ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇಯಲ್ಲಿ ತಗ್ಗಿದ ಮೃತರ ಸಂಖ್ಯೆ-ಅಲೋಕ್ ಕುಮಾರ್ ಟ್ವೀಟ್
ರಾಮನಗರ, ಆಗಸ್ಟ್ 05: ಅಪಘಾತಗಳ ಹೆದ್ದಾರಿ ಎಂಬ ಕುಖ್ಯಾತಿ ಪಡೆದಿದ್ದ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪೋಲಿಸ್ ಇಲಾಖೆ ಕೈಗೊಂಡ ಕಠಿಣ ಕ್ರಮಗಳಿಂದ ಇದೀಗ ಅಪಘಾತ ಸಂಖ್ಯೆ ಇಳಿಮುಖವಾಗಿದೆ. ಈ ಸಂಬಂದ ಎಡಿಜಿಪಿ ಅಲೋಕ್ ಕುಮಾರ್ ಅವರು ಟ್ವೀಟ್ ಮಾಡುವ ಮೂಲಕ ಪೊಲೀಸ್ ಸಿಬ್ಬಂದಿ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಡಿಸಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಸಾಂಸ್ಕೃತಿಕ ನಗರ ಮೈಸೂರು ಎರಡು ನಗರಗಳನ್ನು ತ್ವರಿತವಾಗಿ ಸಂಪರ್ಕಿಸುವ ನಿಟ್ಟಿನಲ್ಲಿ ದಶಪಥ ಹೆದ್ದಾರಿ ನಿರ್ಮಾಣವಾಗಿತ್ತು. ಆದರೆ ಎಕ್ಸ್ಪ್ರೆಸ್ ಹೈವೇ ಉದ್ಘಾಟನೆಯ ನಂತರದಲ್ಲಿ ದಿನ ದಿಂದ ದಿನಕ್ಕೆ ಅಪಘಾತ ಸಂಖ್ಯೆ ಹೆಚ್ಚಾಗಿ ಅಪಘಾತಗಳಲ್ಲಿ ನೂರಾರು ಮಂದಿ ತಮ್ಮ ಪ್ರಾಣ ಕಳೆದುಕೊಂಡ ಹಿನ್ನಲೆಯಲ್ಲಿ ಅಪಘಾತಗಳ ಹೆದ್ದಾರಿ ಎಂದು ಹಣೆಪಟ್ಟಿ ಪಡೆದುಕೊಂಡಿತ್ತು.

ಮೈಸೂರು ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಅಖಾಡಕ್ಕಿಳಿದ ಪೊಲೀಸ್ ಇಲಾಖೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳಿಗೆ ಕಾರಣವಾದ ಅಂಶಗಳ ಬಗ್ಗೆ ತಜ್ಞರೊಂದಿಗೆ ಹೆದ್ದಾರಿ ಪರಿಶೀಲನೆ ನಡೆಸಿ ಅಪಘಾತ ವಲಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ವರದಿ ನೀಡಿತು.
ಒಂದು ಅಂಕಿಗಿಳಿದ ಸಾವಿನ ಸಂಖ್ಯೆ
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ದಶಪಥ ಹೆದ್ದಾರಿ ಪರಿಶೀಲನೆ ಕೈಗೊಂಡ ಬೆನ್ನಲ್ಲೇ ಎಡಿಜಿಪಿ ಅಲೋಕ್ ಕುಮಾರ್ ಸ್ವತಃ ಎರಡು ಬಾರಿ ಬೆಂಗಳೂರುನಿಂದ ಮೈಸೂರುವರೆಗೆ ಪರಿಶೀಲನೆ ನಡೆಸಿದರು. ತಮ್ಮೊಂದಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಇಂಜಿನಿಯರ್ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಅಧ್ಯಯನ ನಡೆಸಿ ಅಪಘಾತ ತಡೆಗೆ ಹಲವು ಕ್ರಮಗಳ ಸಲಹೆ ನೀಡಿದ್ದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸ್ ಇಲಾಖೆ ಹಾಗೂ ಹೆದ್ದಾರಿ ಪ್ರಾಧಿಕಾರ ಅಳವಡಿಸಿಕೊಂಡ ಅಗತ್ಯ ಕ್ರಮಗಳಿಂದ ಅಪಘಾತ ಸಂಖ್ಯೆ ಇಳಿಮುಖವಾಗಿದೆ. ಬೆಂಗಳೂರಿನಿಂದ ಮೈಸೂರಿನ ವರೆಗಿನ ಎಕ್ಸ್ಪ್ರೆಸ್ ಹೈವೇಯಲ್ಲಿ ಮೇ ತಿಂಗಳಿನಲ್ಲಿ 29 ಮಂದಿ ಸಾವನ್ನಪ್ಪಿದರು. ಜೂನ್ ತಿಂಗಳಿನಲ್ಲಿ 28 ಮಂದಿ ಅಪಘಾತಗಳಲ್ಲಿ ತಮ್ಮ ಪ್ರಾಣ ಕಳೆದುಕೊಂಡಿದ್ದರು.
ಹೆದ್ದಾರಿಯಲ್ಲಿ ಸ್ಪಿಡ್ ಲಿಮಿಟ್, ಕ್ಯಾಮರಾ ಅಳವಡಿಕೆ ಹಾಗೂ ಲಘು ವಾಹನ ಸಂಚಾರ ನಿಷೇಧ ಸೇರಿದಂತೆ ಕೈಗೊಂಡ ಕಠಿಣ ಕ್ರಮಗಳಿಂದ ಜುಲೈ ತಿಂಗಳಿನಲ್ಲಿ ನಡೆದ ಅಪಘಾತಗಳಲ್ಲಿ ಕೇವಲ 8 ಮಂದಿ ಸಾವನ್ನಪ್ಪಿದ್ದಾರೆ. ಅವರಲ್ಲಿ ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ 3 ಮಂದಿ ಹಾಗೂ ಮಂಡ್ಯ ಜಿಲ್ಲಾ ವ್ಯಾಪ್ತಿಯ ನಡೆದ ಅಪಘಾತಗಳಲ್ಲಿ 5 ಮಂದಿ ಮೃತಪಟ್ಟಿದ್ದಾರೆ. ಒಟ್ಟಾರೆ ಹೆದ್ದಾರಿ ಅಪಘಾತದಲ್ಲಿ ಎರಡಂಕಿ ಇದ್ದ ಸಾವಿನ ಸಂಖ್ಯೆ ಒಂದಂಕಿಗೆ ಇಳಿದಿದೆ.
ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ಹೈವೇಯಲ್ಲಿ ಸಾವಿನ ಸಂಖ್ಯೆ ಇಳಿಮುಖವಾಗಿರುವ ಹಿನ್ನಲೆಯಲ್ಲಿ ಟ್ವೀಟ್ ಮಾಡುವ ಮೂಲಕ ಎಡಿಜಿಪಿ ಅಲೋಕ್ ಕುಮಾರ್ ಅವರು ಪೊಲೀಸರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮುಂದಿನ ದಿನಗಳಲ್ಲಿ ಒಂದಂಕಿಗಿಳಿದಿರುವ ಸಾವಿನ ಸಂಖ್ಯೆಯನ್ನು ಶೂನ್ಯಕ್ಕಿಳಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಅಪಘಾತ ಸಂಖ್ಯೆ ಮತ್ತಷ್ಟು ಇಳಿಮುಖ ಆದರೆ ವೇಗ ಮಿತಿ ಪ್ರತಿ ಗಂಟೆಗೆ 100 ರಿಂದ 120ಕಿ.ಮೀಗೆ ಏರಿಸಲು ಚಿಂತನೆ ನಡೆದಿದೆ ಎನ್ನಲಾಗಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು










Click it and Unblock the Notifications