Channapatna: ಚನ್ನಪಟ್ಟಣದಿಂದ ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ಅಥವಾ ನಿಖಿಲ್ ಕುಮಾರಸ್ವಾಮಿ?
ಚನ್ನಪಟ್ಟಣ, ಜೂನ್. 22: ಲೋಕಸಭ ಚುನಾವಣೆಯಲ್ಲಿ ಚನ್ನಪಟ್ಟಣದ ಶಾಸಕರಾಗಿದ್ದ ಎಚ್ ಡಿ ಕುಮಾರಸ್ವಾಮಿ ಅವರು ಮಂಡ್ಯದಿಂದ ನಿಂತು ಗೆಲುವು ಕಂಡಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಚನ್ನಪಟ್ಟಣದಿಂದ ವಿಧಾನಸಭಾ ಉಪಚುನಾವಣೆ ನಡೆಯುವುದು ಪಕ್ಕ. ಈಗ ಉಪಚುನಾವಣೆಯಲ್ಲಿ ಯಾವ ಪಕ್ಷದಿಂದ ಯಾರು ಸ್ಪರ್ಧಿ ಎಂಬುದು ಸಕತ್ ಚರ್ಚೆಯಲ್ಲಿದೆ.
ಕಾಂಗ್ರೆಸ್ ಅಭ್ಯರ್ಥಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸ್ಪರ್ಧಿಸಲು ಉತ್ಸುಕರಾಗಿದ್ದಾರೆ ಎಂದು ಸುಳಿವು ನೀಡಿರುವುದು ಉಪಚುನಾವಣೆಗೆ ಸಕತ್ ಕುತೂಹಲ ತುಂಬಿದೆ. ಅವರಿಗೆ ಟಕ್ಕರ್ ನೀಡಲು ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಾಯಕರು ಸಕತ್ ಪ್ಲ್ಯಾನ್ ಮಾಡುತ್ತಿದ್ದಾರೆ. ಯಾರನ್ನು ಅಭ್ಯರ್ಥಿ ಮಾಡುವುದು ಎಂಬುದು ಹೈಕಮಾಂಡ್ ಸೇರಿದಂತೆ ಮೈತ್ರಿಕೂಟದ ನಾಯಕರನ್ನು ಚಿಂತೆಗೆ ತಳ್ಳಿದೆ.

ಬೆಂಗಳೂರು ಗ್ರಾಮಾಂತರದ ಯಶಸ್ಸು ಪಡೆಯಲು ಎಚ್ಡಿಕೆ ತಯಾರು!?
ಇನ್ನು, ಬೆಂಗಳೂರು ಗ್ರಾಮಾಂತರ ಲೋಕಸಭೆಯಲ್ಲಿ ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಅವರನ್ನು ಡಾ ಸಿಎನ್ ಮಂಜುನಾಥ್ ಸೋಲಿಸಿದ್ದಾರೆ. ತಮ್ಮ ಸಂಬಂಧಿಯ ಗೆಲುವನ್ನು ತನಗೆ ಬೇಕಾದಂತೆ ಮಾಡಿಕೊಳ್ಳಲು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಎಚ್ಡಿ ಕುಮಾರಸ್ವಾಮಿ ಪ್ರಯತ್ನಿಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರದ ಫಲಿತಾಂಶವನ್ನು ಮತ್ತೆ ಚನ್ನಪಟ್ಟಣದಲ್ಲಿಯೂ ತರಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಕೈಜೋಡಿಸುವುದಾಗಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಎಚ್ಡಿ ಕುಮಾರಸ್ವಾಮಿ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿ ಕರ್ನಾಟಕ ರಾಜಕೀಯದ ಕುರಿತು ಚರ್ಚೆ ನಡೆಸಿರುವುದಾಗಿ ಹೇಳಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಡಿಸಿಎಂ ಆದ ಬಳಿಕ ಕಳೆದ ಒಂದೂವರೆ ವರ್ಷದಿಂದ ಡಿಕೆ ಶಿವಕುಮಾರ್ ಚನ್ನಪಟ್ಟಣಕ್ಕೆ ಹೋಗಿಲ್ಲ. ಈಗ ಕ್ಷೇತ್ರದ ಬಗ್ಗೆ ಅನುಕಂಪ ತೋರುತ್ತಿದ್ದಾರೆ. ಇದುವರೆಗೂ ಚನ್ನಪಟ್ಟಣವನ್ನು ಅಭಿವೃದ್ಧಿ ಪಡಿಸಲು ಯಾರು ತಡೆದರು..? ಸಂಸದರಾಗಿ ಡಿಕೆ ಶಿವಕುಮಾರ್ ಸಹೋದರನ ಕೊಡುಗೆ ಏನು? ನಮ್ಮ ಕಡೆಯಿಂದ ಯಾರು ಅಭ್ಯರ್ಥಿ ಎಂಬುದನ್ನು ಕಾಲವೇ ನಿರ್ಧರಿಸುತ್ತದೆ" ಎಂದು ತಿಳಿಸಿದ್ದಾರೆ.
ತಾನು ಆಕಾಂಕ್ಷಿ ಎನ್ನುತ್ತಿದ್ದಾರೆ ಎಂಎಲ್ಸಿ ಸಿಪಿ ಯೋಗೇಶ್ವರ
ಎಚ್ ಡಿ ಕುಮಾರಸ್ವಾಮಿ ಮಂಡ್ಯದಿಂದ ಗೆದ್ದು ಸಂಸದರಾದರೇ ಚನ್ನಪಟ್ಟಣ ನನಗೆ ಸಿಗುತ್ತದೆ ಎಂಬ ಆಸೆಯಿಂದ ಇದ್ದ ಸಿಪಿ ಯೋಗೇಶ್ವರ್ ಅವರು, ಚನ್ನಪಟ್ಟಣದಿಂದ ಸ್ಪರ್ಧಿಸಿದರೆ ಶಿವಕುಮಾರ್ ಅವರ ರಾಜಕೀಯ ಜೀವನ ಅಂತ್ಯವಾಗಲಿದೆ ಎಂದು ಬಿಜೆಪಿ ಎಂಎಲ್ಸಿ ಸಿಪಿ ಯೋಗೇಶ್ವರ ಆಕಾಂಕ್ಷಿಗಳಲ್ಲಿ ಒಬ್ಬರು ಎಂದು ಎಚ್ಚರಿಸಿದ್ದಾರೆ.

ಈಗ ಕನಕಪುರ ಶಾಸಕರಾಗಿರುವ ಡಿಕೆ ಶಿವಕುಮಾರ್, "ಜನರೇ ನನ್ನ ಶಕ್ತಿ, ಅವರೇ ನನ್ನ ರಾಜಕೀಯ ಭವಿಷ್ಯ ನಿರ್ಧರಿಸಬಲ್ಲರು. ನಾನು ರಾಮನಗರ ಜಿಲ್ಲೆಗೆ ಸೇರಿದವನು. ಅವರಿಗೆ ಋಣಿಯಾಗಿದ್ದೇನೆ. ನನಗೆ ಬೆಂಬಲ ನೀಡುವಂತೆ ನಾನು ಜನರನ್ನು ಕೇಳಿದ್ದೇನೆ ಮತ್ತು ಅವರು ನಿರ್ಧರಿಸುತ್ತಾರೆ" ಎಂದು ಡಿಕೆಶಿ ಹೇಳಿದ್ದಾರೆ.
ಇನ್ನು, ಡಿಕೆ ಶಿವಕುಮಾರ್ ಚನ್ನಪಟ್ಟಣದಿಂದ ಕಣಕ್ಕಿಳಿದರೆ ಕನಕಪುರ ಉಪಚುನಾವಣೆ ನಡೆಯುವ ಸಾಧ್ಯತೆ ಇರುವುದರಿಂದ ಇದು ರಾಷ್ಟ್ರೀಯ ಸಂಪತ್ತನ್ನು ವ್ಯರ್ಥ ಮಾಡಿದಂತಾಗುತ್ತದೆ ಎಂದು ಬಿಜೆಪಿ ಮುಖಂಡ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚನ್ನಪಟ್ಟಣ ಉಪಚುನಾವಣೆಯಲ್ಲಿ ಹೋರಾಟ ನಡೆಸುವುದಾಗಿ ಸ್ಪಷ್ಟಪಡಿಸಿದ್ದಾರೆ.
ಶಿವಕುಮಾರ್ ಚನ್ನಪಟ್ಟಣದಿಂದ ಸ್ಪರ್ಧಿಸುವ ಸಾಧ್ಯತೆ ಕಡಿಮೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಈ ಉಪಚುನಾವಣೆಯ ಅಭ್ಯರ್ಥಿಯನ್ನು ಜೆಡಿಎಸ್ ಜತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದಿದ್ದಾರೆ.












Click it and Unblock the Notifications