ಒಕ್ಕಲಿಗ ಸಮಾಜವನ್ನು 2Aಗೆ ಸೇರಿಸಲು ಸರ್ಕಾರಕ್ಕೆ ಒತ್ತಾಯ

ರಾಮನಗರ, ನವೆಂಬರ್ 27: ನಾಡಿಗೆ ಅನ್ನ ನೀಡಲು ಶ್ರಮಿಸುತ್ತಿರುವ ಒಕ್ಕಲಿಗ ಸಮಾಜವನ್ನು ಪ್ರವರ್ಗ 2a ಗೆ ಸೇರಿಸುವಂತೆ ರಾಮನಗರದ ಮಾಜಿ ಶಾಸಕ ಕೆ.ರಾಜು ಸರ್ಕಾರವನ್ನು ಆಗ್ರಹಿಸಿದರು.

ರಾಮನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದರು. ಈ ವೇಳೆ ಈಗಾಗಲೇ ವೀರಶೈವ ಸಮಾಜವನ್ನು ಪ್ರವರ್ಗ 2aಗೆ ಸೇರಿಸಿರುವುದನ್ನು ಒಕ್ಕಲಿಗ ಸಮಾಜದ ಮುಖಂಡರು ಸ್ವಾಗತಿಸಿಸಿದರು.

ನಾಡಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತರಿದ್ದು, ಅದೇ ಸಂಖ್ಯೆಯಲ್ಲಿ ಒಕ್ಕಲಿಗ ಸಮಾಜದವರು ಇದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೇವಲ ತಮ್ಮ ಸಮಾಜವನ್ನು ಮಾತ್ರ 2a ಗೆ ಸೇರಿಸಿದ್ದು ಸರಿಯಿಲ್ಲ. ಇನ್ನು ಕೇವಲ ಒಂದು ವಾರದ ಅವಧಿಯೊಳಗೆ ನಿರ್ಧಾರ ಮಾಡದಿದ್ದರೆ ಪ್ರತಿಭಟನೆಗೆ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

Urged The Government To Add The Okkaliga Community To 2a

ಒಕ್ಕಲಿಗ ಸಮಾಜಕ್ಕೆ ಅನ್ಯಾಯವಾಗಿದ್ದು, ಬಿಜೆಪಿಯಲ್ಲಿರುವ ಒಕ್ಕಲಿಗ ಸಮಾಜದ ಮಂತ್ರಿಗಳು ಧ್ವನಿ ಎತ್ತಬೇಕು ಹಾಗೂ ಮುಖ್ಯಮಂತ್ರಿಗಳ ಮೇಲೆ ಒತ್ತಡ ತಂದು ಒಕ್ಕಲಿಗ ಸಮಾಜವನ್ನು 2a ವರ್ಗಕ್ಕೆ ಸೇರಿಸಲು ಮುಂದಾಗಬೇಕು ಎಂದು ಒಕ್ಕಲಿಗ ಸಮಾಜದ ಮುಖಂಡರು ಕರೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ.ರಾಜು, ರಾಮನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಶೋಕ ಮತ್ತು ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗಾಣಗಲ್ ನಟರಾಜ್ ಉಪಸ್ಥಿತರಿದ್ದರು.

Recommended Video

      ಯಡಿಯೂರಪ್ಪಗೆ ತಲೆ ಕೆಟ್ಟಿದೆ!! | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+