ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿಸಿಎಂ ಎದುರು ಹೋರಾಟ ನಡೆಸಿದ ಟೊಯೋಟಾ ಕಾರ್ಮಿಕರು

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಜನವರಿ 08: ಬಿಡದಿ ಟೊಯೋಟಾ ಘಟಕದ ಕಾರ್ಮಿಕರು ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಸಾಗುವ ದಾರಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರು.

ಟೊಯೋಟಾ ಕಾರ್ಮಿಕರು ನೆಡೆಸುತ್ತಿರುವ ಹೋರಾಟ 61ನೇ ದಿನಕ್ಕೆ ಕಾಲಿಟ್ಟಿದೆ. ಬಿಕ್ಕಟ್ಟು ಪರಿಹರಿಸದ ಸರ್ಕಾರ ನಡೆ ಖಂಡಿಸುವ ಭಿತ್ತಿಪತ್ರಗಳನ್ನು ಹಿಡಿದು ಶುಕ್ರವಾರ ಕಾರ್ಮಿಕರು ಡಿಸಿಎಂ ಸಂಚಾರ ಮಾಡುತ್ತಿದ್ದ ರಸ್ತೆಯ ಎರಡು ಬದಿಯಲ್ಲಿ ನಿಂತು ಆಕ್ರೋಶ ವ್ಯಕ್ತಪಡಿಸಿದರು.

ಹೋರಾಟ ತೀವ್ರಗೊಳಿಸಿದ ಬಿಡದಿ ಘಟಕದ ಟೊಯೋಟಾ ಕಾರ್ಮಿಕರುಹೋರಾಟ ತೀವ್ರಗೊಳಿಸಿದ ಬಿಡದಿ ಘಟಕದ ಟೊಯೋಟಾ ಕಾರ್ಮಿಕರು

ಕಾರ್ಮಿಕರು ಮತ್ತು ಆಡಳಿತ ಮಂಡಳಿಯ ತಿಕ್ಕಾಟ 61ನೇ ದಿನಕ್ಕೆ ಕಾಲಿಟ್ಟಿದೆ. ಬಿಕ್ಕಟ್ಟು ಬಗೆಹರಿಸಲು ಸರ್ಕಾರ ಮಧ್ಯ ಪ್ರವೇಶ ಮಾಡದಿರುವುದನ್ನು ಖಂಡಿಸಿ ಕಣ್ಣಿಗೆ ಕಪ್ಪು ಬಟ್ಟೆಯನ್ನು ಕಟ್ಟಿಕೊಂಡು, ಕೈಯಲ್ಲಿ ಭಿತ್ತಿ ಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.

ಮಳೆಯಲ್ಲೂ ಮುಂದುವರೆದ ಟೊಯೋಟಾ ಕಾರ್ಮಿಕರ ಹೋರಾಟ ಮಳೆಯಲ್ಲೂ ಮುಂದುವರೆದ ಟೊಯೋಟಾ ಕಾರ್ಮಿಕರ ಹೋರಾಟ

Toyota Workers Protest In Front Of Dr Ashwath Narayan

ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ್ ರಾಮನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ್ದರು. ಉಪಮುಖ್ಯಮಂತ್ರಿಗಳು ಬೆಂಗಳೂರಿಗೆ ತೆರಳುವ ಮಾರ್ಗದಲ್ಲಿ ಆದಿಚುಂಚನಗಿರಿ ಮಠದ ಮುಂಭಾಗದ ಹೆದ್ದಾರಿಯಲ್ಲಿ ನೂರಾರು ಕಾರ್ಮಿಕರು ಕಪ್ಪು ಬಟ್ಟೆ ಕಣ್ಣಿಗೆ ಕಟ್ಟಿಕೊಂಡು ರಸ್ತೆಯ ಬದಿ ನಿಂತು ಆಕ್ರೋಶ ಹೊರಹಾಕಿದರು.

ಬಿಡದಿ ಟೊಯೋಟಾ ಘಟಕ ಬಂದ್; ಕಾರ್ಮಿಕರ ನೆರವಿಗೆ ಬಂದ ಸಿಎಂ ಬಿಡದಿ ಟೊಯೋಟಾ ಘಟಕ ಬಂದ್; ಕಾರ್ಮಿಕರ ನೆರವಿಗೆ ಬಂದ ಸಿಎಂ

ಟೊಯೋಟಾ ಕಿರ್ಲೋಸ್ಕರ್ ಆಡಳಿತ ಮಂಡಳಿಯ ಅವೈಜ್ಞಾನಿಕ ಕೆಲಸದ ವಿಧಾನಗಳಿಗೆ ಸರ್ಕಾರ ಏಕಪಕ್ಷೀಯ ಬೆಂಬಲ ನೀಡುತ್ತಾ, ಕಾರ್ಮಿಕರ ಕೂಗಿನ ಕಡೆ ನಿರ್ಲಕ್ಷ್ಯ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಕಾರ್ಮಿಕರು ಆರೋಪಿಸಿದರು.

Toyota Workers Protest In Front Of Dr Ashwath Narayan

ಈ ಪುಟಾಣಿಯ ತೊದಲು ನುಡಿ ಕೇಳಿ ಮೂರು ವರ್ಷವಾಯಿತುಈ ಪುಟಾಣಿಯ ತೊದಲು ನುಡಿ ಕೇಳಿ ಮೂರು ವರ್ಷವಾಯಿತು

ಟೊಯೋಟಾ ಕಾರ್ಮಿಕರು, ಕಂಪನಿಯ ನಿರಂಕುಶ ಧೋರಣೆಗಳ ವಿರುದ್ಧ ಸ್ವಾಭಿಮಾನಿ ಹೋರಾಟದ ಅಂಗವಾಗಿ ಕಾರ್ಮಿಕರು ಹಮ್ಮಿಕೊಂಡಿರುವ ಹೋರಾಟವೂ 61ನೇ ದಿನಕ್ಕೆ ಕಾಲಿಟ್ಟಿದೆ ನಮ್ಮ ಸಮಸ್ಯೆ ಇತ್ಯರ್ಥವಾಗುವ ವರೆಗೆ ನಮ್ಮ ಹೋರಾಟ ಮುಂದು ವರೆಯುತ್ತದೆ ಎಂದು ಕಾರ್ಮಿಕ ಮುಖಂಡರು ತಿಳಿಸಿದರು.

English summary
Toyota Kirloskar Motors (TKM) plant workers in Bidadi protest at Ramanagara road in the time of Deputy chief minister of Karnataka Dr. Ashwath Narayan traveling.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X