ರೇಷ್ಮೆ ನಗರಿಯಲ್ಲಿ 108 ದಂಪತಿಗಳಿಂದ ಶನಿ ಶಾಂತಿ ಪೂಜೆ
ರಾಮನಗರ, ಜನವರಿ 24: ಜ್ಯೋತಿಷ್ಯ ಶಾಸ್ತ್ರಗಳ ಪ್ರಕಾರ ಶನಿ ಗ್ರಹ ಸರಿ ಸುಮಾರು 30 ವರ್ಷಗಳ ಬಳಿಕ ರಾಶಿ ಚಕ್ರಗಳ ಪ್ರಯಾಣ ಮುಗಿಸಿ ತನ್ನ ಸ್ವಕ್ಷೇತ್ರ ಮಕರ ರಾಶಿಗೆ ಪ್ರವೇಶಿಸುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ದೇಶದಾದ್ಯಂತ ವಿಶೇಷ ಹೋಮ ಹವನಗಳು ನಡೆಯುತ್ತಿವೆ.
ಅದೇ ರೀತಿ ರೇಷ್ಮೆನಗರಿ ರಾಮನಗರದಲ್ಲೂ ಇಂದು ವಿಶೇಷ ಪೂಜೆ ನಡೆಯಿತು. 108 ದಂಪತಿಗಳಿಂದ ಶನಿ ದೇವರ ಶಾಂತಿ ಪೂಜೆ ಹಾಗೂ ಮಹಾ ಮೃತ್ಯುಂಜಯ ಹೋಮ ಹಮ್ಮಿಕೊಳ್ಳಲಾಯಿತು.
ತಾಲೂಕಿನ ಲಕ್ಷ್ಮೀಪುರ ಗ್ರಾಮದ ಶನಿಮಹಾತ್ಮನ ದೇವಾಲಯದಲ್ಲಿ ಇಂದು ಶನಿ ದೇವರ ಪೂಜೆ ಹಾಗೂ ಮಹಾ ಮೃತ್ಯುಂಜಯ ಹೋಮ ನಡೆಯಿತು. ಸುಮಾರು 108 ದಂಪತಿಗಳು ಈ ಪೂಜೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಲೋಕ ಕಲ್ಯಾಣ ಹಾಗೂ ಮನಸ್ಸಿನ ನೆಮ್ಮದಿಗಾಗಿ ಈ ಪೂಜೆ ಹಮ್ಮಿಕೊಳ್ಳಲಾಗಿತ್ತು.

ಶನಿ ಗ್ರಹವು ಮಕರ ರಾಶಿ ಪ್ರವೇಶದಿಂದಾಗಿ ಧನಸ್ಸು ರಾಶಿ, ಮಕರ ರಾಶಿ ಮತ್ತು ಕುಂಭ ರಾಶಿಗಳಿಗೆ ಸಾಡೇ ಸಾಥ್ ಕಾಡಲಿದೆ ಎನ್ನುವ ಭೀತಿಯಿಂದ ಜನರು ತಮ್ಮ ನೆಮ್ಮದಿಗೋಸ್ಕರ ಹಾಗೂ ಮುಂದೆ ಮಾಡುವ ಕೆಲಸಗಳಿಗೂ ಯಾವುದೇ ಅಡ್ಡಿಯಾಗಬಾರದು ಎಂದು ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಶನಿ ಶಾಂತಿ ಪೂಜೆ ಹಾಗೂ ಮಹಾ ಮೃತ್ಯುಂಜಯ ಹೋಮದಲ್ಲಿ ದಂಪತಿಗಳಷ್ಟೇ ಅಲ್ಲದೇ, ಹಲವು ಮಠದ ಗುರುಗಳು ಪೂಜೆಯಲ್ಲಿ ಪಾಲ್ಗೊಂಡು ಸಾರ್ವಜನಿಕರನ್ನು ಉದ್ದೇಶಿಸಿ ಆಶೀರ್ವಚನ ನೀಡಿದರು. ಇನ್ನು ಪೂಜೆಗೆ ಬಂದಿರುವ ಸುಮಾರು ಎರಡು ಸಾವಿರ ಜನರಿಗೆ ಭಕ್ತಾಧಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications