Breaking; ಕನಕಪುರದ ಕಬ್ಬಾಳು ಬೆಟ್ಟದಲ್ಲಿ ಪ್ರೇಮಿಗಳ ಆತ್ಮಹತ್ಯೆ
ರಾಮನಗರ, ಸೆಪ್ಟೆಂಬರ್ 26: ವಿವಾಹಿತ ಯುವತಿ ಪ್ರಿಯಕರನ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರದಲ್ಲಿ ನಡೆದಿದೆ. ತಾಲೂಕಿನ ಕಬ್ಬಾಳು ಗ್ರಾಮದ ಕಬ್ಬಾಳು ಬೆಟ್ಟದಿಂದ ಹಾರಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಭಾನುವಾರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ರಾಮನಗರ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರದಲ್ಲಿ ಒಂದಾದ ಕಬ್ಬಾಳು ಬೆಟ್ಟದಲ್ಲಿ ಈ ಘಟನೆ ನಡೆದಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು ಕೊಳೆತ ಸ್ಥಿತಿಯಲ್ಲಿ ಶವಗಳು ಇಂದು ಸಿಕ್ಕಿವೆ.
ಮೃತಪಟ್ಟವರನ್ನು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅಂಚಿಟಿ ತಾಲೂಕು ಉರುಗ್ಯಂ ಗ್ರಾಮದ ಚಂದನ (20) ಹಾಗೂ ಆಕೆಯ ಪ್ರಿಯಕರ ಅದೇ ಗ್ರಾಮದ ಸತೀಶ್ ಕುಮಾರ್ (24) ಎಂದು ಗುರುತಿಸಲಾಗಿದೆ.

ಚಂದನಳನ್ನು ಆಕೆಯ ಪೋಷಕರು ತಮ್ಮ ಗ್ರಾಮದ ಪಕ್ಕವಿರುವ ದೊಡ್ಡಮರಳ್ಳಿ ಗ್ರಾಮದ ಗಣೀಶ್ ಎಂಬಾತನ ಜೊತೆ ಕಳೆದ ವರ್ಷ ಮದುವೆ ಮಾಡಿಕೊಟ್ಟಿದ್ದರು. ಗಣೇಶ್ ಪ್ರಸ್ತುತ ಕನಕಪುರದ ವಾಸು ಹೋಟೆಲ್ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದು, ಕುಟುಂಬದೊಡನೆ ವಾಸವಾಗಿದ್ದ.
ಒಂದೇ ಗ್ರಾಮದವರಾದ ಚಂದನ ಮತ್ತು ಸತೀಶ್ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಬೇರೊಬ್ಬನ ಜೊತೆ ಮದುವೆ ಮಾಡಿಕೊಟ್ಟಿದ್ದರಿಂದ ಆಕೆ ಬೇಸತ್ತಿದ್ದಳು ಎಂದು ಹೇಳಲಾಗುತ್ತಿದೆ.
ಸೆಪ್ಟೆಂಬರ್ 22ರಂದು ಚಂದನ ಮನೆಯಿಂದ ಕಾಣೆಯಾಗಿದ್ದು, ಆಕೆ ಎಲ್ಲಿಯೂ ಪತ್ತೆಯಾಗಿರಲಿಲ್ಲ. ಇಂದು ತನ್ನ ಪ್ರಿಯಕರ ಸತೀಶ್ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.
ಬೆಟ್ಟದಲ್ಲಿ ಓಡಾಡುವ ದನಗಾಯಿಗಳು ಹಾಗೂ ಗ್ರಾಮಸ್ಥರಿಗೆ ಕೊಳೆತು ನಾರುತ್ತಿದ್ದ ಎರಡು ಶವಗಳು ಕಂಡಿವೆ. ತಕ್ಷಣ ಅವರು ಸಾತನೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕನಕಪುರ ಸಿಪಿಐ ಕೃಷ್ಣ ಹಾಗು ಸಾತನೂರು ಪಿಎಸ್ಐ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಆತ್ಮಹತ್ಯೆ ಮಾಡಿಕೊಂಡ ಚಂದನಳ ತಾಯಿ ರತ್ನಮ್ಮ ತಮ್ಮ ಪುತ್ರಿ ಕಾಣೆಯಾಗಿರುವ ಬಗ್ಗೆ ಕನಕಪುರನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶವಗಳನ್ನು ಶವ ಪರೀಕ್ಷೆಗಾಗಿ ಕಳುಹಿಸಲಾಗಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications