ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರ ಸಮಸ್ಯೆ ಚರ್ಚಿಸದ ಸರ್ಕಾರದ ವಿರುದ್ಧ ರೈತರಿಂದ ಉಗಿಯಿರಿ ಚಳುವಳಿ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ನವೆಂಬರ್ 21 : ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ 7ನೇ ದಿನಕ್ಕೆ ಕಾಲಿಟ್ಟಿದೆ. ಅದರೆ ಇದುವರೆಗೂ ಸರ್ಕಾರ ಪರ ರೈತರ ಸಮಸ್ಯೆಗಳನ್ನು ಚರ್ಚಿಸಲು ಮುಂದಾಗಿಲ್ಲ ಎಂದು ಆರೋಪಿಸಿ ರಾಮನಗರದ ಮಿನಿ ವಿಧಾನಸೌಧ ಮುಂದೆ ರೈತರು ಥೂ.. ಎಂದು ಉಗಿಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತ, ಸರ್ಕಾರಕ್ಕೆ ಥೂ, ಅಧಿವೇಶನದಲ್ಲಿ ರೈತರ ಸಮಸ್ಯೆ ಬಗ್ಗೆ ಮಾತನಾಡದ ಸಚಿವರಿಗೆ ಥೂ,ಥೂ ಥೂ ಎಂದು ಉಗಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

Spit Government movement by these farmers

ಈ ಭಾರಿ ಉತ್ತಮ ಮಳೆಯಾಗಿದೆ. ರೈತರು ಉತ್ತಮ ಜೀವನ ನಡೆಸುತ್ತಿದ್ದಾರೆ ಎಂದು ಸರ್ಕಾರ ಭ್ರಮೆಯಲ್ಲಿದೆ. ತಮ್ಮ ಅನುಕೂಲವಾದ ವಿಷಯಗಳನ್ನು ಮಾತ್ರ ಸದನದಲ್ಲಿ ಚರ್ಚೆ ಮಾಡುತ್ತಾ ಕಾಲಹರಣ ಮಾಡುವ ಮೂಲಕ ರೈತರಿಗೆ ದ್ರೋಹ ಎಸಗುತ್ತಿದ್ದಾರೆ ಎಂದು ರೈತಸಂಘ ಆರೋಪಿಸಿದರು.

ಅಲ್ಲದೇ ಇನ್ನುಳಿದ ದಿನಗಳಲ್ಲಾದರೂ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅಧಿವೇಶನದಲ್ಲಿ ಚರ್ಚೆ ನಡೆಸಬೇಕು. ಅಲ್ಲದೇ ನೆನಗುದಿಗೆ ಬಿದ್ದಿರುವ ಮೇಕೆದಾಟು ಯೋಜನೆ ಬಗ್ಗೆ ಜನಪ್ರತಿನಿಧಿಗಳು ಒಮ್ಮತದ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವಂತೆ ಆಗ್ರಹಿಸಿದರು.

English summary
Winter session happening in Belgaum has failed to discuss the farmers problems which made the farmers upset. Ramanagara farmers have decided to start spit Government movement against the State Government to protest inactiveness on farmers problems.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X