ಚನ್ನಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರಿಗೆ ಹಿಂಸೆ: ಖಡಕ್ ಎಚ್ಚರಿಕೆ ಕೊಟ್ಟ ನಿಖಿಲ್
ರಾಮನಗರ, ಡಿಸೆಂಬರ್ 07: ರಾಮನಗರ ಜಿಲ್ಲೆಯ ಚನ್ನಪಟ್ಟಣದ ಉಪ ಚುನಾವಣೆ ಬಳಿಕ ಕ್ಷೇತ್ರದಲ್ಲಿ ದ್ವೇಷದ ರಾಜಕೀಯ ಆರಂಭವಾಗಿದೆ. ನವೆಂಬರ್ 13ರಂದು ಉಪ ಚುನಾವಣೆ ನಡೆದು, ನವೆಂಬರ್ 23ರಂದು ಚುನಾವಣಾ ಫಲಿತಾಂಶ ಘೋಷಣೆಯಾಗಿತ್ತು. ಕಾಂಗ್ರೆಸ್ನ ಸಿ. ಪಿ. ಯೋಗೇಶ್ವರ 25,413 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಚುನಾವಣೆ ಇಡೀ ರಾಜ್ಯದಲ್ಲಿ ಕುತೂಹಲಕ್ಕೆ ಕಾರಣವಾಗಿತ್ತು. ಉಪ ಚುನಾವಣೆ ಸೋಲುವ ಮೂಲಕ ರಾಮನಗರ ಜಿಲ್ಲೆ ಜೆಡಿಎಸ್ ಮುಕ್ತವಾಗಿತ್ತು.
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 87,229 ಮತಗಳನ್ನು ಪಡೆದು ಸಿ. ಪಿ. ಯೋಗೇಶ್ವರ ವಿರುದ್ಧ ಸೋಲು ಕಂಡಿದ್ದರು. ಈ ಸೋಲಿನಿಂದಾಗಿ ಚನ್ನಪಟ್ಟಣದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ತೀವ್ರ ಹಿನ್ನಡೆ ಆಗಿತ್ತು.

ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ: ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಶನಿವಾರ ಫೇಸ್ ಬುಕ್ ಪೋಸ್ಟ್ ಒಂದನ್ನು ಹಾಕಿದ್ದಾರೆ. ಉಪ ಚುನಾವಣೆ ಬಳಿಕ ಚನ್ನಪಟ್ಟಣದಲ್ಲಿ ದ್ವೇಷ ರಾಜಕಾರಣ ನಡೆಯುತ್ತಿದೆ ಎಂದು ಹೇಳಿದ್ದು, ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.
ಫೇಸ್ಬುಕ್ ಪೋಸ್ಟ್ನಲ್ಲಿ ಅವರು, 'ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಂತರ ಜೆಡಿಎಸ್ ಕಾರ್ಯಕರ್ತರನ್ನು ಅಲ್ಲಿನ ಕಾಂಗ್ರೆಸ್ ಪಕ್ಷದ ಹೊಸ ಶಾಸಕ, ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿ ಹಿಂಸಿಸುತ್ತಿರುವುದು ಕಳವಳಕಾರಿ' ಎಂದು ಹೇಳಿದ್ದಾರೆ.
'ಕ್ಷುಲ್ಲಕ ವಿಷಯಗಳನ್ನಿಟ್ಟುಕೊಂಡು ವಿರೋಧ ಪಕ್ಷಗಳ ಕಾರ್ಯಕರ್ತರು, ಮುಖಂಡರಿಗೆ ಕಿರುಕುಳ ನೀಡುವುದು ಅಕ್ಷಮ್ಯ. ಪ್ರಜಾಪ್ರಭುತ್ವದಲ್ಲಿ ಇಂಥ ನಡೆ ಒಳ್ಳೆಯದಲ್ಲ, ಅದನ್ನು ಸಹಿಸುವ ಪ್ರಶ್ನೆಯೂ ಇಲ್ಲ' ಎಂದು ನಿಖಿಲ್ ತಿಳಿಸಿದ್ದಾರೆ.
'ಆಡಳಿತ ಯಂತ್ರ ದುರುಪಯೋಗ ಮಾಡಿಕೊಂಡು ನಮ್ಮ ಕಾರ್ಯಕರ್ತರಿಗೆ ತೊಂದರೆ ಕೊಟ್ಟರೆ ಕೈಕಟ್ಟಿ ಕೂರುವ ಜಾಯಮಾನ ನಮ್ಮದಲ್ಲ. ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ, ಕಾಂಗ್ರೆಸ್ ನಾಯಕರ ತಾಳಕ್ಕೆ ತಕ್ಕಂತೆ ಕುಣಿಯುವ ಯಾವುದೇ ಇಲಾಖೆಯ ಅಧಿಕಾರಿಗಳು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ' ಎಂದು ಎಚ್ಚರಿಸಿದ್ದಾರೆ.
'ಕಾಂಗ್ರೆಸ್ ಪಕ್ಷದ ಈ ಹೊಸ ಶಾಸಕ ಕ್ಷೇತ್ರದ ಕೆಲಸ ಮಾಡಬೇಕು, ಕೊಟ್ಟ ಭರವಸೆಗಳನ್ನು ಮೊದಲು ಈಡೇರಿಸಬೇಕು. ಅದು ಬಿಟ್ಟು ಜೆಡಿಎಸ್ ಕಾರ್ಯಕರ್ತರನ್ನು ಮುಗಿಸುತ್ತೇನೆ, ದಮನ ಮಾಡುತ್ತೇನೆ ಎನ್ನುವುದು ಅಹಂಕಾರ. ನಮ್ಮ ಕಾರ್ಯಕರ್ತರನ್ನು ರಕ್ಷಣೆ ಮಾಡಿಕೊಳ್ಳುವುದು ನಮಗೆ ಗೊತ್ತಿದೆ' ಎಂದು ಪೋಸ್ಟ್ನಲ್ಲಿ ನಿಖಿಲ್ ತಿಳಿಸಿದ್ದಾರೆ.
'ನಾನು ನ್ಯಾಯದಲ್ಲಿ ನಂಬಿಕೆ ಇರಿಸಿದ್ದೇನೆ. ಚನ್ನಪಟ್ಟಣ ಹಾಗೂ ರಾಜ್ಯದ ಜನತೆಯ ಪರವಾಗಿ ಸದಾ ಇರುತ್ತೇನೆ. ಅವರಿಗಾಗಿ ದುಡಿಯುತ್ತೇನೆ. ಹೆದರಿಸಿ, ಬೆದರಿಸುವ ರಾಜಕೀಯಕ್ಕೆ ಬಗ್ಗಲ್ಲ. ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಇಂಥ ಗೊಡ್ಡು ಬೆದರಿಕೆಗಳಿಗೆ ಜಗ್ಗುವ ಅಗತ್ಯವಿಲ್ಲ. ನಿಮ್ಮೊಂದಿಗೆ ನಾನಿದ್ದೇನೆ, ಇಡೀ ಪಕ್ಷವಿದೆ. ಒಟ್ಟಾಗಿ ಹೋರಾಟ ಮಾಡೋಣ. ಸೋತಿದ್ದೇವೆಯೇ ಹೊರತು ಸತ್ತಿಲ್ಲ' ಎಂದು ಪೋಸ್ಟ್ ಹಾಕಿದ್ದಾರೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಜೆಡಿಎಸ್ ಪಕ್ಷ ಗೆದ್ದಿತ್ತು. ಎಚ್. ಡಿ. ಕುಮಾರಸ್ವಾಮಿ 96592 ಮತಗಳನ್ನು ಪಡೆದು ಬಿಜೆಪಿಯ ಸಿ. ಪಿ. ಯೋಗೇಶ್ವರ (80677 ಮತ) ಸೋಲಿಸಿದ್ದರು. 2024ರ ಲೋಕಸಭೆ ಚುನಾವಣೆಗೆ ಮಂಡ್ಯದಿಂದ ಕಣಕ್ಕಿಳಿದು ಗೆಲುವು ಸಾಧಿಸಿದ ಎಚ್. ಡಿ. ಕುಮಾರಸ್ವಾಮಿ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಆದ್ದರಿಂದ ಉಪ ಚುನಾವಣೆ ಎದುರಾಗಿತ್ತು.
ಉಪ ಚುನಾವಣೆ ಘೋಷಣೆಯಾಗುವಾಗ ಸಿ. ಪಿ. ಯೋಗೇಶ್ವರ ಬಿಜೆಪಿಯಲ್ಲಿಯೇ ಇದ್ದರು. ಅವರೇ ಉಪ ಚುನಾವಣೆಗೆ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಎಂದು ಅಂದಾಜಿಸಲಾಗಿತ್ತು. ಆದರೆ ನಾಮಪತ್ರ ಸಲ್ಲಿಕೆಗೆ ಮೂರು ದಿನ ಇರುವಾಗ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು. ಆಗ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ನಿಖಿಲ್ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿತ್ತು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications