ಕರ್ನಾಟಕಕ್ಕೆ ಕೇಂದ್ರದಿಂದ 50 ಸಾವಿರ ಕೋಟಿ ಅನುದಾನಕ್ಕೆ ವಾಟಾಳ್ ಒತ್ತಾಯ
Recommended Video
ರಾಮನಗರ, ಆಗಸ್ಟ್ 9: "ಉತ್ತರ ಕರ್ನಾಟಕದಲ್ಲಿ ಮಳೆಯಿಂದ ಆಗಿರುವ ಅನಾಹುತ ವೀಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬರಬೇಕು. ಹಾಗೂ ನೆರೆ ಸಂತ್ರಸ್ತರ ನೆರವಿಗೆ 50 ಸಾವಿರ ಕೋಟಿ ಪರಿಹಾರವನ್ನು ನೀಡಬೇಕು" ಎಂದು ಒತ್ತಾಯಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಶುಕ್ರವಾರ ರಾಮನಗರದಲ್ಲಿ ಪ್ರತಿಭಟನೆ ನಡೆಸಿದರು.
ಐಜೂರು ವೃತ್ತದಲ್ಲಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ನೀರು ತುಂಬಿದ ಕೊಡ ಹಾಗೂ ಹಂಡೆಗಳನ್ನು ಇಟ್ಟು ಪ್ರತಿಭಟನೆ ನಡೆಸಿದ ಅವರು, ಉತ್ತರ ಕರ್ನಾಟಕದ ನೆರವಿಗೆ 50 ಸಾವಿರ ಕೋಟಿ ನೀಡಬೇಕು, ಮಂತ್ರಿ ಮಂಡಲ ರಚಿಸಿ ಸಂತ್ರಸ್ತರ ನೆರವಿಗೆ ಮುಂದಾಗಬೇಕು. ಅಲ್ಲದೇ ರಾಜ್ಯದ ಎಲ್ಲ ಜನರು ಕೂಡಾ ಉತ್ತರ ಕರ್ನಾಟಕ ಸಂತ್ರಸ್ತರ ನೆರವಿಗೆ ಮುಂದಾಗಬೇಕು ಎಂದು ಘೋಷಣೆ ಕೂಗಿದರು.
ಇದೇ ವೇಳೆ ಮಾತನಾಡಿ, ಉತ್ತರ ಭಾರತದಲ್ಲಿ ನೆರೆ ಹಾವಳಿ ಉಂಟಾದರೆ ಪ್ರಧಾನಿಯವರು ವೈಮಾನಿಕ ವೀಕ್ಷಣೆ ಮಾಡುತ್ತಾರೆ, ಅಕ್ಕಪಕ್ಕದ ಆಂಧ್ರಪ್ರದೇಶ, ತಮಿಳುನಾಡಿಗೆ ಭೇಟಿ ನೀಡುತ್ತಾರೆ. ಆದರೆ ರಾಜ್ಯದಲ್ಲಿ ಆಗಿರುವ ಅನಾಹುತದ ಪ್ರಮಾಣ ವೀಕ್ಷಿಸಲು ಇನ್ನೂ ಭೇಟಿ ನೀಡಿಲ್ಲ. ರಾಜ್ಯ ಸರಕಾರವು ಸಂತ್ರಸ್ತರ ನೆರವಿಗೆ ಸರಿಯಾದ ಕೆಲಸ ಮಾಡುತ್ತಿಲ್ಲ, ಎಲ್ಲ ಶಾಸಕರು ಆಯಾ ಕ್ಷೇತ್ರಗಳ ಜನರ ನೆರವಿಗೆ ಮುಂದಾಗಬೇಕು ಎಂದರು.

ಕೇಂದ್ರ ಸರಕಾರ ಕೂಡಲೇ 50 ಸಾವಿರ ಕೋಟಿ ಅನುದಾನವನ್ನು ಘೋಷಣೆ ಮಾಡಬೇಕು. ನವ ಕರ್ನಾಟಕದ ನಿರ್ಮಾಣ ಆಗಬೇಕಿದೆ. ಇನ್ನು ಮಂತ್ರಿ ಮಂಡಲವನ್ನು ರಚನೆ ಮಾಡದ ಸಿಎಂ ಯಡಿಯೂರಪ್ಪನವರು ಏನೂ ರಾವಣನಲ್ಲ. ಅವರಿಗೆ ಹತ್ತು ತಲೆ, ಇಪ್ಪತ್ತು ಕೈಗಳೇನೂ ಇಲ್ಲ. ಎಲ್ಲ ಶಾಸಕರು ಸಂತ್ರಸ್ತರ ನೆರವಿಗೆ ಮುಂದಾಗಬೇಕು. ರಾಜ್ಯದ ಜನರು ಕೂಡ ಉತ್ತರ ಕರ್ನಾಟಕದ ಜನರ ನೆರವಿಗೆ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ನೀಡಬೇಕು ಎಂದು ಮನವಿ ಮಾಡಿದರು.
-
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026: ಸಿಎಸ್ಕೆ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯಕ್ಕೆ ಮಳೆ ಭೀತಿ ಇದ್ಯಾ? ಹವಾಮಾನ ಇಲಾಖೆ ಹೇಳೋದೇನು -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ









Click it and Unblock the Notifications