50ನೇ ದಿನಕ್ಕೆ ಕಾಲಿಟ್ಟ ಟೊಯೊಟಾ ಕಾರ್ಮಿಕರ ಹೋರಾಟ: ರಕ್ತದಾನ ಚಳುವಳಿ
ರಾಮನಗರ, ಡಿಸೆಂಬರ್ 28: ಏಷ್ಯಾದ ಅತಿ ದೊಡ್ಡ ಕಾರು ತಯಾರಿಕಾ ಕಂಪನಿ ಬಿಡದಿಯ ಟೊಯೊಟಾ ಕಿರ್ಲೋಸ್ಕರ್ ಕಾರ್ಮಿಕರು ಮತ್ತು ಆಡಳಿತ ಮಂಡಳಿಯ ಬಿಕ್ಕಟ್ಟು 50ನೇ ದಿನಕ್ಕೆ ಕಾಲಿಟ್ಟಿದೆ. 50ನೇ ದಿನದ ಹೋರಾಟದ ಅಂಗವಾಗಿ ಕಾರ್ಮಿಕರು "ರಕ್ತ ಕೊಟ್ಟೇವು ಸ್ವಾಭಿಮಾನ ಬಿಡೆವು "ಎಂದು ವಿನೂತನವಾಗಿ ರಕ್ತದಾನ ನಡೆಸಿದರು.
ಕಳೆದ 50 ದಿನಗಳಿಂದ ಕಾರ್ಮಿಕರು ವಿಭಿನ್ನವಾದ ಹೋರಾಟಗಳನ್ನು ಮಾಡುತ್ತಾ ಬಂದಿದ್ದು, ಸೋಮವಾರದಂದು ಕಾರ್ಮಿಕರು ಸ್ವಾಭಿಮಾನದ ಹೋರಾಟದ ಅಂಗವಾಗಿ ಬೃಹತ್ ರಕ್ತದಾನ ಚಳುವಳಿ ಮಾಡಿದರು.
ಹೋರಾಟದ ಜೊತೆಗೆ ಕಾರ್ಖಾನೆಯಲ್ಲಿ ಅಕಾಲಿಕ ಮರಣ ಹೊಂದಿದ 7 ಜನ ಕಾರ್ಮಿಕರ ಸ್ಮರಣಾರ್ಥವಾಗಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಸರಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ವಿನೂತನ ಹೋರಾಟಗಳನ್ನು ನಡೆಸುತ್ತಿದ್ದು, ಸರ್ಕಾರ ಹಾಗೂ ಕಂಪನಿಯ ಆಡಳಿತಗೆ ಕಾರ್ಮಿಕರ ಕೂಗು ಕೇಳುತ್ತಿಲ್ಲ ಎಂದು ಆರೋಪಿಸಿದರು.

ಟೊಯೊಟಾ ಕಂಪನಿಯ ಪಕ್ಕದಲ್ಲೇ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಟೊಯೊಟಾ ಕಂಪನಿಯಲ್ಲಿ ಸುಮಾರು 3500 ಕಾರ್ಮಿಕರಿದ್ದು, ಇದರಲ್ಲಿ 2000 ಮಂದಿ ರಕ್ತದಾನ ಮಾಡಲಿದ್ದು, ಈ ಶಿಬಿರವನ್ನು 3 ದಿನಗಳ ಕಾಲ ನಡೆಸಲಾಗುವುದು. ನಮ್ಮ ರಕ್ತ ನಿಧಿ ಕೇಂದ್ರದಿಂದ ಎಲ್ಲಾ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಇಂದು 500 ಕಾರ್ಮಿಕರು ರಕ್ತದಾನ ಮಾಡುವ ನಿರೀಕ್ಷೆ ಇದೆ ಎಂದು ರಕ್ತನಿಧಿ ಕೇಂದ್ರದ ರಾಮಲಿಂಗಯ್ಯ ತಿಳಿಸಿದರು.
ಒಟ್ಟಾರೆ ಟೊಯೊಟಾ ಕಾರ್ಮಿಕರು ಒಂದಲ್ಲ ಒಂದು ರೀತಿಯಲ್ಲಿ ವಿಭಿನ್ನ ಪ್ರತಿಭಟನೆಗಳನ್ನು ಮಾಡುತ್ತಾ ರಾಜ್ಯ ಸರಕಾರದ ಗಮನ ಸೆಳೆಯಲು ಮುಂದಾಗಿದ್ದಾರೆ. ಇಷ್ಟಾದರೂ ಕೂಡ ಆಡಳಿತ ಮಂಡಳಿಯಾಗಲಿ, ಸರಕಾರವಾಗಲಿ ಕಾರ್ಮಿಕರ ಸಮಸ್ಯೆಗೆ ಸ್ಪಂದಿಸದಿಸಿಲ್ಲ.

ಟೊಯೊಟಾ ಆಡಳಿತ ಮಂಡಳಿ ಈಗಾಗಲೇ ಅಸಿಶ್ತಿನ ಹೆಸರಿನಲ್ಲಿ 65 ಮಂದಿ ಕಾರ್ಮಿಕರನ್ನು ಅಮಾನತು ಮಾಡಿದೆ. ಹಾಗಾಗಿ ಕಾರ್ಮಿಕರು ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ಮುಂದುವರೆಸಿದ್ದೇವೆ ಎಂದು ಕಾರ್ಮಿಕರ ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್ ಬೇಸರ ವ್ಯಕ್ತಪಡಿಸಿದರು
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications