ಸುಮಲತಾ ಬಿಜೆಪಿ ಸೇರ್ಪಡೆಗೆ ತಾಂತ್ರಿಕ ತೊಂದರೆ: ಸಿಪಿ ಯೋಗೀಶ್ವರ್
ರಾಮನಗರ ಜೂನ್ 3: ಹಳೇ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಪಕ್ಷಕ್ಕೆ ಮಂಡ್ಯ ಸಂಸದೆ ಸುಮಲತಾ ಅವರಿಗೆ ಆಹ್ವಾನ ನೀಡಿದ್ದೇವೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ, ಹಾಲಿ ವಿಧಾನ ಪರಿಷತ್ ಸದಸ್ಯ ಸಿ. ಪಿ. ಯೋಗೀಶ್ವರ್ ಈಗ ಉಲ್ಟಾ ಹೊಡೆದಿದ್ದಾರೆ.
ಶುಕ್ರವಾರ ಮಾತನಾಡಿದ ಅವರು, "ಸುಮಲತಾ ಅವರು ಬಿಜೆಪಿ ಪಕ್ಷದ ಜೊತೆ ಸೇರಲು ಸಾಧ್ಯವಿಲ್ಲ. ಅವರು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗಲು ಆಗಲ್ಲ. ಹಾಗಾಗಿ ಸಂಸದೆ ಬೆಂಬಲಿಗರು ಮೊದಲ ಹಂತದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ" ಎಂದರು.
ನಗರದ ಕಲ್ಯಾಣ ಮಂಟಪದಲ್ಲಿ ಮೋದಿ ಸರ್ಕಾರದ ಎಂಟು ವರ್ಷಗಳ ಸಾಧನೆ ವಿವರಿಸಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯೋಗೀಶ್ವರ್, "ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆಗೆ ಪಕ್ಷಾಂತರ ವಿರೋಧಿ ಕಾನೂನು ಅಡ್ಡ ಬರುತ್ತದೆ" ಎಂದು ವಿವರಿಸಿದರು.

"ಯಾವುದೇ ಶಾಸಕರಾಗಲಿ, ಸಂಸದರಾಗಲಿ ಸ್ವತಂತ್ರವಾಗಿ ಆಯ್ಕೆಯಾದ ಆರು ತಿಂಗಳುಗಳೊಳಗೆ ಯಾವುದಾದರು ಪಕ್ಷ ಸೇರ್ಪಡೆಯಾಗಬಹುದು, ನಂತರದಲ್ಲಿ ಅಧಿಕೃತವಾಗಿ ಸೇರ್ಪಡೆ ಸಾಧ್ಯವಿಲ್ಲ. ಪಕ್ಷಕ್ಕೆ ಬೆಂಬಲ ನೀಡಬಹುದು ಹಾಗಾಗಿ ಅವರ ಬೆಂಬಲಿಗರು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ನಾವು ಸುಮಲತಾ ಅವರೊಂದಿಗೆ ಮಾತನಾಡಿದ್ದೇವೆ, ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಸುಮಲತಾ ಬೆಂಬಲಿಗ ಸಚ್ಚಿದಾನಂದ ಪಕ್ಷ ಸೇರ್ಪಡೆ ಆಗಲಿದ್ದಾರೆ. ಅಲ್ಲಿ ಸ್ಥಳೀಯ ಚುನಾವಣೆ ಇರುವ ಹಿನ್ನಲೆಯಲ್ಲಿ ಇತರರ ಪಕ್ಷ ಸೇರ್ಪಡೆ ತಡವಾಗಿದೆ" ಎಂದು ತಿಳಿಸಿದರು.
ಮಂಡ್ಯ ಅಭಿವೃದ್ಧಿಗೆ ಸರ್ಕಾರ ಬದ್ದ; "ಮಂಡ್ಯದ ಮೈ ಷುಗರ್ ಸಕ್ಕರೆ ಕಾರ್ಖಾನೆ ಮತ್ತೆ ಪ್ರಾರಂಭವಾಗಬೇಕಿದೆ, ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರ ಹಾಗೂ ನೀರಾವರಿ ಯೋಜನೆಗಳ ಕೆಲಸ ಆಗಬೇಕು ಎಂದು ಮುಖ್ಯಮಂತ್ರಿಗಳ ಮುಂದೆ ಸಂಸದೆ ಸುಮಲತಾ ಬೇಡಿಕೆ ಇಟ್ಟಿದ್ದಾರೆ. ಸಂಸದೆಯಾಗಿ ಅವರ ಕ್ಷೇತ್ರದ ಅಭಿವೃದ್ಧಿಗೆ ಬೇಡಿಕೆ ಸಲ್ಲಿಸಿದ್ದಾರೆ. ಮಂಡ್ಯ ಅಭಿವೃದ್ಧಿ ದೃಷ್ಟಿಯಿಂದ ಸುಮಲತಾ ಅವರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸುತ್ತಿದೆ ಮುಂದಿನ ದಿನಗಳಲ್ಲಿ ಸಂಸದೆ ಸುಮಲತಾ ಅವರು ಯಾವ ನಿರ್ಧಾರ ತೆಗೆದೆಕೊಳ್ಳುತ್ತಾರೆ? ಕಾದು ನೋಡೋಣ" ಎಂದು ಯೋಗೀಶ್ವರ್ ಹೇಳಿದರು.
ಬಿಜೆಪಿ ಮೂರನೇ ಅಭ್ಯರ್ಥಿಯಲ್ಲಿ ಗೆಲ್ಲುವ ವಿಶ್ವಾಸ: ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಹೊಂದಾಣಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಸಿ. ಪಿ. ಯೋಗೇಶ್ವರ್, "ಇದು ನಮ್ಮ ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ, ಇದುವರೆಗೂ ಇಂತಹ ಬೆಳವಣಿಗೆ ನಡೆದಿಲ್ಲ. ಹಿಂದೆ ಕಾಂಗ್ರೆಸ್ -ಜೆಡಿಎಸ್ ಇಬ್ಬರೂ ಸೇರಿ ಸರ್ಕಾರ ಮಾಡಿದ್ದರು. ದೇವೇಗೌಡರನ್ನು ರಾಜ್ಯಸಭೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಎರಡು ಪಕ್ಷಗಳು ಸೇರಿ ಅವಿರೋಧವಾಗಿ ಕಳುಹಿಸಲಾಗಿತ್ತು" ಎಂದು ತಿಳಿಸಿದರು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications