ಚನ್ನಪಟ್ಟಣದಲ್ಲಿ 'ಶನಿಮಹಾತ್ಮನ' ಎತ್ತಂಗಡಿಗೆ ಮುಂದಾದ ಅಧಿಕಾರಿಗಳು
ರಾಮನಗರ, ಜನವರಿ 30: ಫುಟ್ ಪಾತ್ ಮೇಲಿದ್ದ ಶನಿ ದೇವಾಲಯ ತೆರವಿಗೆ ಮುಂದಾದ ಚನ್ನಪಟ್ಟಣ ಅಧಿಕಾರಿಗಳ ನಡೆಗೆ ವ್ಯಾಪಾರಿಗಳು ತಡೆ ಹಾಕಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಚನ್ನಪಟ್ಟಣದ ರಸ್ತೆ ಬದಿಯಲ್ಲಿ ನಿರ್ಮಿಸಲಾಗಿದ್ದ ಶನಿಮಹಾತ್ಮ ದೇವಾಲಯವನ್ನು ತಾಲ್ಲೂಕು ಆಡಳಿತ ತೆರವುಗೊಳಿಸಲು ಮುಂದಾಗಿತ್ತು, ಈ ವಿಚಾರಕ್ಕೆ ಸಂಬಂಧಿಸಿದಂತೆ ತಹಸೀಲ್ದಾರ್ ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಪಟ್ಟಣದ ಅಂಚೆ ಕಚೇರಿ ರಸ್ತೆಯಲ್ಲಿ ನಡೆದಿದೆ.
ಶನಿಮಹಾತ್ಮ ದೇವಸ್ಥಾನವನ್ನು ತಹಶೀಲ್ದಾರ್ ಸುದರ್ಶನ್, ನಗರಸಭೆ ಸಿಬ್ಬಂದಿಗಳೊಂದಿಗೆ ತೆರವುಗೊಳಿಸಲು ಮುಂದಾದರು. ದೇವಸ್ಥಾನ ತೆರವಿಗೆ ಅಧಿಕಾರಿಗಳು JCB ಯಂತ್ರ ಬಳಸಿಕೊಂಡು ತೆರವುಗೊಳಿಸಲು ಮುಂದಾದಾಗ, ತಹಶೀಲ್ದಾರ್ ಸುದರ್ಶನ್ ಹಾಗೂ ಜನರ ನಡುವೆ ಕೆಲಕಾಲ ವಾಕ್ಸಮರ ನಡೆದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಬೀದಿ ಬದಿಯ ವ್ಯಾಪಾರಿಗಳು ಫುಟ್ ಪಾತ್ ಮೇಲೆಯೇ ಶನಿ ದೇವರ ಪುಟ್ಟ ದೇವಾಲಯವನ್ನು ನಿರ್ಮಾಣ ಮಾಡಿಕೊಂಡು ಪೂಜೆ ನಡೆಸಿಕೊಂಡು ಬರುತ್ತಿದ್ದರು. ಯಾವುದೇ ಮಾಹಿತಿ ಕೊಡದೇ ಅಧಿಕಾರಿಗಳು ಏಕಾಏಕಿ ಬಂದು ದೇವಸ್ಥಾನ ತೆರವುಗೊಳಿಸಲು ಮುಂದಾದರು.

ತೆರವಿಗೆ ಮುಂದಾದ ತಹಶೀಲ್ದಾರ್ ನಡೆಗೆ ಸ್ಥಳೀಯ ಜನರು ಹಾಗೂ ಫುಟ್ ಪಾತ್ ವ್ಯಾಪಾರಿಗಳು ಫುಲ್ ಗರಂ ಆಗಿದ್ದರು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ದೇವಸ್ಥಾನ ತೆರವು ಕಾರ್ಯವನ್ನ ಅಧಿಕಾರಿಗಳು ಕೈ ಬಿಟ್ಟರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications