ವಿದ್ಯುತ್ ಸ್ವಾವಲಂಬನೆ ಸಾಧಿಸಿದ ಬಿಡದಿ ಟೊಯೋಟಾ ಘಟಕ
ರಾಮನಗರ, ಸೆಪ್ಟೆಂಬರ್ 20; ಏಷ್ಯಾದಲ್ಲೇ ಅತಿ ದೊಡ್ಡ ಕಾರು ತಯಾರಿಕಾ ಕಾರ್ಖಾನೆಯಾದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿ ತನ್ನ ರಾಮನಗರ ಜಿಲ್ಲೆಯ ಬಿಡದಿ ತಯಾರಿಕಾ ಘಟಕಕ್ಕೆ ಬೇಕಾದ ವಿದ್ಯುತ್ ಅನ್ನು ತಾನೇ ಉತ್ಪಾದನೆ ಮಾಡಿಕೊಳ್ಳುತ್ತದೆ.
"ಸೌರ ವಿದ್ಯುತ್ ಮತ್ತು ನವೀಕರಿಸುವ ಶಕ್ತಿ ಮೂಲಗಳಿಂದ ಘಟಕ ವಿದ್ಯುತ್ ಪಡೆದುಕೊಳ್ಳುತ್ತಿದೆ. ವಿದ್ಯುತ್ ಉತ್ಪಾದನೆಯಲ್ಲಿ ಶೇ 100ರಷ್ಟು ಸ್ವಾವಲಂಬನೆ ಸಾಧಿಸಲಾಗಿದೆ" ಎಂದು ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯ ಜನರಲ್ ಮ್ಯಾನೇಜರ್ ರಾಜೇಂದ್ರ ಹೆಗ್ಡೆ ಹೇಳಿದರು.
ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯ ಆವರಣದಲ್ಲಿ ಮಾತನಾಡಿದ ಅವರು, "ಕಳೆದ ಜೂನ್ 2021ರಿಂದ ಈ ಸಾಧನೆಯನ್ನು ಘಟಕ ಮಾಡಿದೆ. ಬೆಸ್ಕಾಂ ಮತ್ತು ಕೆಪಿಟಿಸಿಎಲ್ನಿಂದ ವಿದ್ಯುತ್ ಸರಬರಾಜಿ ಮೇಲೆ ಅವಲಂಬನೆ ಕಡಿಮೆಯಾಗಿದೆ" ಎಂದರು.

"2050 ರ ವೇಳೆಗೆ ತಮ್ಮ ಕಾರ್ಖಾನೆಯ ತಯಾರಿಕಾ ವ್ಯವಸ್ಥೆಯಲ್ಲಿ ಇಂಗಾಲದ ಡೈ ಆಕ್ಷೈಡ್ ಉತ್ಪಾದನೆ ಶೂನ್ಯಕ್ಕೆ ಇಳಿಸುವುದು ಟೊಯೋಟಾದ ಗುರಿ. ಈ ನಿಟ್ಟಿನಲ್ಲಿ ಸಾಕಷ್ಟು ಸಾಧನೆಗಳು ಆಗುತ್ತಿದೆ" ಎಂದರು.
"ಟೊಯೋಟಾ ಕಾರ್ಖಾನೆಗೆ ಸೇರಿದ 432 ಎಕರೆ ಪ್ರದೇಶದಲ್ಲಿ ಬೀಳುವ ಮಳೆ ನೀರನ್ನು ಸಂಗ್ರಹಿಸಲಾಗುತ್ತಿದೆ. ಇದೇ ನೀರನ್ನು ಸಂಸ್ಕರಿಸಿ ವಾಹನ ತಯಾರಿಕೆಯಲ್ಲಿ ಬಳಸಿಕೊಳ್ಳಲಾಗುತ್ತಿದೆ. ಹೀಗಾಗಿ ಕಾವೇರಿ ನೀರು ಸರಬರಾಜನ್ನು ಕೇವಲ ಮಾನವ ಬಳಕೆಗೆ ಮಾತ್ರ ಸೀಮಿತವಾಗಿದೆ. ಕಾರ್ಖಾನೆಗೆ ಬೇಕಾದ ಶೇ 90 ರಷ್ಟು ನೀರನ್ನು ಪುನರ್ ಬಳಕೆಯಿಂದಲೇ ಪಡೆಯಲಾಗುತ್ತಿದೆ" ಎಂದು ವಿವರಿಸಿದರು.
ಸದ್ಯ ಬಿಡದಿ ಕಾರ್ಖಾನೆಯಲ್ಲಿ ಪ್ರತಿ 2.38 ನಿಮಿಷಕ್ಕೆ ಒಂದು ಇನ್ನೋವಾ ಅಥವಾ ಫಾರ್ಚುನರ್ ಕಾರು ಉತ್ಪಾದನೆಯಾಗುತ್ತಿದೆ. ಮುಂಬರುವ ವರ್ಷಗಳಲ್ಲಿ ಇಂಧನ ಚಾಲಿತ ವಾಹನಗಳ ಬೇಡಿಕೆ ಕಡಿಮೆಯಾಗಲಿದೆ. ವಿದ್ಯುತ್ ಚಾಲಿತ ಕಾರುಗಳು ಮುಂದಿನ ಭವಿಷ್ಯವಾಗಲಿದೆ. ಹೀಗಾಗಿ ಸಂಸ್ಥೆಯೂ ಸಹ ವಿದ್ಯುತ್ ಚಾಲಿತ ವಾಹನಗಳ ತಯಾರಿಕೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳುತ್ತಿದೆ.

ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಉಪಾಧ್ಯಕ್ಷ ಶಂಕರ್ ಮಾತನಾಡಿ, "ಕಳೆದ ಮೂರು ವರ್ಷಗಳಲ್ಲಿ ಟೊಯೋಟಾ ಸುಮಾರು 17 ಸಾವಿರ ಕೋಟಿ ರೂ. ಮೊತ್ತವನ್ನು ವಿವಿಧ ತೆರಿಗೆ ರೂಪದಲ್ಲಿ ಪಾವತಿಸಿದೆ. ಸಂಸ್ಥೆಯ ಸಾಮಾಜಿಕ ಚಟುವಟಿಕೆಗಳು ಬಿಡದಿ ಸುತ್ತಮುತ್ತಲ ಪ್ರದೇಶಗಳು ಮತ್ತು ಜಿಲ್ಲಾ ವ್ಯಾಪ್ತಿಗೆ ಹೆಚ್ಚು ನಡೆಯುತ್ತಿದೆ" ಎಂದರು.
"ಶಿಕ್ಷಣ, ರಸ್ತೆ ಸುರಕ್ಷತೆ, ಪರಿಸರ ಸಂರಕ್ಷಣೆ ಮತ್ತು ತರಬೇತಿ, ವೈಯಕ್ತಿಕ ಸ್ವಚ್ಛತೆ, ಕ್ರೀಡೆಗಳಿಗೆ ಹೆಚ್ಚು ಒತ್ತು ಕೊಡಲಾಗುತ್ತಿದೆ. ಜಿಲ್ಲೆಯಲ್ಲಿ 30 ಮಾದರಿ ಅಂಗನವಾಡಿ ಕೇಂದ್ರಗಳು, 11 ಶಾಲಾ ಕಟ್ಟಡಗಳು, ಪೊಲೀಸರಿಗಾಗಿ ಟ್ರಾಫಿಕ್ ತರಬೇತಿ ಕೇಂದ್ರ, 43 ಶುದ್ದ ಕುಡಿಯುವ ನೀರಿನ ಘಟಕಗ ಸ್ಥಾಪಿಸಲಾಗಿದೆ. ಕೋವಿಡ್ ಸೋಂಕು ಚಿಕಿತ್ಸೆ ಮತ್ತು ನಿಯಂತ್ರಣಕ್ಕೆ ತಮ್ಮ ಸಂಸ್ಥೆ ಆರೋಗ್ಯ ಇಲಾಖೆ ಮತ್ತು ಸರ್ಕಾರಕ್ಕೆ ಸಹಕಾರ ನೀಡುತ್ತಿದೆ. 9.5 ಕೋಟಿ ರೂ ವೆಚ್ಚದಲ್ಲಿ ಸಾಧನ, ಸಲಕರಣೆಗಳನ್ನು ಒದಗಿಸಿದೆ" ಎಂದು ಹೇಳಿದರು.
ಟೊಯೋಟಾ ತನ್ನಲ್ಲಿ ಕೆಲಸ ಮಾಡುವ ಕಾರ್ಮಿಕರ ಕ್ಷೇಮಕ್ಕೆ ಹೆಚ್ಚು ಒತ್ತು ಕೊಡುತ್ತದೆ. ಕಾರ್ಮಿಕರು ತಮ್ಮ ಕುಟುಂಬದೊಂದಿಗೂ ಹೆಚ್ಚು ಸಮಯ ವ್ಯಯಿಸಬೇಕಾಗಿದೆ, ಹೀಗಾಗಿ ವರ್ಷದಲ್ಲಿ 275 ದಿನಗಳ ಮಾತ್ರ ಅವರಿಗೆ ಕೆಲಸವಿರುತ್ತದೆ.
20 ವರ್ಷಗಳ ನಿರಂತರ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರು ಬಡ್ತಿ ಪಡೆದು ಮಾಸಿಕ ಸುಮಾರು 1 ಲಕ್ಷ ರೂ ವೇತನ ಪಡೆಯುತ್ತಿದ್ದಾರೆ. ಕೋವಿಡ್ ಕಾರಣ ಕಳೆದೆರೆಡು ವರ್ಷಗಳಲ್ಲಿ ಬೇಡಿಕೆ ಮತ್ತು ಉತ್ಪಾದನೆ ಕುಸಿದಿದ್ದರೂ ಸಹ ಕಾರ್ಮಿಕರಿಗೆ ಬೋನಸ್ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications