116ನೇ ದಿನವೂ ಮುಂದುವರೆದ ಟೊಯೊಟಾ ಕಾರ್ಮಿಕ ಪ್ರತಿಭಟನೆ
ರಾಮನಗರ, ಮಾರ್ಚ್ 4: ಏಷ್ಯಾದ ಅತಿ ದೊಡ್ಡ ಕಾರು ತಯಾರಿಕಾ ಕಾರ್ಖಾನೆ ಟೊಯೊಟಾ ಕಿರ್ಲೋಸ್ಕರ್ ಕಂಪನಿಯ ಕಾರ್ಮಿಕ ಮುಷ್ಕರ ಹಿಂತೆಗೆತ ಘೋಷಣೆಯ ನಂತರವೂ 116ನೇ ದಿನ ಪ್ರತಿಭಟನೆ ಮುಂದುವರೆದಿದೆ ಎಂದು ಟೊಯೊಟಾ ಕಾರ್ಮಿಕ ಸಂಘಟನೆ ಘೋಷಣೆ ಮಾಡಿದೆ.
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಟೊಯೊಟಾ ಕಾರ್ಮಿಕ ಸಂಘಟನೆ ಅಧ್ಯಕ್ಷ ಚಕ್ಕರೆ ಪ್ರಸನ್ನ ಕುಮಾರ್, ""ಕಳೆದ ವರ್ಷ ನ.10ರಂದು ಕಾರ್ಖಾನೆಯ ಆಡಳಿತ ಮಂಡಳಿಯ ಧೋರಣೆಯನ್ನು ಖಂಡಿಸಿ ಪ್ರಾರಂಭವಾದ ಕಾರ್ಮಿಕರ ಹೋರಾಟ ಇನ್ನೂ ಅಂತ್ಯ ಕಂಡಿಲ್ಲ, ನಮ್ಮ ಬೇಡಿಕೆಗಳು ಈಡೇರುವವರೆಗೆ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತದೆ'' ಎಂದು ಸ್ಪಷ್ಟಪಡಿಸಿದರು.
ಕಾರ್ಮಿಕರು ಮುಚ್ಚಳಿಕೆ ಇಲ್ಲದೇ ಕರ್ತವ್ಯಕ್ಕಾಗಿ ಹಾಜರಾಗಬಹುದು ಎಂದು ಟೊಯೊಟೊ ಮ್ಯಾನೇಜ್ಮೆಂಟ್ ನೋಟಿಸ್ ನೀಡಿದ್ದರಿಂದ, ಯೂನಿಯನ್ ತನ್ನ ಸದಸ್ಯರಿಗೆ ಕರ್ತವ್ಯಕ್ಕಾಗಿ ಹಾಜರಾಗಲು ಸಲಹೆ ನೀಡಿದ್ದು, ಇದು ಕಾರ್ಮಿಕ ಸಂಘಕ್ಕೆ ದೊರೆತ ನೈತಿಕ ವಿಜಯವಾಗಿದೆ. ಆದಾಗ್ಯೂ, ಇತರ ಬೇಡಿಕೆಗಳು ಬಾಕಿ ಉಳಿದಿವೆ. ಆದ್ದರಿಂದ, ಆಂದೋಲನವು ಕಂಪನಿಯ ಒಳಗೆ ಮತ್ತು ಹೊರಗೆ ನಿರಂತರವಾಗಿ ನ್ಯಾಯ ಸಿಗುವವರೆಗೂ ಮುಂದುವರಿಯುತ್ತದೆ'' ಎಂದಿದ್ದಾರೆ.

ಈ ಕೆಳಗಿನ ಬೇಡಿಕೆಗಳನ್ನು ಸಾಕಾರಗೊಳಿಸಲು ಅನಿರ್ದಿಷ್ಟ ಮುಷ್ಕರದಲ್ಲಿ ಅಂತ್ಯಗೊಳ್ಳುವ ಒಂದು ದಿನದ ಮುಷ್ಕರ, ಪ್ರತಿದಿನ ಗೇಟ್ ಮುಂದೆ ಪ್ರತಿಭಟನೆ, ಧರಣಿ, ಸರಣಿ ಉಪವಾಸ ಸತ್ಯಾಗ್ರಹ ರೂಪದಲ್ಲಿ ಆಂದೋಲನವನ್ನು ಮುಂದುವರಿಸಲು ಯೂನಿಯನ್ ನಿರ್ಧರಿಸಿದೆ.

1. ದಿನಾಂಕ 10.11.2020 ರಿಂದ 01.03 2021 ರವರೆಗಿನ ಲಾಕ್ ಔಟ್ ಅವಧಿಗೆ ಪೂರ್ಣ ವೇತನ ನೀಡಬೇಕು.
2. ಯೂನಿಯನ್ ಜೊತೆ ಕೆಲಸದ ಹೊರೆ ಬಗ್ಗೆ ಮಾತುಕತೆ ಮಾಡಿ ಒಪ್ಪಂದ ಮಾಡಬೇಕು
3. ಈ ಅವಧಿಯ ವಜಾ, ಅಮಾನತು ಆದೇಶ, ಚಾರ್ಜ್ಶೀಟ್ಗಳನ್ನು ಹಿಂತೆಗೆದುಕೊಳ್ಳಬೇಕು,
4. ವಾರದಲ್ಲಿ 5 ದಿನಗಳ ಕೆಲಸ ಮರು ಸ್ಥಾಪನೆ.
5. ನೇರವಾಗಿ ಉತ್ಪಾದನೆಯಲ್ಲಿ ಗುತ್ತಿಗೆ ಕಾರ್ಮಿಕರನ್ನು ಬಳಸುವುದು ನಿಲ್ಲಿಸಬೇಕು.
6. ನ್ಯಾಯಕ್ಕಾಗಿ ಹೋರಾಡುವ ಸಂಕಲ್ಪದಲ್ಲಿ ಕಾರ್ಮಿಕರು ಒಂದಾಗಿದ್ದಾರೆ ಎಂದು ಕಾರ್ಮಿಕ ಸಂಘಟನೆ ತನ್ನ ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.
ಮಂಗಳವಾರ (ಮಾ.2) ಟಿಕೆಎಂ ಪತ್ರಿಕಾ ಪ್ರಕಟಣೆ ಹೊರಡಿಸಿ, ಟೊಯೊಟಾ ಕಾರ್ಮಿಕರ ಪ್ರತಿಭಟನೆ ಅಂತ್ಯಗೊಂಡಿದೆ. ಕಾರ್ಮಿಕರು ಕೆಲಸಕ್ಕೆ ಹಾಜರಾಗಲಿದ್ದಾರೆ ಎಂದು ತಿಳಿಸಿತ್ತು.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications