ಸರ್ವಧರ್ಮೀಯರನ್ನು ಕರೆದು ಭೋಜನ ಆಯೋಜಿಸುತ್ತೇವೆ: ಪೇಜಾವರ ಶ್ರೀ
ರಾಮನಗರ, ಜೂನ್. 13: ಇಫ್ತಿಯಾರ್ ಕೂಟಕ್ಕೆ ಯಾವ ವಿರೋಧವೂ ಇಲ್ಲ. ಕೆಲವರು ಮಾತ್ರ ಟೀಕೆ ಮಾಡಬಹುದು ಅಷ್ಟೇ, ನಮ್ಮದು ಸ್ನೇಹಕೂಟ ಭೋಜನ. ಇಫ್ತಿಯಾರ್ ಕೂಟವಲ್ಲ. ಇದೇ ವರ್ಷ ಸರ್ವಧರ್ಮೀಯರನ್ನೆಲ್ಲಾ ಕರೆದು ಭೋಜನ ಆಯೋಜಿಸುತ್ತೇವೆ ಎಂದು ಉಡುಪಿಯ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಶ್ರೀಗಳು ತಿಳಿಸಿದರು.
ರಾಮನಗರಕ್ಕೆ ಮಂಗಳವಾರ ಖಾಸಗಿ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಆರ್ಎಸ್ಎಸ್ ಮುಖಂಡರು ಅದಕ್ಕೆ ಯಾವ ವಿರೋಧ, ಅಭ್ಯಂತರವೂ ಇಲ್ಲವೆಂದಿದ್ದಾರೆ.
ರಾಜಕೀಯ ಪಕ್ಷದವರು, ಸಮಾಜದ ಉನ್ನತ ಸ್ಥಾನದಲ್ಲಿರುವವರು ಸಹ ಈ ಕೂಟದ ಬಗ್ಗೆ ವಿರೋಧ ವ್ಯಕ್ತಪಡಿಸಿಲ್ಲ. ಇದು ಇಫ್ತಿಯಾರ್ ಕೂಟವಲ್ಲ ಸ್ನೇಹಕೂಟವಾದ್ದರಿಂದ ಇದೇ ಸಮಯದಲ್ಲಿ ಆಗಬೇಕು ಅಂತಿಲ್ಲ. ಯಾವಾಗ ಬೇಕಾದರೂ ಆಗಬಹುದು.

ಕ್ರಿಶ್ಚಿಯನ್ನರು, ಮುಸಲ್ಮಾನರು, ಅಲ್ಪಸಂಖ್ಯಾತರು ಸೇರಿದಂತೆ ಸರ್ವಧಮೀಯರನ್ನೇಲ್ಲ ಕರೆದು ಭೋಜನ ಕೊಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ರಾಜಕೀಯ ವಿಚಾರವಾಗಿ ನಾವಾಗಿಯೇ ಪ್ರವೇಶಿಸುವುದಿಲ್ಲ, ನಾವು ದೇಶದ ಹಿತದೃಷ್ಟಿಯಿಂದ ಸಲಹೆ ನೀಡುತ್ತೇವೆ. ಅಲ್ಲದೇ, ಪಕ್ಷ ಚುನಾವಣಾ ರಾಜಕೀಯ ಮಾಡುವುದಿಲ್ಲ ಎಲ್ಲ ಪಕ್ಷದವರು ನಮ್ಮ ಸಂಪರ್ಕದಲ್ಲಿದ್ದಾರೆ.

ನಮ್ಮ ಕೆಲಸ ಧರ್ಮ, ಆಧ್ಯಾತ್ಮಿಕ ಪ್ರಚಾರ ಸಮಾಜಸೇವೆ ಮಾಡುವುದು. ಇನ್ನು ಸಲಹೆ ಸ್ವೀಕರಿಸುವುದು, ಬಿಡುವುದು ಅವರರವರ ಇಷ್ಟ ಎಂದ ಶ್ರೀಗಳು ಪ್ರಸ್ತುತ ಜಾತಿ ರಾಜಕೀಯದ ಬಗ್ಗೆ ನಮಗೆ ಬೇಸರವಿದೆ ಎಂದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications