ರಾಮನಗರ: ಅರ್ಕಾವತಿ ನದಿಯಲ್ಲಿ ಕೊಚ್ಚಿಹೋದ ಬೈಕ್ ಸವಾರರು
ರಾಮನಗರ, ನವೆಂಬರ್ 21: ಬೈಕ್ ನಲ್ಲಿ ನದಿ ದಾಟುತ್ತಿದ್ದ ಬೈಕ್ ಸವಾರರು ನಿಯಂತ್ರಣ ತಪ್ಪಿ ಬಿದ್ದು ನೀರುಪಾಲಾಗಿರುವ ಘಟನೆ ರಾಮನಗರ ಜಿಲ್ಲೆಯ ಕೈಲಾಂಚ ಹೋಬಳಿಯ ಹುಲಿಕೆರೆ ಗ್ರಾಮ ಹಾಗೂ ಕನಕಪುರ ರಸ್ತೆ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿರುವ ಅರ್ಕಾವತಿ ನದಿಯಲ್ಲಿ ನಡೆದಿದೆ.
ರಾಮನಗರದ ಯಾರಬ್ ನಗರ ನಿವಾಸಿಗಳಾದ ಜುಲ್ಪಿಕಾರ್ (20), ಮತಿನ್ (22) ಎಂಬುವರೇ ಘಟನೆಯಲ್ಲಿ ಮೃತಪಟ್ಟ ಬೈಕ್ ಸವಾರರು.

ಇವರು ಸೋಮವಾರ(ನ.20) ಮಧ್ಯಾಹ್ನ 3ಗಂಟೆಯ ವೇಳೆಯಲ್ಲಿ ಹುಲಿಕೆರೆ ಗ್ರಾಮಕ್ಕೆ ಬಂದಿದ್ದರು. ಅಲ್ಲದೆ ಕನಕಪುರ ರಸ್ತೆಗೆ ತೆರಳಲು ಅಡ್ಡದಾರಿಯಾಗಿರುವ ಅರ್ಕಾವತಿ ನದಿಯನ್ನು ದಾಟಿ ಸಂಚರಿಸಲು ಮುಂದಾಗಿದ್ದು, ಅದರಂತೆ ನದಿ ನೀರನ್ನು ಲೆಕ್ಕಿಸದೆ ಬೈಕ್ ಚಲಾಯಿಸಿಕೊಂಡು ಹೋಗುವ ದುಸ್ಸಾಹಸ ಮಾಡಿದ್ದಾರೆ. ಸ್ವಲ್ಪ ದೂರ ನದಿಯಲ್ಲೇ ಬೈಕ್ ಚಲಾಯಿಸಿಕೊಂಡು ಹೋಗಿದ್ದಾರೆ. ಈ ವೇಳೆ ನೀರಿನ ಆಳ ಅರಿಯದೆ ಮುಂದೆ ತೆರಳುವಾಗ ನೀರಿನ ರಭಸಕ್ಕೆ ಆಯ ತಪ್ಪಿ ಬೈಕ್ ನಿಂದ ನೀರಿಗೆ ಬಿದ್ದು, ಕೊಚ್ಚಿಕೊಂಡು ಹೋಗಿದ್ದಾರೆ.
ದಡದಲ್ಲಿದ್ದ ಕೆಲವು ಸ್ಥಳೀಯರು ಈ ಘಟನೆಯನ್ನು ನೋಡಿದ್ದಾರೆ. ಅಲ್ಲದೆ ನೀರಿನಲ್ಲಿ ಮುಳುಗುತ್ತಿದ್ದ ಅವರನ್ನು ರಕ್ಷಿಸಲು ಮುಂದಾದರಾದರೂ ಪ್ರಯೋಜನವಾಗಲಿಲ್ಲ. ಹೀಗಾಗಿ ಕೂಡಲೇ ಪೊಲೀಸ್ ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಆದರೆ ಅವರು ಬರುವ ವೇಳೆಗೆ ಯುವಕರಿಬ್ಬರೂ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು.

ತಕ್ಷಣ ಈಜುಗಾರರ ಸಹಾಯದಿಂದ ತೆಪ್ಪದಲ್ಲಿ ಅಗ್ನಿಶಾಮಕ ಸಿಬ್ಬಂದಿ ಶವದ ಹುಡುಕಾಟ ನಡೆಸಿದ್ದು, ಜುಲ್ಪಿಕರ್ ಎಂಬಾತನ ಶವ ಸಂಜೆ ವೇಳೆ ದೊರೆತಿದೆಯಾದರೂ ಮತಿನ್ ಶವ ದೊರೆಯಲಿಲ್ಲ. ಹೀಗಾಗಿ ಆತನ ಶವದ ಕಾರ್ಯಾಚರಣೆಯನ್ನು ನಿನ್ನೆ ರಾತ್ರಿ ನಿಲ್ಲಿಸಿದ್ದು, ಇಂದು ಮುಂದುವರೆಸಲಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ತಹಶೀಲ್ದಾರ್ ಮಾರುತಿ ಪ್ರಸನ್ನ, ಸರ್ಕಲ್ ಇನ್ಸ್ ಸ್ಪೆಕ್ಟರ್ ರಮೇಶ್, ಗ್ರಾಮಾಂತರ ಠಾಣೆ ಸಬ್ಇನ್ಸ್ಪೆಕ್ಟರ್ ದೀಪಕ್, ಕೈಲಾಂಚ ಉಪತಹಶೀಲ್ದಾರ್ ವಿಲಿಯಂ, ರಾಜಸ್ವ ನಿರೀಕ್ಷಕ ಆರ್.ವಿ.ಸ್ವಾಮಿ ಮುಂತಾದವರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ರೋದನ ಮುಗಿಲು ಮುಟ್ಟಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications