ಮತ್ತೆ ಮೂರು ಕಾರ್ಮಿಕರನ್ನು ವಜಾ ಮಾಡಿದ ಟೊಯೊಟಾ ಆಡಳಿತ ಮಂಡಳಿ
ರಾಮನಗರ, ಫೆಬ್ರವರಿ 23: ಏಷ್ಯಾದ ಪ್ರಸಿದ್ಧ ಕಾರು ತಯಾರಿಕ ಕಂಪನಿ ಟೊಯೊಟಾ ಕಿರ್ಲೋಸ್ಕರ್ ಕಾರ್ಖಾನೆಯ ಆಡಳಿತ ಮಂಡಳಿ ಮತ್ತು ಕಾರ್ಮಿಕರ ನಡುವಿನ ಬಿಕ್ಕಟ್ಟು ತಾರಕ್ಕೇರಿದೆ.
ಹಲವು ಸುತ್ತಿನಲ್ಲಿ ನಡೆದ ಸರ್ಕಾರ, ಟೊಯೊಟಾ ಆಡಳಿತ ಮಂಡಳಿ ಮತ್ತು ಕಾರ್ಮಿಕರ ನಡುವೆ ನಡೆದ ಸಂದಾನ ಸಭೆಗಳು ವಿಫಲವಾಗಿದ್ದು, ಈ ನಡುವೆ ಕೆಲಸಕ್ಕೆ ಹಾಜರಾಗುತ್ತಿದ್ದ ಕೆಲ ಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಮೂರು ಮಂದಿ ಧರಣಿ ನಿರತ ಕಾರ್ಮಿಕರನ್ನು ಆಡಳಿತ ಮಂಡಳಿ ವಜಾಗೊಳಿಸಿದೆ.
ಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಕಾರ್ಮಿಕ ಸಂಘಟನೆ ಪ್ರಮುಖ ಸದಸ್ಯರಾದ ಬಸವರಾಜ್ ಹವಾಲ್ದಾರ್, ರಾಜಶೇಖರ ಮೂರ್ತಿ ಮತ್ತು ಅರಣ್ ಕುಮಾರ್ ಎಂಬ ಮೂರು ಮಂದಿ ಪ್ರತಿಭಟನಾ ನಿರತ ಕಾರ್ಮಿಕರನ್ನು ಟೊಯೊಟಾ ಆಡಳಿತ ಮಂಡಳಿ ಕೆಲಸದಿಂದ ವಜಾ ಮಾಡಿದೆ.

ಫೆ.22 ರಂದು ಕೆಲಸಕ್ಕೆ ಹಾಜರಾಗುತ್ತಿದ್ದ ಕೆಲ ಕಾರ್ಮಿಕರ ಮೇಲೆ ಕಾರ್ಮಿಕ ಸಂಘಟನೆಯ ಐವರು ಸಕ್ರಿಯ ಸದಸ್ಯರು ನಿಂದಿಸಿ, ಹಲ್ಲೆ ನಡೆಸಿದ್ದಾರೆ. ಈ ಇದರಿಂದ ಇಬ್ಬರು ಕೆಲಸಗಾರರು ಗಾಯಗೊಂಡಿದ್ದಾರೆ. ಅವರನ್ನು ಕಂಪನಿಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಹಲ್ಲೆಗೊಳಗಾದವರಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದರು ಎಂದು ಕಂಪನಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಕಳೆದ ವರ್ಷ ನ.9 ರಂದು ಆರಂಭವಾದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಕಾರ್ಮಿಕರ ಪ್ರತಿಭಟನೆ ಹೊರತಾಗಿಯೂ, ಬಹುತೇಕ ಸದಸ್ಯರು ಕಾರ್ಮಿಕ ಸಂಘಟನೆಗಳ ಆದೇಶಗಳನ್ನು ವಿರೋಧಿಸಿದ್ದಾರೆ. ಪ್ರಸ್ತುತ ಗಾಯಗೊಂಡ ಸದಸ್ಯರ ಆರೋಗ್ಯ ಈಗ ಸ್ಥಿರವಾಗಿದೆ. ಆದರೆ ಇನ್ನೂ ವೈದ್ಯಕೀಯ ವೀಕ್ಷಣೆಯಲ್ಲಿದ್ದಾರೆ.

ಹಿಂಸೆ ಮತ್ತು ದೈಹಿಕ ಹಲ್ಲೆಯ ದುಷ್ಕೃತ್ಯದ ಕಾರಣವನ್ನು ಪರಿಗಣಿಸಿ ಮೂವರು ಕಾರ್ಮಿಕರನ್ನು ವಜಾ ಮಾಡಿದ್ದು, ಕಾರ್ಮಿಕರ ಮೇಲೆ ಹಲ್ಲೆ ಮಾಡಿದ ಇನ್ನೂ ಇಬ್ಬರು ಸದಸ್ಯರ ಗುರುತು ಪತ್ತೆಯಾಗಿಲ್ಲ ಎಂದು ಟೊಯೊಟಾ ಕಂಪನಿ ತಿಳಿಸಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications