ಅಂತರ್ಜಾತಿ ವಿವಾಹ ವಿರೋಧಿಸಿ ಹಕ್ಕು ನಿವೃತ್ತಿ ಪತ್ರಕ್ಕೆ ಸಹಿ ಪಡೆದ ವಧುವಿನ ಕುಟುಂಬ
ರಾಮನಗರ, ಫೆಬ್ರವರಿ 25: ಪ್ರೀತಿಸಿ ಅನ್ಯ ಜಾತಿ ಯುವಕಕನ್ನು ಮದುವೆಯಾಗಿದ್ದನ್ನು ಯುವತಿಯ ಕುಟುಂಬದವರು ವಧುವಿನಿಂದ ಹಕ್ಕು ನಿವೃತ್ತಿ ಪತ್ರಕ್ಕೆ ಸಹಿ ಪಡೆದ ಘಟನೆ ರಾಮನಗರ ಜಿಲ್ಲೆಯ ಮಾಗಡಿಯ ಉಪನೋಂದಣಾಧಿಕಾರಿ ಕಚೇರಿಯಲ್ಲಿ ನಡೆದಿದೆ.
ಪರಸ್ಪರ ಪ್ರೀತಿಸಿ ಪೋಷಕರ ವಿರೋಧದ ನಡುವೆಯು ಮದುವೆಯಾಗಿದ್ದ ನವ ದಂಪತಿಗಳು, ತಮ್ಮ ಮದುವೆಯನ್ನು ಕಾನೂನು ಬದ್ಧಗೊಳಿಸಲು ಪಟ್ಟಣದ ಉಪ ನೋಂದಣಿ ಕಚೇರಿಗೆ ಬಂದಿದ್ದ ಸಮಯದಲ್ಲಿ ಅಂತರ್ಜಾತಿ ವಿವಾಹವನ್ನು ವಿರೋಧಿಸಿದ ವಧುವಿನ ಪೋಷಕರು, ನವ ದಂಪತಿಗಳಿಂದ ಆಸ್ತಿ ಹಕ್ಕು ನಿವೃತ್ತಿ ಪತ್ರಕ್ಕೆ ಸಹಿ ಪಡೆದು ತವರು ಮನೆ ಸಂಬಂಧ ಮುರಿದುಕೊಂಡಿದ್ದಾರೆ.
ಮಾಗಡಿ ತಾಲ್ಲೂಕಿನ ಸೋಲೂರು ಗ್ರಾಮದ ಎಸ್.ಹರ್ಷಿತಾ ಹಾಗೂ ಸಿ.ನವೀನ್ ಕುಮಾರ್ ಪರಸ್ಪರ 5 ವರ್ಷಗಳಿಂದ ಪ್ರೀತಿಸುತ್ತಿದ್ದರು. ಇದಕ್ಕೆ ಹರ್ಷಿತಾ ಪೋಷಕರು ವಿರೋಧ ವ್ಯಕ್ತಪಡಿಸಿದರು. ಪೋಷಕರ ವಿರೋಧದ ನಡುವೆಯೂ ಹರ್ಷಿತಾ ಹಾಗೂ ನವೀನ್ ಜ.31 ರಂದು ಗ್ರಾಮದಲ್ಲೇ ಮದುವೆಯಾಗಿದ್ದರು.

ತನ್ನ ಪೋಷರ ವರ್ತನೆಯಿಂದ ಮನನೊಂದು ಮಾತನಾಡಿದ ನವವಧು ಹರ್ಷಿತಾ, ""ನಾನು, ನವೀನ್ ಪ್ರೀತಿಸಿ ಮದುವೆಯಾಗಿದ್ದೇವೆ. ಈ ಮದುವೆಗೆ ನಮ್ಮ ಪೋಷಕರ ವಿರೋಧ ಇತ್ತು. ಹಾಗಾಗಿ ನನಗೂ ನನ್ನ ಪೋಷಕರಿಗೂ ಯಾವುದೇ ಸಂಬಂಧವಿಲ್ಲ ಅಂತಾ ನನ್ನ ಕೈಯಲ್ಲಿ ಪತ್ರ ಬರೆಸಿಕೊಂಡಿದ್ದಾರೆ. ಮುಂದೆ ಯಾವುದೇ ಅನಾಹುತ ಸಂಭವಿಸಿದರೆ ನಮ್ಮ ಪೋಷಕರೇ ಹೊಣೆಯಾಗುತ್ತಾರೆ'' ಎಂದು ತನ್ನ ಆತಂಕ ವ್ಯಕ್ತಪಡಿಸಿದರು.
Recommended Video
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications