ರಾಮನಗರದಲ್ಲಿ ಕೊರೊನಾ ವೈರಸ್ ಗೆ ಮೂರನೇ ಬಲಿ
ರಾಮನಗರ, ಜೂನ್ 21: ಮಹಾಮಾರಿ ಕೊರೊನಾ ವೈರಸ್ ಸೋಂಕಿಗೆ ರಾಮನಗರ ತಾಲ್ಲೂಕಿನ ಮಾಗಡಿ ಪಟ್ಟಣದ ನಿವಾಸಿ (86 ವರ್ಷ) ಸಾವನ್ನಪ್ಪದ್ದಾನೆ. ವೃತ್ತಿಯಲ್ಲಿ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ ಈತನ ಮಗನಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿತ್ತು. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಮಗ ಚಿಕಿತ್ಸೆ ಪಡೆಯುತ್ತಿದ್ದನು.
Recommended Video
ಮೆಕಾನಿಕ್ ತಂದೆ, ತಾಯಿ, ಅತ್ತಿಗೆ ಹಾಗೂ 15 ವರ್ಷದ ಬಾಲಕಿ ಸೇರಿ ಎಲ್ಲರನ್ನೂ ಆರೋಗ್ಯ ಅಧಿಕಾರಿಗಳು ಕ್ವಾರಂಟೈನ್ ಮಾಡಿದ್ದರು. ಈಗ ಅನಾರೋಗ್ಯದಿಂದ ಬಳಲುತ್ತಿದ್ದ ಮೆಕಾನಿಕ್ ತಂದೆ ಸಾವನ್ನಪ್ಪಿದ್ದು, ಸಾವಿನ ಬಳಿಕ ಗಂಟಲು ದ್ರವ ಪರೀಕ್ಷೆಯಿಂದ ಕೊರೊನಾ ವೈರಸ್ ಸೋಂಕಿರುವುದು ದೃಢವಾಗಿದೆ.
ಭಾನುವಾರ ಕಂಕಣ ಸೂರ್ಯಗ್ರಹಣ ಹಿನ್ನೆಲೆ ಕೊರೊನಾ ವೈರಸ್ ನಿವಾರಣೆಗಾಗಿ ಮತ್ತು ದೇಶದ ಗಡಿ ಕಾಯುತ್ತಿರುವ ವೀರ ಯೋಧರ ಹೆಸರಿನಲ್ಲಿ ವಿಶೇಷ ಪೂಜೆ ಮಾಡಲಾಯಿತು. ಗಣಪತಿ ಹೋಮ, ನವಗ್ರಹ ಪೂಜೆ, ಅರುಣಯಾಗ, ಅಗ್ನಿ ಹೋಮವನ್ನು ರಾಮನಗರದಲ್ಲಿ ನೆರವೇರಿಸಲಾಯಿತು.

ಕಂಕಣ ಸೂರ್ಯಗ್ರಹಣದ ಪ್ರಾರಂಭದಿಂದಲೂ ಮಂತ್ರಘೋಷ, ದೀಪಾರಾಧನೆಮಾಡಿ ಪ್ರಸನ್ನಾಂಭ ಸಮೇತ ಅರ್ಕೇಶ್ವರ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜಾ ಕೈಂಕರ್ಯ ಹಮ್ಮಿಕೊಳ್ಳಲಾಗಿತ್ತು.
ದುಷ್ಟ ಶಕ್ತಿಗಳ ಸಂಹಾರ, ಲೋಕ ಕಲ್ಯಾಣಾರ್ಥವಾಗಿ ಅರ್ಕೇಶ್ವರ ಸ್ವಾಮಿ ದೇಗುಲದ ಪ್ರಧಾನ ಅರ್ಚಕ ದತ್ತಾತ್ರೇಯ ಶಾಸ್ತ್ರಿ ನೇತೃತ್ವದಲ್ಲಿ ಪೂಜೆ, ಪ್ರಾರ್ಥನೆ ಮಾಡಲಾಯಿತು.

ಪಶ್ಚಿಮಾಭಿಮುಖವಾಗಿ ಅರ್ಕಾವತಿ ನದಿ ದಡದಲ್ಲಿ ಅರ್ಕೇಶ್ವರ ಸ್ವಾಮಿ ದೇಗುಲವಿದ್ದು, ಜಗತ್ತಿನಾದ್ಯಂತ ಮಹಾಮಾಹರಿಯಂತೆ ಕಾಡುತ್ತಿರುವ ಕೊರೊನಾ ವೈರಸ್ ನಾಶವಾಗಲಿ ಹಾಗೂ ನಮ್ಮ ದೇಶದ ಗಡಿ ಕಾಯುತ್ತಿರುವ ವೀರ ಯೋಧರಿಗೆ ದೇವರ ಅನುಗ್ರಹವಿರಲಿ. ಯೋಧರ ಮನೋಸ್ಥೈರ್ಯ, ಶಕ್ತಿ ಮತ್ತಷ್ಟು ಹೆಚ್ಚಾಗಲೆಂದು ಪ್ರಾರ್ಥನೆ ಮಾಡಲಾಯಿತು.
-
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು












Click it and Unblock the Notifications