ರೈತನ ಕನಸಿಗೆ ತಣ್ಣೀರೆರಚಿದ ಗಜಪಡೆ: ಟೊಮೆಟೊ ಬೆಳೆ ನೆಲಸಮ ಮಾಡಿದ ಕಾಡಾನೆ
ರಾಮನಗರ, ಆಗಸ್ಟ್ 23: ಟೊಮೆಟೊ ಹಣ್ಣಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ. ಜಮೀನಲ್ಲಿ ಬಂಪರ್ ಬೆಳೆ. ಕಳೆದ ಕೆಲ ವರ್ಷಗಳಿದ್ದ ಸಂಕಷ್ಟದಿಂದ ಹೊರಬಂದು ಈ ಬಾರಿಯಾದರು ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದ ರೈತನ ಕನಸಿಗೆ ರಾತ್ರಿ ಕಳೆದು ಬೆಳಕು ಹರಿಯುವಷ್ಟರಲ್ಲಿ ಕಾಡಾನೆಗಳು ತಣ್ಣೀರೆರಚಿವೆ.
ಟೊಮೆಟೊ ಬೆಳೆದ ಜಮೀನಿಗೆ ನುಗ್ಗಿದ ಕಾಡಾನೆಗಳ ಹಿಂಡು ಅಪಾರ ಪ್ರಮಾಣದ ಬೆಳೆಯನ್ನು ನಾಶಪಡಿಸಿರುವ ಘಟನೆ ಬೆಂಬೆನಾಡು ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದಲ್ಲಿ ನಡೆದಿದೆ.

ಸಂಕಲಗೆರೆ ಗ್ರಾಮದ ನಾಗಣ್ಣ ಎನ್ನುವವರು ಗ್ರಾಮದ ಹೊರವಲಯದಲ್ಲಿರುವ ತಮ್ಮ ಮೂರು ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆ ಬೆಳೆದಿದ್ದರು. ಈಗಾಗಲೇ ಒಂದು ಬಾರಿ ಕಟಾವು ಮಾಡಿ ಮಾರಾಟ ಮಾಡಿದ್ದರು. ಇದೀಗ, ಮತ್ತೆ ಕಟಾವಿಗೆ ಸಿದ್ಧವಾಗಿದ್ದ ಟೊಮೆಟೊ ಬೆಳೆ ಮೇಲೆ ದಾಳಿ ಮಾಡಿದ ಗಜಪಡೆ ಸಂಪೂರ್ಣ ನಾಶ ಮಾಡಿವೆ.
ಕಳೆದ 15 ವರ್ಷಗಳಿಂದ ಚನ್ನಪಟ್ಟಣ ತಾಲೂಕಿನಲ್ಲಿ ಕಾಡಾನೆ ದಾಳಿ ಸಾಮಾನ್ಯವಾಗಿದ್ದರೂ, ಈ ಭಾಗದಲ್ಲಿ ಕಾಡಾನೆಗಳ ದಾಳಿಯಿಂದ ಬೆಳೆ ಹಾನಿ ಇದೇ ಮೊದಲು ಎನ್ನಬಹುದಾಗಿದೆ. ಈ ಹಿಂದೆ ಒಂದು ಬಾರಿ ಈ ಭಾಗದಲ್ಲಿ ಕಾಡಾನೆಗಳು ಪ್ರತ್ಯಕ್ಷಗೊಂಡಿದ್ದವು. ಆದರೆ, ಯಾವುದೇ ಬೆಳೆಹಾನಿ ಮಾಡಿರಲಿಲ್ಲ. ಆದರೆ ಮಂಗಳವಾರ ರಾತ್ರಿ ಜಮೀನಿನ ಮೇಲೆ ದಾಳಿ ಮಾಡಿರುವ ಕಾಡಾನೆಗಳು ಅರ್ಧದಷ್ಟು ಬೆಳೆಯನ್ನು ನಾಶಪಡಿಸಿವೆ. ಇದರಿಂದ ರೈತ ನಾಗಣ್ಣ ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಇನ್ನು ಕಾಡಾನೆ ದಾಳಿಗೆ ನಾಶವಾದ ಬೆಳೆಗೆ ಸರ್ಕಾರ ಪರಿಹಾರ ಕೊಡುತ್ತದೆ ಆದರೆ ಮಾರುಕಟ್ಟೆಯ ಧಾರಣೆಯಷ್ಟು ಬೆಳೆ ನಾಶ ಪರಿಹಾರವನ್ನು ಸರ್ಕಾರ ನೀಡುವುದು ಕನಸಿನ ಮಾತಾಗಿದೆ. ಹೀಗಾಗಿ ಕಾಡಾನೆ ದಾಳಿಯಿಂದ ನೆಲಸಮಗೊಂಡಿರುವ ಬೆಳೆಗೆ ಅರಣ್ಯ ಇಲಾಖೆ ಸೂಕ್ತ ಪರಿಹಾರ ನೀಡಬೇಕು ಎಂದು ಸಂಕಲಗೆರೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಪಟ್ಟಣದ ಅಂಚಿಗೆ ಬಂದ ಕಾಡಾನೆ ಹಿಂಡು
ರಾಮನಗರ ಜಿಲ್ಲೆಯಲ್ಲಿ ಕಳೆದ 15 -20 ವರ್ಷಗಳಿಂದ ಕಾಡಾನೆಗಳು ಹಾಗೂ ಮಾನವರ ನಡುವೆ ಸಂಘರ್ಷ ನಡೆಯುತ್ತಲೇ ಇದೆ. ಈ ಹಿಂದೆ ಕಾಡಾನೆಗಳು ಕಾಡಂಚಿನ ಗ್ರಾಮಗಳು ಹಾಗೂ ಜಮೀನುಗಳ ಮೇಲೆ ದಾಳಿ ಮಾಡಿ ಬೆಳೆ ನಾಶ ಮಾಡುತ್ತಿದ್ದವು. ಕಳೆದ ರಾತ್ರಿ ಸಂಕಲಗೆರೆ ಗ್ರಾಮದ ಜಮೀನಗಳಲ್ಲಿ ದಾಂಗುಡಿಯಿಟ್ಟು ಅಪಾರ ಬೆಳೆ ನಾಶ ಮಾಡಿದ ಕಾಡಾನೆಗಳ ಹಿಂಡು ಬೆಳಗಿನ ಜಾವಕ್ಕೆ ಪಟ್ಟಣದ ಅಪ್ಪಗೆರೆ ಗ್ರಾಮದ ಬಳಿ ಕೆರೆಯಲ್ಲಿ ಪ್ರತ್ಯಕ್ಷವಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಚನ್ನಪಟ್ಟಣದ ಅಪ್ಪಗೆರೆ ಬಡಾವಣೆಯ ಪಕ್ಷದ ಅರಸ ಕಟ್ಟೆಯ ನೀರಿನಲ್ಲಿ ಐದು ಕಾಡಾನೆಗಳ ಹಿಂಡು ಜಲಕ್ರೀಡೆಯಾಡುತ್ತಿರುವ ದೃಶ್ಯ ಬೆಳಗಿನಜಾವಾ ವಾಕಿಂಗ್ ಮಾಡುತ್ತಿದ್ದ ಜನರು ಗಮನಿಸಿದ್ದಾರೆ. ಬಳಿಕ ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದಾರೆ. ಕೂಡಲೇ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಜನರನ್ನು ನಿಯಂತ್ರಿಸುತ್ತಿದ್ದು, ಇಂದು ಸಂಜೆಯವರೆಗೆ ಕಾಡಾನೆಗಳನ್ನು ಕೆರೆಯ ಅಂಗಳದಲ್ಲೇ ಹೊರ ಬಾರದಂತೆ ತಡೆದು ಸಂಜೆ ಜನರ ಸಂಚಾರ ಕಡಿಮೆಯಾದ ನಂತರ ಕಾಡಿನತ್ತ ಓಡಿಸಲು ಅರಣ್ಯ ಇಲಾಖೆ ಮುಂದಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications