ಧರಣಿ ನಿರತ 39 ನೌಕರರನ್ನು ಅಮಾನತ್ತು ಮಾಡಿದ ಟೊಯೋಟಾ ಕಂಪನಿ
ರಾಮನಗರ, ನವೆಂಬರ್ 15: ಟೊಯೋಟಾ ಕಾರ್ಖಾನೆಯ ಕಾರ್ಮಿಕ ವಿರೋಧಿ ನಡುವಳಿಕೆ ಖಂಡಿಸಿ ಕಳೆದ ಏಳು ದಿನಗಳಿಂದ ಟೊಯೋಟಾ ನೌಕರರು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಧರಣಿ ನಿರತ 39 ಜನ ನೌಕರರನ್ನು ಅಮಾನತ್ತು ಮಾಡಿರುವ ಬಗ್ಗೆ ಟೊಯೋಟಾ ಕಿರ್ಲೋಸ್ಕರ್ ಕಂಪನಿ ಪ್ರಕಟಣೆ ಬಿಡುಗಡೆ ಮಾಡಿದೆ.
ಟಿಕೆಎಂ ನವೆಂಬರ್ 10 ರಂದು ಬಿಡದಿಯ ತನ್ನ ಎರಡೂ ಸ್ಥಾವರಗಳಲ್ಲಿ "ಲಾಕೌಟ್' ಘೋಷಿಸಬೇಕಾಯಿತು. ಟಿಕೆಎಂ ವರ್ಕರ್ಸ್ ಯೂನಿಯನ್ ಮತ್ತು ಅದರ ಸದಸ್ಯರು ಕರೆದ ನಿಯಮಬಾಹಿರ ಮುಷ್ಕರದ ಹಿನ್ನೆಲೆಯಲ್ಲಿ ಲಾಕೌಟ್ ಘೋಷಿಸಲಾಗಿದೆ ಎಂದು ಕಂಪನಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ದುಷ್ಕೃತ್ಯಗಳ ವ್ಯವಸ್ಥಿತ ದಾಖಲೆಯನ್ನು ಹೊಂದಿದ್ದ ನೌಕರ
ದುಷ್ಕೃತ್ಯಗಳ ವ್ಯವಸ್ಥಿತ ದಾಖಲೆಯನ್ನು ಹೊಂದಿರುವ ಮತ್ತು ಕಾರ್ಖಾನೆಯ ಆವರಣದಲ್ಲಿ ಶಿಸ್ತು ಉಲ್ಲಂಘನೆ ಮತ್ತು ಸ್ವೀಕಾರಾರ್ಹವಲ್ಲದ ನಡವಳಿಕೆಯಲ್ಲಿ ಭಾಗಿಯಾಗಿದ್ದ ಒಬ್ಬ ನೌಕರನನ್ನು ಅಮಾನತುಗೊಳಿಸಿದ್ದನ್ನು ವಿರೋಧಿಸಿ ಮುಷ್ಕರವನ್ನು ಕಾರ್ಮಿಕರು ಮಾಡುತ್ತಿದ್ದಾರೆ ಎಂದು ಕಂಪನಿ ಆರೋಪಿಸಿದೆ.

ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘನೆ
ಇನ್ನೂ 'ಧರಣಿ ಮುಷ್ಕರ'ದ ಒಂದು ಭಾಗವಾಗಿ, ತಂಡದ ಸದಸ್ಯರು ಕಾನೂನು ಬಾಹಿರವಾಗಿ ಕಂಪನಿಯ ಆವರಣದಲ್ಲಿ ಉಳಿದುಕೊಂಡು ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದರು. ಇದರಿಂದಾಗಿ ಕಾರ್ಖಾನೆಯಲ್ಲಿ ಆತಂಕದ ಪರಿಸ್ಥಿತಿ ಉಂಟಾಗುತ್ತಿತ್ತು. ಇದು ಟಿಕೆಎಂ ಅಧಿಕಾರಿಗಳು ತನ್ನ ಉದ್ಯೋಗಿಗಳ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಗಮನದಲ್ಲಿಟ್ಟುಕೊಂಡು ಬಿಡದಿಯಲ್ಲಿನ ತನ್ನ ಸ್ಥಾವರದಲ್ಲಿ ಲಾಕೌಟ್ ಘೋಷಿಸಬೇಕಾಯಿತು.

ಅಮಾನತುಗೊಳಿಸಿ ವಿಚಾರಣೆ
ಲಾಕೌಟ್ ಘೋಷಣೆಯಾದ ನಂತರ ಯೂನಿಯನ್ ಮತ್ತು ಸದಸ್ಯರು ಕಂಪನಿಯ ಆವರಣದ ಹೊರಗೆ ಕುಳಿತು ಕಂಪನಿಯ ವಿರುದ್ಧ ಘೋಷಣೆ ಕೂಗುತ್ತಾ ಮುಷ್ಕರ ಮುಂದುವರೆಸಿದ್ದಾರೆ. ಈ ವಿವೇಚನ ರಹಿತ ಮತ್ತು ಕಂಪನಿಯ ನಿಯಮಗಳ ಉಲ್ಲಂಘನೆಯ ಮಾಡಿದ ಟಿಕೆಎಂ 39 ಸದಸ್ಯರನ್ನು ಕಂಪನಿಯ ಶಿಸ್ತಿನ ನಿಯಮಗಳಿಗೆ ಅನುಸಾರವಾಗಿ 'ಅಮಾನತುಗೊಳಿಸಿ ವಿಚಾರಣೆ' ಅಡಿಯಲ್ಲಿ ಇರಿಸಲು ನಿರ್ಧರಿಸಿದೆ.

ನೌಕರರ ಸಂಘದ ನಡುವಿನ ಸಂಧಾನ ಸಭೆ
ಅಸ್ತಿತ್ವದಲ್ಲಿರುವ ಸೇವಾ ನಿಯಮಗಳ ಪ್ರಕಾರ ಮತ್ತು ನೈಸರ್ಗಿಕ ನ್ಯಾಯದ ತತ್ವಗಳನ್ನು ಗಮನದಲ್ಲಿಟ್ಟುಕೊಂಡು, ವಿಚಾರಣೆಯ ಪ್ರಕ್ರಿಯೆಯಲ್ಲಿ ಈ ನೌಕರರಿಗೆ ಅವರ ಮುಗ್ಧತೆಯನ್ನು ಸಾಬೀತುಪಡಿಸಲು ಸಾಧ್ಯವಿರುವ ಎಲ್ಲ ಅವಕಾಶಗಳನ್ನು ಒದಗಿಸಲಾಗುತ್ತದೆ.
ಟಿಕೆಎಂ ನಿರ್ವಹಣೆ ಮತ್ತು ನೌಕರರ ಸಂಘದ ನಡುವಿನ ಸಂಧಾನ ಸಭೆ ಸೇರಿದಂತೆ ಸಂಬಂಧಿತ ಮಧ್ಯಸ್ಥಗಾರರೊಂದಿಗೆ ಸಂವಹನ ಮತ್ತು ಸಂವಾದ ನಡೆಯುತ್ತಿದೆ, ಇದರಿಂದಾಗಿ ಸುರಕ್ಷತೆಯ ವಾತಾವರಣದಲ್ಲಿ, ಅದರ ಸ್ಥಾವರದಲ್ಲಿ ಸಹಜತೆಯನ್ನು ಪುನಃಸ್ಥಾಪಿಸಲು ಸಾಧ್ಯವಾಗುತ್ತದೆ ಎಂದು ಕಂಪನಿ ವಿಶ್ವಾಸ ವ್ಯಕ್ತಪಡಿಸಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications