸಿ ಆತ್ಮಹತ್ಯೆ
ರಾಮನಗರ, ಡಿಸೆಂಬರ್ 13: ಇರುವುದು ಒಬ್ಬನೇ ಮಗ ಒಳ್ಳೆಯ ಕಡೆಗೆ ಸಂಬಂಧ ನೋಡಿ ಬೇಗ ಮದುವೆ ಮಾಡಬೇಕು ಎನ್ನುವಷ್ಟರಲ್ಲಿ ಹೆತ್ತವರ ಆಸೆಗೆ ತಣ್ಣೀರೆರೆಚಿ ಗೃಹಿಣಿ ಹಿಂದೆ ಓಡಿಹೋದ ಮಗನ ನೆನಪಿನಲ್ಲಿ ಹೆತ್ತವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ಶಂಕರ್ ಐಎಎಸ್ ಅಕಾಡೆಮಿ ಸ್ಥಾಪಕ ಆತ್ಮಹತ್ಯೆಗೆ ಶರಣು
ಕನಕಪುರ ತಾಲೂಕಿನ ಕಲ್ಲಿಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಸಿದ್ದರಾಜು (52), ಸಾಕಮ್ಮ(42) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮಗ ಮನು ಓಡಿಹೋದ ಯುವಕ.
ಬ್ಲೂವ್ಹೇಲ್ ಆತ್ಮಹತ್ಯೆ ಕೂಪಕ್ಕೆ ಕಲಬುರಗಿಯ ಬಾಲಕ ಬಲಿ
ಅದೇ ಗ್ರಾಮದ ಪಲ್ಲವಿ ಎಂಬ ಗೃಹಿಣಿಯ ಜೊತೆಗೆ ಓಡಿ ಹೋಗಿದ್ದಕ್ಕೆ ಇಡೀ ಕುಟುಂಬ ತಲೆ ತಗ್ಗಿಸುವಂತಾಗಿದೆ ಎಂದು ನೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ಹೆಚ್ಚಿನ ಮಾಹಿತಿ ಪಡೆಯುತ್ತಿದ್ದಾರೆ.
Comments
English summary
In a heart breaking incident, an old age couple committed suicide after their son ran away with married woman.
Story first published: Thursday, December 13, 2018, 10:49 [IST]