ತೂಕ ಹೆಚ್ಚಿಸಲು ಮೇಕೆಗಳಿಗೆ ಬಲವಂತವಾಗಿ ನೀರು ಕುಡಿಸುವ ಅಮಾನವೀಯ ಕೃತ್ಯ ಬಯಲು
ರಾಮನಗರ, ಡಿಸೆಂಬರ್12: ಹಣದಾಸೆಗಾಗಿ ಮೇಕೆ ಮಾರಾಟಗಾರರು ತೂಕ ಹೆಚ್ಚಿಸಲು ಬಲವಂತವಾಗಿ ಮೇಕೆಗಳಿಗೆ ಪೈಪ್ ಮೂಲಕ ನೀರು ಕುಡಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ವ್ಯಾಪಾರಸ್ಥರು ಮೂಕ ಪ್ರಾಣಿಯ ಜೀವಕ್ಕೆ ಕುತ್ತು ತರುವ ಜೊತೆಗೆ ಅಮಾಯಕ ಗ್ರಾಹಕರನ್ನು ವಂಚಿಸುತ್ತಿರುವ ಘಟನೆ ಮಾಗಡಿ ಸಂತೆಯಲ್ಲಿ ನಡೆದಿದೆ ಎನ್ನುವ ಆರೋಪ ಕೇಳಿಬಂದಿದೆ.
ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ನಡೆಯುವ ಶುಕ್ರವಾರ ಸಂತೆಯಲ್ಲಿ ಮೇಕೆಗಳಿಗೆ ಬಲವಂತವಾಗಿ ನೀರು ಕುಡಿಸಿ ತೂಕ ಹೆಚ್ಚಿಸಿ ರೈತರಿಗೆ ಮೋಸ ಮಾಡುತ್ತಿರುವ ವಿಚಿತ್ರ ದಂಧೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ. ಹಣಕ್ಕಾಗಿ ಮಾನವೀಯತೆಯನ್ನೇ ಮರೆತ ವ್ಯಾಪಾರಸ್ಥರು, ಮೂಕ ಪ್ರಾಣಿಗಳನ್ನು ಸಾವಿನ ದವಡೆಗೆ ನೂಕುತ್ತಿದ್ದಾರೆ ಎಂದು ಪ್ರಾಣಿ ಪ್ರಿಯರು ಕಿಡಿಕಾರಿದ್ದಾರೆ.

ರಾಜ್ಯದಲ್ಲೇ ಉತ್ತಮ ತಳಿಯ ಕುರಿ ಮೇಕೆಗಳಿಗೆ ಹೆಸರು ಪಡೆದಿರುವ ಮಾಗಡಿ ಕೋಟೆ ಮೈದಾನದಲ್ಲಿ ನಡೆಯುವ ಶುಕ್ರವಾರ ಸಂತೆಯಲ್ಲಿ ವ್ಯಾಪಾರಸ್ಥರು ಈ ರೀತಿಯ ಕೆಲಸ ಮಾಡಿದ್ದಾರೆ ಎನ್ನಲಾಗಿದೆ. ಇದರಿಂದ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಕುರಿ ಹಾಗೂ ಮೇಕೆ ಖರೀದಿಸಲು ಬರುವ ಜನರಿಗೆ ವಂಚನೆಯಾಗುತ್ತಿದೆ. ಮೇಕೆಗಳ ತೂಕ ಹೆಚ್ಚಾಗಬೇಕೆಂದು ಬಲವಂತವಾಗಿ ನೀರುಣಿಸುತ್ತಿರುವ ದಲ್ಲಾಳಿಗಳು ಗ್ರಾಹಕರನ್ನು ವಂಚಿಸುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಉತ್ತರ ಕರ್ನಾಟಕದ ಭಾಗದಿಂದ ಕುರಿ ಮೇಕೆಗಳನ್ನು ಮಾಗಡಿ ಶುಕ್ರವಾರ ಸಂತೆಗೆ ತರುವ ವ್ಯಾಪಾರಿಗಳು, ಸಂತೆ ತಲುಪುವ ಮೊದಲೇ ನಿರ್ಜನ ಪ್ರದೇಶದಲ್ಲಿ ವಾಹನ ನಿಲ್ಲಿಸಿ ಸಣ್ಣ ಪಂಪ್ ಬಳಸಿ ಮೇಕೆಗಳ ಬಾಯಿಗೆ ಪೈಪ್ ತುರುಕಿ ಬಲವಂತವಾಗಿ ಹಲವು ಲೀಟರ್ ನೀರನ್ನು ತುಂಬಿ ಮೇಕೆ ಗ್ರಾತವನ್ನು ಹಿಗ್ಗಿಸಿ ತೂಕ ಬರುವಂತೆ ಮಾಡಿ ಸಂತೆಗೆ ಬರುವ ಅಮಾಯಕ ಜನರನ್ನು ಸುಲಭವಾಗಿ ವಂಚಿಸುತ್ತಿದ್ದಾರೆ.

ಬಲವಂತವಾಗಿ ನೀರು ತುಂಬಿಸಿರುವ ಮೇಕೆ ಹೆಚ್ಚೆಂದರೆ ಮೂರು ಅಥವಾ ನಾಲ್ಕು ದಿನ ಮಾತ್ರ ಬದುಕುತ್ತದೆ. ಅಷ್ಟರಲ್ಲಿ ಮೇಕೆ ಖರೀದಿಸಿದ ಗ್ರಾಹಕ ಸೂಕ್ತ ಚಿಕಿತ್ಸೆ ನೀಡಿದರೆ ಮಾತ್ರ ಮೇಕೆ ಬದುಕುತ್ತದೆ. ಹಣ ಗಳಿಸುವ ಉದ್ದೇಶದಿಂದ ಮೂಕ ಪ್ರಾಣಿಗಳ ಪ್ರಾಣಕ್ಕೂ ಕುತ್ತು ತರುವುದರ ಜೊತೆಗೆ ಖರೀದಿಸುವ ಅಮಾಯಕ ಗ್ರಾಹಕರಿಗೂ ಅನ್ಯಾಯ ಎಸಗುತ್ತಿರುವ ಖದೀಮರ ಕೃತ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಈ ವಿಡಿಯೋ ಗಮನಿಸಿ ಸಂಬಂಧಪಟ್ಟ ಅಧಿಕಾರಿಗಳು ಇಂತಹ ಅಮಾನವೀಯ ಕೃತ್ಯ ಎಸಗುತ್ತಿರುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ರೈತರು ಆಗ್ರಹಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications