ರಾಮನಗರ: ಮುಷ್ಕರ ನಿರತ ಸಾರಿಗೆ ನೌಕರರಿಗೆ ವರ್ಗಾವಣೆ ಶಿಕ್ಷೆ
ರಾಮನಗರ, ಏಪ್ರಿಲ್ 10: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇದೀಗ ರಾಜ್ಯ ಸರ್ಕಾರ ಪ್ರತಿಭಟನಾನಿರತ ಸಾರಿಗೆ ನೌಕರರ ವಿರುದ್ಧ ವರ್ಗಾವಣೆ ಅಸ್ತ್ರ ಪ್ರಯೋಗಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿ, ಚಾಲನಾ ಸಿಬ್ಬಂದಿ ಮತ್ತು ನಿರ್ವಹಣಾ ಸಿಬ್ಬಂದಿಯ ಆಡಳಿತಾತ್ಮಕ ವರ್ಗಾವಣೆ ಹೆಸರಿನಲ್ಲಿ ದೂರದ ಡಿಪೋಗಳಿಗೆ ವರ್ಗಾವಣೆ ಮಾಡುವ ಮೂಲಕ ಬೆದರಿಕೆಯ ತಂತ್ರ ಪ್ರಯೋಗಿಸಿದೆ.

ರಾಮನಗರ ಜಿಲ್ಲೆಯ ಸುಮಾರು 11 ಮಂದಿ ಸಾರಿಗೆ ನೌಕರರನ್ನು ದೂರದ ಪುತ್ತೂರು ಬಸ್ ಡಿಪೋಗೆ ವರ್ಗಾವಣೆ ಮಾಡಿ ಕೇಂದ್ರ ಕಚೇರಿ ಆದೇಶ ಹೊರಡಿಸಿದೆ. ನೌಕರರನ್ನು ಸಾರ್ವಜನಿಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ ಎಂದು ಸಾರಿಗೆ ಕೇಂದ್ರ ಕಚೇರಿ ಸಮಾಜಾಯಿಸಿ ನೀಡಿದೆ.

ಸಾರಿಗೆ ನೌಕರರ ಹೋರಾಟ ಹತ್ತಿಕ್ಕಲು ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದ್ದು, ಪ್ರಾರಂಭದಲ್ಲಿ ಪ್ರತಿಭಟನೆಗೆ ಮುಂದಾದರೆ ಅಮಾನತ್ತು ಮಾಡುವ ಎಚ್ಚರಿಕೆ ನೀಡಿದ ಸಾರಿಗೆ ಇಲಾಖೆ, ಎರಡನೇ ಬಾರಿಗೆ ಕೆಲಸಕ್ಕೆ ಹಾಜರಾಗಿ ಇಲ್ಲವೇ ವಸತಿ ಗೃಹ ಖಾಲಿ ಮಾಡಿ ಎಂದು ಬೆದರಿಕೆಯೊಡ್ಡಿತ್ತು. ಇದಕ್ಕೆ ಸೊಪ್ಪು ಹಾಕದ ನೌಕರರ ಮೇಲೆ ವರ್ಗಾವಣೆ ಅಸ್ತ್ರ ಪ್ರಯೋಗಿಸಿದೆ.
Recommended Video
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications