ಪ್ರತಿಭಟನೆ ನಡೆಸಿದ್ದ 45 ಕಾರ್ಮಿಕರನ್ನು ಕೆಲಸದಿಂದ ವಜಾ ಮಾಡಿದ ಟೊಯೊಟಾ ಕಂಪನಿ
ರಾಮನಗರ, ಅಕ್ಟೋಬರ್ 2: ರಾಮನಗರ ಜಿಲ್ಲೆ ಬಿಡದಿ ಕೈಗಾರಿಕಾ ವಲಯದಲ್ಲಿರುವ ಏಷ್ಯಾದ ಅತಿ ದೊಡ್ಡ ಕಾರು ತಯಾರಿಕಾ ಕಾರ್ಖಾನೆ ಟೊಯೊಟಾ ಕಿರ್ಲೋಸ್ಕರ್ ಕಂಪನಿ ಕಾರ್ಮಿಕ ವಿರೋಧ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸುಮಾರು ನಾಲ್ಕು ತಿಂಗಳುಗಳ ಕಾಲ ಪ್ರತಿಭಟನೆ ನಡೆಸಿದ್ದ 66 ಕಾರ್ಮಿಕರ ಪೈಕಿ ಸುಮಾರು 45 ಕಾರ್ಮಿರನ್ನು ಟೊಯೊಟಾ ಆಡಳಿತ ಮಂಡಳಿ ಕೆಲಸದಿಂದ ವಜಾ ಮಾಡಿದೆ.
45 ಕಾರ್ಮಿಕರ ವಜಾ ಮಾಡಿರುವ ಹಿನ್ನಲೆಯಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಟೊಯೊಟಾ ಆಡಳಿತ ಮಂಡಳಿ, ತಾನು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ಸಮರ್ಥಿಸಿಕೊಂಡಿದೆ. ಇನ್ನುಳಿದ 21 ನೌಕರರ ವಿರುದ್ಧ ಸಣ್ಣ ಶಿಸ್ತಿನ ಕ್ರಮಗಳೊಂದಿಗೆ ಕೆಲಸಕ್ಕೆ ತೆಗೆದುಕೊಂಡಿದೆ.
ಕಾರ್ಖಾನೆ ವ್ಯವಸ್ಥಾಪಕರಿಗೆ ಬೆದರಿಕೆ ಹಾಕಿ, ನಿಂದನೆ ಮಾಡಿದ್ದ ಟೊಯೊಟಾ ಕಾರ್ಮಿಕ ಯೂನಿಯನ್ ಪದಾಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸುವ ಕಂಪನಿ ನಿರ್ಧಾರದ ವಿರುದ್ಧ ಯೂನಿಯನ್ ಕಾನೂನುಬಾಹಿರ ಮುಷ್ಕರ ನಡೆಸಿದ್ದು ದುರಾದೃಷ್ಟಕರ. ಮುಷ್ಕರವನ್ನು ಸರ್ಕಾರ ನಿಷೇಧಿಸಿದ ಹೊರತಾಗಿಯೂ ಸಂಘವು ನಾಲ್ಕು ತಿಂಗಳುಗಳವರೆಗೆ ಮುಷ್ಕರವನ್ನು ವಿಸ್ತರಿಸಿತ್ತು.

ಕಾನೂನು ಬಾಹಿರ ಮುಷ್ಕರದ ಅವಧಿಯಲ್ಲಿ 66 ನೌಕರರು ಬೆದರಿಕೆ, ಕಂಪನಿಯ ಆಸ್ತಿಗೆ ಹಾನಿಗೆ ಯತ್ನ, ಮಾನನಷ್ಟ, ಹಲ್ಲೆ ಮುಂತಾದ ಗಂಭೀರ ದುಷ್ಕೃತ್ಯಗಳಲ್ಲಿ ಭಾಗಿಯಾಗಿದ ಪರಿಣಾಮ, ಅವರನ್ನು ಅಮಾನತುಗೊಳಿಸುವ ವಿಚಾರಣೆಗೆ ಒಳಪಡಿಸಲಾಯಿತು.
ಟೊಯೊಟಾ ಕಂಪನಿಯು ಶಿಸ್ತಿನ ವಿಚಾರಣೆಯನ್ನು ಮೂರನೇ ವ್ಯಕ್ತಿಯಿಂದ, ನ್ಯಾಯಯುತ ಮತ್ತು ಪಾರದರ್ಶಕ ರೀತಿಯಲ್ಲಿ ನಡೆಸಲಾಯಿತು. ವಿಚಾರಣೆಯ ಪ್ರಕ್ರಿಯೆಯಲ್ಲಿ ಅಮಾನತುಗೊಂಡ ಸದಸ್ಯರಿಗೆ ತಮ್ಮ ಪ್ರಕರಣವನ್ನು ಸಮರ್ಥಿಸಿಕೊಳ್ಳಲು ಅಗತ್ಯವಾದ ಅವಕಾಶಗಳನ್ನು ಒದಗಿಸಲಾಯಿತು. ಈಗ ವಿಚಾರಣೆಗಳು ಪೂರ್ಣಗೊಂಡ ನಂತರ, ಆಡಳಿತ ಮಂಡಳಿ ಗಂಭೀರ ದುಷ್ಕೃತ್ಯದಲ್ಲಿ ತೊಡಗಿದ್ದ 45 ಕಾರ್ಮಿಕರನ್ನು ಕೆಲಸದಿಂದ ತೆಗೆಯಲು ನಿರ್ಧರಿಸಿದೆ.
ಇನ್ನುಳಿದ 21 ಸದಸ್ಯರನ್ನು ಸಣ್ಣ ಶಿಸ್ತಿನ ಕ್ರಮಗಳೊಂದಿಗೆ ಹಿಂತೆಗೆದುಕೊಳ್ಳಲಾಗಿದೆ. ಕಂಪನಿಯು ತನ್ನ ಉದ್ಯೋಗಿಗಳೊಂದಿಗೆ ಪರಸ್ಪರ ವಿಶ್ವಾಸ ಮತ್ತು ಗೌರವವನ್ನು ಬೆಳೆಸಲು ಮತ್ತು ಅವರ ಕುಟುಂಬಗಳು ಮತ್ತು ಸಮಾಜಕ್ಕೆ ಸಂತೋಷವನ್ನು ಹರಡುವ ಪ್ರಯತ್ನಗಳನ್ನು ಬಲಪಡಿಸುವುದನ್ನು ಮುಂದುವರಿಸುತ್ತದೆ ಎಂದು ಟೊಯೊಟಾ ಕಾರ್ಖಾನೆಯ ಆಡಳಿತ ಮಂಡಳಿ ತನ್ನ ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

45 ನೌಕರರ ವಜಾಕ್ಕೆ ಕಾರ್ಮಿಕ ಸಂಘಟನೆ ಖಂಡನೆ
ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಸಂಸ್ಥೆ ಮತ್ತೆ ತನ್ನ ಹಠಮಾರಿ ಧೋರಣೆ ಮತ್ತು ಕಾರ್ಮಿಕ ವಿರೋಧಿ ನೀತಿಯನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದು, ಈ ಹಿಂದೆ ಪ್ರತಿಭಟನೆ ನಿರತ 66 ಕಾರ್ಮಿಕರನ್ನು ಅಮಾನತ್ತು ಮಾಡಲಾಗಿತ್ತು. ಮತ್ತು 8 ಜನ ಸದಸ್ಯರನ್ನು ಕೆಲಸದಿಂದ ವಜಾ ಮಾಡಿತ್ತು.
ಮುಷ್ಕರ ನಿರತ 66 ಜನ ಸದಸ್ಯರಲ್ಲಿ 45 ಸದಸ್ಯರನ್ನು ಸೇವೆಯಿಂದ ವಜಾ ಮಾಡುವ ಮೂಲಕ, ಟೊಯೊಟಾ ಕಾರ್ಖಾನೆ ಮತ್ತೊಮ್ಮೆ ತನ್ನ ದುರಹಂಕಾರದ ಪರಮಾವಧಿಯನ್ನು ನಿರೂಪಿಸಿದೆ. ಇದನ್ನು ಕಾರ್ಮಿಕ ಸಂಘವು ಅತಿ ಕಠಿಣವಾಗಿ ಖಂಡಿಸುತ್ತದೆ ಎಂದು ಕಾರ್ಮಿಕ ಸಂಘಟನೆ ತಮ್ಮ ಆಕ್ರೋಶ ವ್ಯಕ್ತಪಡಿಸಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications